AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಟ್ಟು’ ಗುಣ ಅರಿಯಲು ಮಲೆನಾಡಿನ ರಕ್ಷಿತಾರಣ್ಯದಲ್ಲಿ ಹೀಗೊಂದು ರೌಂಡ್ಸ್!

ಮಂಗಳೂರು: ಜಿಲ್ಲೆಯ ಪರಿಸರ ಪ್ರೇಮಿಗಳು, ಅರಣ್ಯ ಪ್ರೇಮಿಗಳು ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮಲೆನಾಡಿನ ಮಧ್ಯೆ ಹಾದು ಹೋಗುವ ಪಶ್ಚಿಮ ಘಟ್ಟಗಳಿಗೆ ಆಗಾಗ ಹೋಗಿ ಪರಿಸರ ಸಂರಕ್ಷಣೆ ಮಾಡೊ ಕೆಲಸ ಮಾಡುತ್ತಾರೆ. ಇನ್ನು ಅರಣ್ಯಕ್ಕೆ ಹೋಗುವ ಅನುಭವಗಳನ್ನು ಅವರ ಪದಗಳಲ್ಲೇ ವರ್ಣಿಸೋದಾದ್ರೆ. ಅಡವಿಯ ಎಡೆಯಲ್ಲಿ ಗಿಡಗಳ ನಡುವಲ್ಲಿ ನೊರೆಗಳ ಪುಟಿ ಸುತ ಕುಣಿ ಕುಣಿ ದಾಡುತ ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ಹುಟ್ಟು’ ಗುಟ್ಟುಗಳನ್ನು ಅರಿಯಬಹುದು. ಅದು […]

‘ಹುಟ್ಟು' ಗುಣ ಅರಿಯಲು ಮಲೆನಾಡಿನ ರಕ್ಷಿತಾರಣ್ಯದಲ್ಲಿ ಹೀಗೊಂದು ರೌಂಡ್ಸ್!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jun 02, 2020 | 5:41 PM

Share

ಮಂಗಳೂರು: ಜಿಲ್ಲೆಯ ಪರಿಸರ ಪ್ರೇಮಿಗಳು, ಅರಣ್ಯ ಪ್ರೇಮಿಗಳು ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮಲೆನಾಡಿನ ಮಧ್ಯೆ ಹಾದು ಹೋಗುವ ಪಶ್ಚಿಮ ಘಟ್ಟಗಳಿಗೆ ಆಗಾಗ ಹೋಗಿ ಪರಿಸರ ಸಂರಕ್ಷಣೆ ಮಾಡೊ ಕೆಲಸ ಮಾಡುತ್ತಾರೆ. ಇನ್ನು ಅರಣ್ಯಕ್ಕೆ ಹೋಗುವ ಅನುಭವಗಳನ್ನು ಅವರ ಪದಗಳಲ್ಲೇ ವರ್ಣಿಸೋದಾದ್ರೆ. ಅಡವಿಯ ಎಡೆಯಲ್ಲಿ ಗಿಡಗಳ ನಡುವಲ್ಲಿ ನೊರೆಗಳ ಪುಟಿ ಸುತ ಕುಣಿ ಕುಣಿ ದಾಡುತ ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ಹುಟ್ಟು’ ಗುಟ್ಟುಗಳನ್ನು ಅರಿಯಬಹುದು. ಅದು ಕೇವಲ ನೀರಿನ ಹರಿವು ಅಲ್ಲ, ಆದು ಅಡವಿಯ ಜೀವಂತಿಕೆಯ ನರ ನಾಡಿ, ನಾಡಿನ ಸಮಸ್ತ ಜನತೆಯ ಬದುಕಿನ ಚೇತನಾ ಶಕ್ತಿ ಎಂಬ ಜಲನಾಡಿ.

ಪಶ್ಚಿಮ ಘಟ್ಟದ ದಟ್ಟ ಅಡವಿಯ ಒಳಗೆ ನದಿ ಕಣಿವೆಯ ನೀರಿನ ಹರಿವು ಪ್ರದೇಶವನ್ನು ಶೋಧಿಸುತ್ತಾ ಹೋದಂತೆಯೇ ಅತ್ಯಮೂಲ್ಯವಾದ ನೈಸರ್ಗಿಕ ಸೂಕ್ಷ್ಮ ವಿಚಾರಗಳು ಒಂದೊಂದಾಗಿ ಪುಟ ತೆರೆಯುತ್ತಾ ಹೋಗುತ್ತವೆ. ಅಲ್ಲಿ ಎಲ್ಲವೂ ನಿಗೂಢ, ಎಲ್ಲವೂ ಅಗಾಧ. ಪ್ರತೀ ಹೆಜ್ಜೆಯಲ್ಲೂ ಕಲಿಯುವಂತದ್ದು ತುಂಬಾ ಇರುತ್ತವೆ. ಮೇಲ್ನೋಟಕ್ಕೆ ಹಚ್ಚ ಹಸುರಿನ ದಟ್ಟ ಅಡವಿ, ಒಳನೋಟದಲ್ಲಿ ಜೀವ ವೈವಿಧ್ಯತೆಗಳ ಭದ್ರ ಬದುಕಿನ ಸಂಕೀರ್ಣ. ನೀರಿನ ಅಂಚಿನಲ್ಲಿ ಕಲ್ಲಿಗೆ ಅಂಟಿರುವ ಪಾಚಿ, ಶಿಲೀಂಧ್ರಗಳಿಂದ ಹಿಡಿದು ಆಕಾಶವನ್ನು ಚುಚ್ಚಿ ನಿಂತ ಮರಗಳವರೆಗೆ, ತರಗೆಲೆಗಳ ಎಡೆಯಲ್ಲಿ ಇರುವ ಇರುವೆಯಿಂದ ಹಿಡಿದು ನೀರಿನ ಪಥದಲ್ಲಿ ಸಾಗುವ ಆನೆಗಳವರೆಗೆ ಒಂದಕ್ಕೊಂದು ಅವಿನಾಭಾವ ಸಂಬಂಧ ಇದೆ.

ಶೋಲಾ ಅರಣ್ಯದಲ್ಲಿ ಜಲ ನಾಡಿಗಳ ಕಾರ್ಯತಂತ್ರ: ಜೀವ ಸಂಕುಲದ ಈ ಅಗೋಚರ ಪ್ರಭಾವಳಿಯ ಪ್ರಭೆಯು ನಾಡಿನ ಯಾವ ಮೂಲೆಗೂ ಪ್ರಭಾವ ಬೀರುವ ಶಕ್ತಿ ಇರುವಂತದ್ದು. ಪಶ್ಚಿಮ ಘಟ್ಟದ ಶೋಲಾ ಅರಣ್ಯದಲ್ಲಿ ಹರಿಯುವ ಈ ಜಲ ನಾಡಿಗಳು ಮಳೆ ನೀರನ್ನು ಇಂಗಿಸಿಕೊಂಡು ವರ್ಷ ಪೂರ್ತಿ ಹೊಳೆಯನ್ನು ಜೀವಂತವಾಗಿ ಇರಿಸಿಕೊಳ್ಳುವ ಸಾಮರ್ಥ್ಯ ಇರುವಂತವು. ವರ್ಷಪೂರ್ತಿ ಈ ಅರಣ್ಯದ ಎಲೆಗಳು ಸೂರ್ಯನ ಕಿರಣ ನೆಲಕ್ಕೆ ಬೀಳದ ದಟ್ಟ ಅಡವಿ ಒಳಗೆ ಬಿದ್ದಾಗ ತರಗೆಲೆಗಳು ಅಲ್ಲಿನ ಸದಾ ಒರತೆ ಉಳ್ಳ ಮಣ್ಣಿಗೆ ಬಿದ್ದಾಗ ಆ ಮಣ್ಣು ಸ್ಪಂಜಿನಂತೆ ಇದ್ದು ನೀರನ್ನು ಹಿಡಿದಿಟ್ಟು ಕೊಳ್ಳುತ್ತವೆ. ಹೀಗೆ ಸಂಗ್ರಹ ಆದ ನೀರು ಹಂತ, ಹಂತವಾಗಿ ಒಂದು ಮಳೆಗಾಲದಿಂದ ಇನ್ನೊಂದು ಮಳೆಗಾಲದ ವರೆಗೆ ನದಿಗೆ ಹರಿಯುತ್ತಾ ಇದ್ದು ಅಲ್ಲಿನ ನೈಸರ್ಗಿಕ ವ್ಯವಸ್ಥೆ ಒಂದು ಅಗೋಚರ ತಾಂತ್ರಿಕ ರೀತಿಯಲ್ಲಿ ಕೆಲಸ ಮಾಡುತ್ತೆ.

ಅರಣ್ಯ ಸಂರಕ್ಷಣೆಯ ಪಾತ್ರಧಾರಿಗಳ ಪರಿಚಯ ನಡೆಯುತ್ತಾ ಹೋಗುವಾಗ ಕಾಲಿಗೆ ರಕ್ತದ ತಿಲಕ ಇಡುವ ಜಿಗಣೆಗಳು, ನೀರಿಗೆ ಚಂಗನೆ ಜಿಗಿಯವ ಕಪ್ಪೆಗಳು, ತರ ಗೆಲೆಗಳ ಒಳಗೆ ಸಂಚರಿಸುವ ಇರುವೆಗಳು, ನೀರಿನ ಅಂಚಿನಲ್ಲಿ ಇರುವ ಪಾಚಿಗಳು, ನೀರಿನ ಇಕ್ಕಡೆ ಇರುವ ಹುಲ್ಲುಗಳು, ಒಂದು ಕಡೆ ಒಂದು ಗೆಲ್ಲನ್ನು ಎಳೆದರೆ 30 ಅಡಿ ದೂರದಲ್ಲಿ ಆಗುವ ಸಂಚಲನದ ನೀರಿಗೆ ಸ್ಪರ್ಶಿಸುವ ಬೀಳುಗಳು, ನೀರಿನ ಮೇಲೆ ಹಾರಾಡುವ ಸಣ್ಣ ಕೀಟಗಳು, ನೀರಲ್ಲಿ ಕೊಳೆತ ಎಲೆಗಳಲ್ಲಿ ಇರುವ ಶಿಲೀಂಧ್ರಗಳು, ಬೀಜ ಸಿಂಚನದ ಮೂಲಕ ಕಾಡಿನ ಬೆಳವಣಿಗೆಗೆ ಪಾತ್ರವಾಗುವ ಹಾರ್ನ್ ಬಿಲ್, ಸಿಂಗಲೀಕ, ಮುಸುವ, ಲದ್ದಿ ಹಾಕುವ ಆನೆ, ಸೆಗಣಿ ಹಾಕುವ ಕಾಟಿ, ಹಿಕ್ಕೆ ಹಾಕುವ ಎಲ್ಲವೂ ಪಶ್ಚಿಮ ಘಟ್ಟದ ನೀರಿನ ಮತ್ತು ಅರಣ್ಯದ ಸಂರಕ್ಷಣೆಯ ಪಾತ್ರಧಾರಿಗಳು.

ಇದು ಕನ್ಯಾಕುಮಾರಿಯಿಂದ ಗುಜರಾತ್ ತಪತಿ ನದೀ ಕಿನಾರೆ ವರೆಗಿನ 1600 ಕಿ. ಮೀ ನಷ್ಟು ಉದ್ದಕ್ಕೂ ಇರುವಂತದ್ದು. ಮಳೆ, ಹೊಳೆ, ಕಾಡು, ಕಣಿವೆ, ಗಿರಿ, ಝರಿ ಇವೆಲ್ಲವೂ ಒಂದಕ್ಕೊಂದು ಅವಲಂಬಿತವಾಗಿ ಇದ್ದ ಕಾರಣ ಮಳೆ ಕಾಲ, ಕಾಲಕ್ಕೆ ಬರುವಂತಿದೆ. ಆದರೆ ಮನುಜ ಸಂತಾನದ ‘ಅಭಿವೃದ್ದಿ’ ಪರ ಯೋಜನೆಗಳು ಇಂದು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶಕ್ಕೆ ಹಿಂಸೆ ನೀಡುತ್ತಾ ಬಂದಿದ್ದರೂ ಸಹನಾ ಸ್ವರೂಪಿ ಪ್ರಕೃತಿ ಮಾತೆ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದಾಳೆ. ಇದು ಶಿಬಾಜೆ ರಕ್ಷಿತಾರಣ್ಯದಲ್ಲಿ ನೇತ್ರಾವತಿಯ ಉಪನದಿ ಕಪಿಲಾ ನದಿಯ ಹರಿವಿನ ಪಥದಲ್ಲಿ ಹೆಜ್ಜೆ ಹಾಕುತ್ತಾ ಹೋದಾಗ ಕಂಡ ದೃಶ್ಯಗಳು. (ವಿಶೇಷ ಬರಹ: ಪೃಥ್ವಿರಾಜ್ ಬೊಮ್ಮನಕೆರೆ)

Published On - 3:00 pm, Tue, 2 June 20

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ