ಮಂಗಳೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಲಿಕಟ್ಟೆಯ ಸಮೀಪ ರಾತ್ರಿ ವೇಳೆ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಕ್ಕಳಿಗೆ ನೀಡಲಿಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಘಟನೆ ನಡೆದಿದೆ. ವಾರದ ಹಿಂದೆಯಷ್ಟೆ ಪಕ್ಕದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸೊತ್ತುಗಳನ್ನು ಕಿಡಿಗೇಡಿಗಳು ನಾಶ ಮಾಡಿ ಗಲೀಜು ಮಾಡಿದ್ದರು.

ಮಂಗಳೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು
ಪುತ್ತೂರು ತಾಲೂಲಿಕ ನೆಲ್ಲಿಕಟ್ಟೆಯ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಮೆಟ್ ಮಾಡಿ ತಿಂದ ಕಿಡಿಗೇಡಿಗಳು
Edited By:

Updated on: Mar 19, 2024 | 2:47 PM

ಮಂಗಳೂರು, ಮಾ.19: ರಾತ್ರೋರಾತ್ರಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಕ್ಕಳಿಗೆ ನೀಡಲು ಎಂದು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ (Puttur) ನೆಲ್ಲಿಕಟ್ಟೆಯ ಸಮೀಪ ನಡೆದಿದೆ. ಪಕ್ಕದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸೊತ್ತುಗಳನ್ನು ಕಿಡಿಗೇಡಿಗಳು ನಾಶ ಮಾಡಿ ಗಲೀಜು ಮಾಡಿದ್ದ ವಾರದ ನಂತರ ಈ ಪ್ರಕರಣ ನಡೆದಿದೆ.

ಎಂದಿನಂತೆ ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದಿರುವುದನ್ನು ಗಮನಿಸಿದ್ದಾರೆ. ಅಂಗನವಾಡಿ ಪುಟಾಣಿಗಳಿಗೆಂದು ಅಡುಗೆ ಕೋಣೆಯಲ್ಲಿ ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: ಕಲಬುರಗಿ: ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ; ಲೋಕಾಯುಕ್ತ ಅಧಿಕಾರಿಗಳ ಧಿಡಿರ್ ದಾಳಿ

ಅಷ್ಟೇ ಅಲ್ಲದೆ, ಪಕ್ಕದಲ್ಲಿರುವ ಗ್ಯಾಸ್ ಸ್ಟವ್​ ಮೇಲೆ ಬಾಣಲೆ ಇಡಲಾಗಿದ್ದು, ಅದರಲ್ಲಿ ಆಮ್ಮೆಟ್ ತುಂಡು ಪತ್ತೆಯಾಗಿದೆ. ಅದರಂತೆ ಕಿಡಿಗೇಡಿಗಳು ಅಂಗನವಾಡಿಗೆ ನುಗ್ಗಿ ಆಮ್ಲೆಟ್ ಮಾಡಿ ತಿಂದಿರುವುದು ದೃಢಪಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ವಾರದ ಹಿಂದೆಯಷ್ಟೆ ಕಿಡಿಗೇಡಿಗಳು ಪಕ್ಕದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸೊತ್ತುಗಳನ್ನು ನಾಶ ಮಾಡಿ ಗಲೀಜು ಮಾಡಿದ್ದರು. ಇದೀಗ ಕಿಡಿಗೇಡಿಗಳು ಅಂಗನವಾಡಿ ಕೇಂದ್ರಕ್ಕೂ ನುಗ್ಗಿದ್ದಾರೆ. ಇದು ಸಹಜವಾಗಿ ಸ್ಥಳೀಯ ನಿವಾಸಿಗರಲ್ಲಿ ಆತಂಕವನ್ನು ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 19 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us