AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ಮಿತ್ ರೈಗೆ ಇದೆ ಅಂಡರ್​​ವರ್ಲ್ಡ್​ ಡಾನ್ ಆಗೋ ಆಸೆ! ಟಿವಿ9 ಗೆ ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯ

Manmith Rai: ಮನ್ಮಿತ್ ರೈಗೆ ಸಂಬಂಧಿಸಿದ ಕೆಲ ಮಾಹಿತಿಗಳು ಸ್ನೇಹಿತರ ಮೂಲದಿಂದ ಟಿವಿ9ಗೆ ಲಭ್ಯವಾಗಿದ್ದು, ಮನ್ಮಿತ್​ಗೆ ಅಂಡರ್​​ವರ್ಲ್ಡ್ ಡಾನ್ ಆಗುವ ಆಸೆ ಇದೆ ಎಂದು ಹೇಳಲಾಗುತ್ತಿದೆ.

ಮನ್ಮಿತ್ ರೈಗೆ ಇದೆ ಅಂಡರ್​​ವರ್ಲ್ಡ್​ ಡಾನ್ ಆಗೋ ಆಸೆ! ಟಿವಿ9 ಗೆ ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯ
ಮನ್ಮಿತ್ ರೈ ಬಾಡಿಗಾರ್ಡ್ಸ್ ಜೊತೆ ಓಡಾಡುತ್ತಾನೆ
TV9 Web
| Edited By: |

Updated on:Jun 14, 2022 | 10:52 AM

Share

ಮಂಗಳೂರು: ನಟಿ ಅನುಷ್ಕಾ ಶೆಟ್ಟಿ (Anushka Shetty) ಅಣ್ಣ ಗುಣ ರಂಜನ್ ಶೆಟ್ಟಿ ಕೊಲೆಗೆ ಮನ್ಮಿತ್ ರೈ (Manmith Rai) ಸಂಚು ರೂಪಿಸಿದ್ದಾನೆ ಎಂದು ಜಯಕರ್ನಾಟಕ ಸಂಘಟನೆ ಜೂನ್ 12 ರಂದು ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ಆದರೆ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನ್ಮಿತ್ ರೈ, ಇದಕ್ಕೂ ನನಗೂ ಸಂಬಂಧವಿಲ್ಲ. ನಾನು ವಿದೇಶದಲ್ಲಿ ಇದ್ದೇನೆ ಎಂದು ಹೇಳಿದ್ದಾನೆ. ಈ ನಡುವೆ ಮನ್ಮಿತ್ ರೈಗೆ ಸಂಬಂಧಿಸಿದ ಕೆಲ ಮಾಹಿತಿಗಳು ಸ್ನೇಹಿತರ ಮೂಲದಿಂದ ಟಿವಿ9ಗೆ ಲಭ್ಯವಾಗಿದ್ದು, ಮನ್ಮಿತ್​ಗೆ ಅಂಡರ್​​ವರ್ಲ್ಡ್ ಡಾನ್ ಆಗುವ ಆಸೆ ಇದೆ ಎಂದು ಹೇಳಲಾಗುತ್ತಿದೆ.

ಮಾಮ ಮುತ್ತಪ್ಪ ರೈ ರೀತಿಯೇ ಆಗಬೇಕು ಎನ್ನುವ ಆಸೆ ಮನ್ಮಿತ್ ರೈಗೂ ಇದೆ ಎಂದು ಸ್ನೇಹಿತರ ಮೂಲದಿಂದ ತಿಳಿದು ಬಂದಿದೆ. ಇದರಿಂದಲೇ ತನ್ನ ಜೊತೆ ಹುಡುಗರನ್ನು ಇಟ್ಟುಕೊಳ್ಳಲು ಸಿಕ್ಕ ಸಿಕ್ಕ ಕಾರ್ಯಕ್ರಮಗಳಿಗೆ ಫಂಡಿಂಗ್ ಮಾಡುತ್ತಾರೆ. ಇನ್ನು ಅದೇ ಕಾರ್ಯಕ್ರಮಕ್ಕೆ ಮನ್ಮಿತ್ ರೈ ಅತಿಥಿ ಆಗಿ ಹೋಗುತ್ತಿದ್ದನಂತೆ. ಜೊತೆಗೆ ಸಾರ್ವಜನಿಕವಾಗಿ ಓಡಾಡುವಾಗ ಬಾಡಿಗಾರ್ಡ್ಸ್ ಇಟ್ಟುಕೊಂಡಿದ್ದಾನಂತೆ.

ಬಾಡಿಗಾರ್ಡ್ಸ್ ಭದ್ರತೆಯಲ್ಲಿ ಸಾಗುವಂತೆ ಮನ್ಮಿತ್ ರೈ ಸ್ಕೋಪ್ ಕೊಡುತ್ತಿದ್ದ. ಅಲ್ಲದೇ, ಪೊಲೀಸರಿಗೆ ನಿಂಧಿಸಿ ರೀಲ್ಸ್ ಮಾಡುತ್ತಿದ್ದ ಎಂಬೆಲ್ಲಾ ಮಾಹಿತಿಗಳು ವಿಡಿಯೋ ಸಮೇತ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಇದನ್ನೂ ಓದಿ: ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?

ಮನ್ಮಿತ್ ರೈ ಮುತ್ತಪ್ಪಾ ರೈ ಸಂಬಂಧಿ. ಈ ಹಿಂದೆ ಗುಣ ರಂಜನ್ ಮತ್ತು ಮನ್ಮಿತ್ ಒಟ್ಟಿಗೆ ಇದ್ದರು. ಬಳಿಕೆ ಬೇರೆ ಬೇರೆಯಾಗಿದ್ದಾರೆ. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಹುಡುಗಿಯರ ಮೇಲೆ ಹಣದ ಕಂತೆ ಎಸೆದ ಮನ್ಮಿತ್: ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಭಾರತದಿಂದ ಥೈಲ್ಯಾಂಡ್​ಗೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದ. ಈ ವೇಳೆ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ವೈರಲ್ ಆಗಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Tue, 14 June 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ