AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು

ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು
ಎಂಬಿಬಿಎಸ್ ವಿದ್ಯಾರ್ಥಿನಿ ನೇಣಿಗೆ ಶರಣು, ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್ ಪೊಲೀಸರ ವಶಕ್ಕೆ
TV9 Web
| Edited By: |

Updated on:Dec 20, 2021 | 12:13 PM

Share

ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ್ದಾಳೆ. ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಲಿಕೆ ಆಯುಕ್ತ, ಅಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ರೌಡಿಶೀಟರ್ ಮತ್ತವನ ಸಹಚರರು! ಕಾರಣವೇನು? ವಿಜಯಪುರ: ಪಾಲಿಕೆ ಆಯುಕ್ತರ ಮೇಲೆ ರೌಡಿಶೀಟರ್ (Rowdy sheeter) ಮತ್ತು ಸಂಗಡಿಗರು ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ರಿಂಗ್ ರೋಡ್‌ನಲ್ಲಿ ನಡೆದಿದೆ. ಆಯುಕ್ತ ವಿಜಯ್ ಮೆಕ್ಕಳಕಿ ಮತ್ತು ಇಬ್ಬರು ಅಧಿಕಾರಿಗಳ ಮೇಲೆ ರೌಡಿಶೀಟರ್ ಸಮರ್ಥ್ ಸಿಂದಗಿ, ಸುರೇಶ್, ಮತ್ತಿಬ್ಬರು ಸೇರಿ ಹಲ್ಲೆ ಮಾಡಿದ್ದಾರೆ. ರಿಂಗ್ ರೋಡ್‌ನಲ್ಲಿ ತೆಗ್ಗು ಗುಂಡಿಗಳ ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಗಳ ಕಾರಿಗೆ ರೌಡಿಶೀಟರ್ ಕಾರು ಮತ್ತು ಬೈಕ್​ ಡಿಕ್ಕಿಯಾಗಿದೆ. ಇದನ್ನು ಪ್ರಶ್ನಿಸಿದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪಾಲಿಕೆ ಆಯುಕ್ತ ಹಾಗೂ ಆಧಿಕಾರಿಗಳು ಎಂದು ಹೇಳಿದರೂ ಹಲ್ಲೆ ಮಾಡಿದ ನಾಲ್ವರು ಯುವಕರ ವಿರುದ್ಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ದೂರು ದಾಖಲಿಸಿದ್ದಾರೆ. ಸದ್ಯ ಪ್ರಮುಖ ಆರೋಪಿ ರೌಡಿಶೀಟರ್ ಸಮರ್ಥ್ ಸಿಂದಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಪರಾರಿಯಾದ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ

ಚಲಿಸುವ ರೈಲಿನಿಂದ ಪ್ಲಾಟ್​ಫಾರಂನಲ್ಲಿ ಇಳಿಯುವ ಯತ್ನ, ಬಿಬಿಎಂಪಿ ಎಂಜಿನಿಯರ್​ ಸ್ಥಳದಲ್ಲೇ ಸಾವು ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಬಿದ್ದು, ಇಂಜಿನಿಯರ್ ಸಾವಿಗೀಡಾದ ದುರ್ಘಟನೆ ಹುಬ್ಬಳ್ಳಿಯ ರೇಲ್ವೆ ನಿಲ್ದಾಣದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ರಂಗರಾಜು ಎಸ್.ಎ (59) ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಹೋಗಬೇಕಾದ ರೈಲು ಹತ್ತುವ ಬದಲು ಬೆಳಗಾವಿಯ ರೈಲು (Train) ಹತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸೂಪರಿಟೆಂಡೆಂಟ್ ಇಂಜಿನಿಯರ್ ತಕ್ಷಣವೇ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಬಿಬಿಎಂಪಿಯ ಕೆಆರ್​​ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಂಗರಾಜು ಎಸ್.ಎ ಸಾವನ್ನಪ್ಪಿದ್ದಾರೆ. ಚಲಿಸುತ್ತಿರುವಾಗ ರೈಲಿನಿಂದ ಇಳಿಯುವ ಸಂದರ್ಭದಲ್ಲಿ ಪ್ಲಾಟ್​ಫಾರಂನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಂಗರಾಜು, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Published On - 7:26 am, Mon, 20 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ