AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವು; ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವು; ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ
ಆನೆದಾಳಿ ಯುವತಿ ಸೇರಿ ಇಬ್ಬರ ಸಾವು
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 20, 2023 | 10:13 AM

Share

ದಕ್ಷಿಣ ಕನ್ನಡ: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿಯಾಗಿರುವ ರಂಜಿತಾ(21) ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಜೊತೆಗೆ ಇದೇ ವೇಳೆ ಸ್ಥಳದಲ್ಲಿದ್ದ ರಮೇಶ್ ರೈ(60) ಎಂಬವರ ಮೇಲೂ ದಾಳಿ ನಡೆಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ರಂಜಿತಾ ನೆಲ್ಯಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳದಲ್ಲಿ ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಕಳೆದ ಹಲವು ದಿನಗಳಿಂದ ಕಾಡಾನೆ ಉಪಟಳದಿಂದ ಬೇಸತ್ತಿರುವ ಜನರು, ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು ಆದರೆ ಅಧಿಕಾರಿಗಳು ಮಾತ್ರ ಈ ಬಗ್ಗೆ ಕ್ಯಾರೆ ಅಂದಿಲ್ಲವಂತೆ. ಇಬ್ಬರ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಇದೀಗ ಘಟನಾ ಸ್ಥಳದಲ್ಲಿಯೇ ಮೃತದೇಹ ಇಟ್ಟು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕುರಿತು ಪಂಚಾಯತ್ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. 

ಮಡಿಕೇರಿ: ಹೊತ್ತಿ ಉರಿದ ಹಳೆ ಮರಮುಟ್ಟುಗಳ ಮಳಿಗೆ

ಕೊಡಗು: ಶಾರ್ಟ್ ಸರ್ಕ್ಯೂಟ್​ನಿಂದ ಮಡಿಕೇರಿ ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಹಳೆ ಮರಮುಟ್ಟುಗಳ ಮಳಿಗೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಮಡಿಕೇರಿ‌ ನಗರ ಪೊಲೀಸರು ಸೇರಿದಂತೆ ಅಗ್ನಿಶಾಮಕದಳದವರು ಭೇಟಿ ನೀಡಿ, ಸತತ 5 ಗಂಟೆಗಳ ಕಾಲ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಇನ್ನು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:36 am, Mon, 20 February 23