Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಮ್ಡ್​​ ಫಾರೆಸ್ಟ್​ ನಿಯಮ ಸಡಿಲಿಕೆ ಮಾಡಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬಡವರಿಗೋಸ್ಕರ ಡೀಮ್ಡ್ ಫಾರೆಸ್ಟ್ ನಿಯಮ ಸಡಿಲಿಕೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಪಶು ಸಂಜೀವಿನಿ ಅಂಬ್ಯುಲೆನ್ಸ್​​ಗಳಿಗೆ ಚಾಲಕರನ್ನು ನೇಮಿಸದ್ದಕ್ಕೆ ಅಧಿಕಾರಿಗಳನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ತರಾಟೆಗೆ ತೆಗೆದುಕೊಂಡರು.

ಡೀಮ್ಡ್​​ ಫಾರೆಸ್ಟ್​ ನಿಯಮ ಸಡಿಲಿಕೆ ಮಾಡಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ದಿನೇಶ್ ಗುಂಡೂರಾವ್ ಮತ್ತು ಯುಟಿ ಖಾದರ್
Follow us
Rakesh Nayak Manchi
|

Updated on: Jun 23, 2023 | 2:22 PM

ಮಂಗಳೂರು: ಬಡವರಿಗೋಸ್ಕರ ಡೀಮ್ಡ್​​ ಫಾರೆಸ್ಟ್​ (Deemed forest) ನಿಯಮ ಸಡಿಲಿಕೆ ಮಾಡುವಂತೆ ತಹಶೀಲ್ದಾರ್​​ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚಿಸಿದ್ದಾರೆ. ಜಿಲ್ಲಾಪಂಚಾಯತ್​ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ ಅವರು, 94 ಸಿ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡುವಂತೆ ಸೂಚಿಸಿದರು.

ಅಧಿಕಾರಿಗಳು ಮನಸ್ಸು ಮಾಡಿದರೆ ನಿಯಮ ಸಡಿಲಿಕೆ ಮಾಡಬಹುದು. ಅರಣ್ಯ ಮತ್ತು ಕಂದಾಯ ಅಧಿಕಾರಿಗಳು ಬಡವರತ್ತ ನೋಡಿ. ಆದಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲು ಗಮನ ಕೊಡಿ. ಅಧಿಕಾರಿಗಳು ನಿಯಮ ಸಡಿಲಿಸಿದರೆ ಸುಪ್ರೀಂ ಕೋರ್ಟ್ ಕೂಡ ಒಪ್ಪುತ್ತದೆ ಎಂದು ಸಲಹೆ ನೀಡಿದರು.

ಪಶುಪಾಲನಾ ಇಲಾಖೆ ಅಧಿಕಾರಿಗೆ ಸ್ಪೀಕರ್ ತರಾಟೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೋ ಶಾಲೆ ವಿಚಾರದಲ್ಲಿ ಪಶುಪಾಲನಾ ಇಲಾಖೆ ಅಧಿಕಾರಿಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪಶು ಸಂಜೀವಿನಿ ಅಂಬ್ಯುಲೆನ್ಸ್ ಇದ್ದರೂ ಚಾಲಕ ಇಲ್ಲ. ಚಾಲಕರನ್ನು ಯಾಕೆ ನೇಮಿಸಿಲ್ಲ ಅಂತ ಪಶುಪಾಲನ ಇಲಾಖೆ ಉಪನಿರ್ದೇಶಕರನ್ನು ತರಾಟೆ ತೆಗೆದುಕೊಂಡರು.

ಇದನ್ನೂ ಓದಿ: ಮಂಗಳೂರು: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಪ್ರತೀ ಗೋವಿಗೆ ಸರ್ಕಾರದಿಂದ ಎಷ್ಟು ಹಣ ಬರುತ್ತೆ ಅಂತ ಲೆಕ್ಕ ಕೇಳಿದ ಖಾದರ್, ಎಷ್ಟು ಹಣ ಬರಲು ಬಾಕಿಯಿದೆ ಅಂತ ಪ್ರಶ್ನಿಸಿದ್ದಾರೆ. ಆದರೆ ‌ಲೆಕ್ಕ ಕೊಡಲು ತಡವರಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್, ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ ಬಳಿ ಲೆಕ್ಕ ಇಲ್ವಾ? ಕೊಟ್ಟ ಹಣವನ್ನ ಲೂಟಿ ಮಾಡುತ್ತೀರಾ? ಅದಕ್ಕೆ ಲೆಕ್ಕ ಇಲ್ವಾ ಅಂತ ಆಕ್ರೋಶ ಹೊರಹಾಕಿದರು.

ಇಲ್ಲಿ ನಿಮ್ಮನ್ನ ಕೇಳಲು ಜನ ಇಲ್ವಾ? ಎಲ್ಲವೂ ಸರಿಯಿದೆಯಾ? ಅಂಬ್ಯುಲೆನ್ಸ್ ಏಜೆನ್ಸಿಯವನು ಅದನ್ನ ಓಡಿಸುತ್ತಾನಾ ಅಂತ ನೀವು ನೋಡುವುದಿಲ್ಲವೇ? ಅವನಿಗೆ ಸುಮ್ಮನೆ ಬಿಲ್ ಮಾಡಿ ಕೊಡುತ್ತೀರಾ? ಇಲ್ಲಿ ಕೇಳುವವರೇ ಇಲ್ವಾ? ಎಲ್ಲದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮಗ್ರ ವರದಿ ಕೊಡಿ. ಆ ವರದಿ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುವುದು. ಮನುಷ್ಯನಿಗೆ ಎಷ್ಟು ಬದುಕಲು ಹಕ್ಕಿದ್ಯೋ ಅಷ್ಟೇ ಪ್ರಾಣಿಗಳಿಗೂ ಇದೆ ಎಂದರು. ಖಾದರ್ ಮಾತಿಗೆ ದಿನೇಶ್ ಗುಂಡೂರಾವ್ ಕೂಡ ದನಿಗೂಡಿಸಿದರು.

ಶಿಷ್ಟಾಚಾರ ಉಲ್ಲಂಘನೆ ವಿರುದ್ದ ಬಿಜೆಪಿ ಶಾಸಕರು ಗರಂ

ಹಾಲಿ ಶಾಸಕರು ಇರುವಾಗ ಮಾಜಿ ಶಾಸಕರು ವೇದಿಕೆ ಮೇಲೆ ಕುಳಿತುಕೊಂಡು ಸಭೆ ಉದ್ಘಾಟಿಸುವುದು ಎಷ್ಟು ಸರಿ ಅಂತಾ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಬಿಜೆಪಿ ಶಾಸಕರು ಗರಂ ಆಗಿದ್ದಾರೆ. ನಾನು ಶಾಸಕ ಇದ್ದರೂ ಕೆಲವು ಮಾಜಿ ಶಾಸಕರು ಅಧಿಕಾರಿಗಳಿಗೆ ಮುಜುಗರ ಆಗುವ ರೀತಿ ಮಾಡುತ್ತಾರೆ. ಇದರಿಂದ ಅಧಿಕಾರಿಗಳಿಗೆ ‌ಕೆಲಸ ಮಾಡಲು‌ ಆಗದ ಸ್ಥಿತಿ ಇದೆ. ಉಸ್ತುವಾರಿ ಸಚಿವರು ಇಂತಹ ವಿಚಾರಗಳನ್ನು ಕೂಡಲೇ ನಿಲ್ಲಿಸಬೇಕು ಅಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಕೂಡ ಅಸಮಾಧಾನ ಹೊರಹಾಕಿದ್ದು, ಸಭೆಗಳಿಗೆ ನಮ್ಮನ್ನ ಕರೆಯದೇ ಯಾರನ್ನೋ ಕರೆಯುತ್ತಾರೆ. ನಾಳೆ ಹೀಗೇ ಆದರೆ ನಾನು ಕೂಡ 25 ಜನರನ್ನ ತಂದು ಕೂರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್ ಅವರು ಕೂಡ ಆಕ್ರೋಶ ಹೊರಹಾಕಿದರು. ಶಿಷ್ಟಾಚಾರ ಪ್ರಕಾರ ಎಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎಂದ ಗುಂಡೂರಾವ್, ಶಾಸಕರನ್ನ ಅಗತ್ಯವಾಗಿ ಆಹ್ವಾನಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮೊದಲ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ಎಸ್​ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆಗೆ ಬಿಜೆಪಿ ಸದಸ್ಯರು ಗೈರು

ಆರಂಭದಲ್ಲಿ ಸಭೆಗೆ ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾತ್ರ ಹಾಜರಾಗಿದ್ದರು. ನಂತರ ಶಾಸಕರಾದ ಹರೀಶ್ ಪೂಂಜಾ, ಉಮನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್ ಅವರು ತಡವಾಗಿ ಸಭೆಗೆ ಆಗಮಿಸಿದ್ದಾರೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ, ಪರಿಷತ್ ಸದಸ್ಯ ಹರೀಶ್ ಕುಮಾರ್ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ