AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
Skanda
|

Updated on:Mar 20, 2021 | 5:51 PM

Share

ಮಂಗಳೂರು: ಕಂಬಳದಲ್ಲಿ ಅತಿ ವೇಗವಾಗಿ ಓಡುವ ಮೂಲಕ ಕಳೆದ ಬಾರಿ ದಾಖಲೆ ಬರೆದಿದ್ದ ಮಿಜಾರು ಶ್ರೀನಿವಾಸ ಗೌಡ, ಈ ವರ್ಷ ತನ್ನ ಹಳೆಯ ದಾಖಲೆಯನ್ನೇ ಮುರಿದುಹಾಕಿದ್ದಾರೆ. ವೇಣೂರುನಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ನಿರ್ಮಿಸಿದ್ದು, 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿದ್ದಾರೆ. ಈ ಓಟದಲ್ಲಿ ಅವರು ವಾಸ್ತವವಾಗಿ 125 ಮೀಟರ್ ದೂರವನ್ನು 11.21 ಸೆಕೆಂಡ್​ಗಳಲ್ಲಿ ತಲುಪಿದ್ದು, ಅದನ್ನು 100 ಮೀಟರ್​ಗೆ ಹೋಲಿಕೆ ಮಾಡಿದಾಗ ಕೇವಲ 8.96 ಸೆಕೆಂಡ್​ಗಳಲ್ಲಿ ಗುರಿ ತಲುಪಿದಂತಾಗುತ್ತದೆ.

ಅಂದಹಾಗೆ ಕಳೆದ ವರ್ಷ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ ಗೌಡ 100 ಮೀಟರ್‌ ಅಂತರವನ್ನು 9.55 ಸೆಕೆಂಡ್‌ನಲ್ಲಿ ಕ್ರಮಿಸಿ ದಾಖಲೆ ಬರೆದಿದ್ದರು. ಅದಾದ ನಂತರ ಕಳೆದ ವರ್ಷದ ವೇಣೂರು ಕಂಬಳದಲ್ಲಿ ಈ ದಾಖಲೆ ಮುರಿದಿದ್ದ ಬಜಗೋಳಿ ನಿಶಾಂತ್‌ ಶೆಟ್ಟಿ ಎನ್ನುವವರು 100 ಮೀಟರ್‌ ಅಂತರವನ್ನು 9.52 ಸೆಕೆಂಡ್‌ನಲ್ಲಿ ಕ್ರಮಿಸಿದ್ದರು. ಅಲ್ಲದೇ ಬೈಂದೂರು ವಿಶ್ವನಾಥ ದೇವಾಡಿಗ ಎಂಬುವವರು ಈ ವರ್ಷ ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಅನ್ನು 9.15 ಸೆಕೆಂಡ್‌ನಲ್ಲಿ ಕ್ರಮಿಸಿ ಇಬ್ಬರ ದಾಖಲೆಯನ್ನೂ ಬದಿಗೊತ್ತಿ ಹೊಸ ದಾಖಲೆ ಬರೆದಿದ್ದರು. ಆದರೆ, ಇದೀಗ ಈ ದಾಖಲೆಯನ್ನೂ ಪುಡಿಗಟ್ಟಿ ಮತ್ತೆ ಶ್ರೀನಿವಾಸ ಗೌಡ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​ 

ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

Published On - 5:36 pm, Sat, 20 March 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!