AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಆ್ಯಪ್! ಸ್ಟೆತೋಸ್ಕೋಪ್ ಬಳಸಿ ತಂತ್ರಜ್ಞಾನ ಆವಿಷ್ಕಾರ ಮಾಡಿದ ಮಂಗಳೂರಿನ ಯುವಕ

ಎಐ ತಂತ್ರಜ್ಞಾನ ಮತ್ತು ರೊಬೋಟಿಕ್ ವಿಜ್ಞಾನ ಇವತ್ತು ಇಡೀ ಜಗತ್ತನ್ನು ಆವರಿಸಿಕೊಳ್ಳುತ್ತಿದೆ. ಕಠಿಣ ಕೆಲಸಗಳನ್ನು ಸರಳಗೊಳಿಸುತ್ತಿದೆ. ಇದೇ ತಂತ್ರಜ್ಞಾನ ಬಳಸಿಕೊಂಡು ಮಂಗಳೂರಿನ ಯುವಕನೊಬ್ಬ ವಿಶೇಷ ಸಾಧನೆ ಮಾಡಿದ್ದಾನೆ. ಸ್ಟೆತೋಸ್ಕೋಪ್ ಬಳಸಿಕೊಂಡು ಹೊಟ್ಟೆ ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಆ್ಯಪ್ ಅಭಿವೃದ್ಧಿಪಡಿಸಿದ್ದಾನೆ!

ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಆ್ಯಪ್! ಸ್ಟೆತೋಸ್ಕೋಪ್ ಬಳಸಿ ತಂತ್ರಜ್ಞಾನ ಆವಿಷ್ಕಾರ ಮಾಡಿದ ಮಂಗಳೂರಿನ ಯುವಕ
ಹಸಿವು ಕಂಡು ಹಿಡಿದು ಊಟ ಆರ್ಡರ್ ಮಾಡುವ ಸಾಧನ (ಒಳಚಿತ್ರದಲ್ಲಿ ಸೋಹನ್ ರೈ)
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Dec 02, 2025 | 8:04 AM

Share

ಮಂಗಳೂರು, ಡಿಸೆಂಬರ್ 2: ಮಂಗಳೂರಿನ (Mangalore) ಬಿಜೈ ನಿವಾಸಿ, 23 ವರ್ಷ ವಯಸ್ಸಿನ ಸೋಹನ್ ರೈ (Sohan Rai) ಇದೀಗ ಸ್ಟೆತೋಸ್ಕೋಪ್ ಬಳಸಿಕೊಂಡು ವಿನೂತನ ತಂತ್ರಜ್ಞಾನ ಅಭಿವೃದ್ಧಿಪಡಿಸಿ ವಿಜ್ಞಾನ ವಲಯದ ಗಮನ ಸೆಳೆದಿದ್ದಾರೆ. ಮಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಸೇರಿದ್ದ ಇವರು, 5 ವರ್ಷ ಕಾಲೇಜಿಗೆ ಹೋಗಲು ಮನಸಿಲ್ಲದೆ, ಒಂದೂವರೆ ವರ್ಷಕ್ಕೇ ಕಾಲೇಜು ಬಿಟ್ಟಿದ್ದರು. ಎಂಜಿನಿಯರಿಂಗ್ ಸೇರುವುದಕ್ಕೂ ಮೊದಲು, ಅಂದರೆ ಕಳೆದ 7-8 ವರ್ಷಗಳ ಹಿಂದೆ ಈತ ಸ್ನೇಹಿತರ ಜೊತೆ ಸೇರಿ ಹೊಸ ಆವಿಷ್ಕಾರ ಮಾಡಬೇಕೆಂದು ಪ್ರಯತ್ನಿಸಲು ಆರಂಭಿಸಿದ್ದರು. ಎಐ ಮತ್ತು ರೊಬೋಟಿಕ್ ಎಂಜಿನಿಯರಿಂಗ್ ಮೇಲೆ ವರ್ಕ್ ಶಾಪ್ ಆರಂಭಿಸಿದ್ದರು. ಇದೀಗ ಸ್ಟೆತೋಸ್ಕೋಪ್ ಬಳಸಿ ಯಂತ್ರವೊಂದನ್ನು ತಯಾರಿಸಿದ್ದಾರೆ. ಇದನ್ನು ಹೊಟ್ಟೆಗೆ ಸಿಕ್ಕಿಸಿಕೊಂಡರೆ ಇದು ಹಸಿವನ್ನು ಕಂಡು ಹಿಡಿದು ಮೊಬೈಲ್ ಆ್ಯಪ್ ಮೂಲಕ ಸಂದೇಶ ರವಾನಿಸುತ್ತೆ. ವ್ಯಕ್ತಿಗೆ ಬೇಕಾದ ಪ್ರಮಾಣದ ಊಟವನ್ನು ಆರ್ಡರ್ ಮಾಡಿಕೊಳ್ಳುತ್ತದೆ!

ಹಸಿವು ಪತ್ತೆ ಸಾಧನದ ಬಗ್ಗೆ ಸೋಹನ್ ರೈ ಏನಂತಾರೆ? ವಿಡಿಯೋ ನೋಡಿ

ಸೋಹನ್ ರೈ ಈ ಮೊದಲು, ಡ್ರೋನ್ ಮೂಲಕ ಫುಡ್ ಡಿಲಿವರಿ, ಸಮುದ್ರ ಅಥವಾ ನೀರಿನಲ್ಲಿ ಮುಳುಗುತ್ತಿರುವ ವ್ಯಕ್ತಿಗೆ ಡ್ರೋನ್‌ನಲ್ಲಿ ಲೈಫ್ ಜಾಕೇಟ್‌ ಪೂರೈಸುವ ತಂತ್ರಜ್ಞಾನ ಆವಿಷ್ಕರಿಸಿದ್ದಾರೆ. ಈಗಾಗಲೇ ಕೃಷಿ ಇಲಾಖೆಯಿಂದ ಒಂದು ಪ್ರೋಗ್ರಾಂ ಡೆವಲಪ್ ಮಾಡಿಕೊಡಲು ಸೋಹನ್ ರೈಗೆ ಬುಲಾವ್ ಬಂದಿದೆ. ಇಂಡಿಯಾ ಟೆಕ್ ಆ್ಯಂಡ್ ಇನ್ಫ್ರಾ ತನ್ನ ಟ್ವಿಟರ್‌ನಲ್ಲಿ ಸೋಹನ್‌ನ ಲಿಂಕ್‌ಗಳನ್ನು ಹಂಚಿಕೊಂಡಿದೆ. ಸಾಕಷ್ಟು ಕಂಪನಿಗಳು ಸೋಹನ್‌ಗೆ ಹಲವಾರು ಪ್ರಾಜೆಕ್ಟ್‌ಗಳನ್ನು ಡೆವಲಪ್ ಮಾಡಿಕೊಡಲು ಕಾಂಟ್ರಾಕ್ಟ್ ಕೊಟ್ಟಿವೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹಾಡಿಹೊಗಳಿದ ಪ್ರಧಾನಿ ಮೋದಿ

ಮಂಗಳೂರಿನ ಬಿಜೈನಲ್ಲಿ ಒಂದು ಸಣ್ಣ ವರ್ಕ್‌ಶಾಪ್ ಇಟ್ಟುಕೊಂಡು ಸೋಹನ್ ಇಷ್ಟೆಲ್ಲಾ ಅಧ್ಯಯನ ಮಾಡುತ್ತಿದ್ದಾರೆ. ಈತನ ಇನ್ಟಾಗ್ರಾಂ ಪೇಜ್‌ ಸಾಕಷ್ಟು ಸದ್ದು ಮಾಡುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!