AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರಿನ ಖಾಸ ಗ್ರಾಂಡ್ ಅಪಾರ್ಟ್‍ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ ವೇಳೆ ಅನಾಹುತ ನಡೆದಿದೆ. ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಪಾಂಡೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು
ವಿದ್ಯಾರ್ಥಿ ಸಾವುImage Credit source: tv9 kannada
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 30, 2026 | 7:20 PM

Share

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸುದರ್ಶನ್, ನವ್ಯಾ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಮನೆ ಹೊಸ್ತಿಲಿನಲ್ಲಿ ಪೂಜೆಗೆ ದಾಸವಾಳ ಹೂವು ಇಟ್ಟಿದ್ದರು. ಒಣಗಿದ ಹೂವನ್ನು ನುಂಗಿ ಚಿನ್ಮಯಿಗೌಡ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿನ್ಮಯಿಗೌಡ ಮೃತಪಟ್ಟಿದ್ದಾನೆ.

ರಥೋತ್ಸವ ನೋಡಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ರಥೋತ್ಸವ ನೋಡಲು ಬಂದಿದ್ದ ಮಾಗಡಿ ಮೂಲದ ನಂಜುಂಡಸ್ವಾಮಿ(56) ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಥೋತ್ಸವ ನೋಡಲು ಬಂದಿದ್ದ ನಂಜುಂಡಸ್ವಾಮಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us