AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳಿಂದ ವ್ಯಕ್ತಿಗೆ ಚಾಕು ಇರಿತ

ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳು ಗುಂಪೊಂದು ಮನೆಯಿಂದ ಸದಕತ್​ ಉಲ್ಲಾರನ್ನ ಹೊರ ಕರೆಸಿ ಕೊಲೆಗೆ ಯತ್ನ ನಡೆಸಿ ಪರಾರಿಯಾಗಿದ್ದಾರೆ.

ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳಿಂದ ವ್ಯಕ್ತಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 04, 2023 | 10:28 AM

Share

ಮಂಗಳೂರು: ಮಂಗಳೂರು ಹೊರವಲಯದಲ್ಲಿ ದುಷ್ಕರ್ಮಿಗಳು ವ್ಯಕ್ತಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಕೋಟೆಪುರ ನಿವಾಸಿ ಸದಕತ್​ ಉಲ್ಲಾ(34) ಎಂಬುವವರ ಮೇಲೆ ತಡರಾತ್ರಿ ಚಾಕು ಇರಿಯಲಾಗಿದೆ.

ಮನೆಯಿಂದ ಸದಕತ್​ ಉಲ್ಲಾರನ್ನ ಹೊರ ಕರೆಸಿ ದುಷ್ಕರ್ಮಿಗಳ ತಂಡ ಕೊಲೆಗೆ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ತಂಡದಿಂದ ಕೃತ್ಯದ ಶಂಕೆ ವ್ಯಕ್ತವಾಗಿದೆ. ಬೆದರಿಸಿ ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಹಣ ಪಡೆದ ಆರೋಪ ಕೇಳಿ ಬಂದಿದ್ದು ಈ ವಿಚಾರವಾಗಿ ಘರ್ಷಣೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru: ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳನ ಬಂಧನ

ವಿಶೇಷಚೇತನನ ಕಾಫಿ ತೋಟದಲ್ಲಿ ದುರುಳರಿಂದ ಅಟ್ಟಹಾಸ

ಹಾಸನ ಜಿಲ್ಲೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ, ಮೆಣಸಿನ ಗಿಡಗಳನ್ನು ಕಡಿದು ಪಾಪಿಗಳು ಕ್ರೌರ್ಯ ಮೆರೆದಿದ್ದಾರೆ. 450 ಕ್ಕೂ ಹೆಚ್ಚು ಫಸಲಿಗೆ ಬಂದಿದ್ದ ಕಾಫಿ ಹಾಗೂ ಮೆಣಸಿನ ಗಿಡಗಳನ್ನು ನಾಶ ಮಾಡಲಾಗಿದೆ. ಗ್ರಾಮದ ವಿಶೇಷಚೇತನ ಚಂದ್ರು ಎಂಬುವವರಿಗೆ ಕಾಫಿ ತೋಟ ಸೇರಿದ್ದು ಹನ್ನೆರಡು ವರ್ಷಗಳಿಂದ ಕಷ್ಟಪಟ್ಟು ಕಾಫಿ, ಮೆಣಸಿನ ಗಿಡಗಳನ್ನು ಬೆಳೆಸಿದ್ದರು. ಒಂದು ಎಕರೆ ಪ್ರದೇಶದಲ್ಲಿದ್ದ ಕಾಫಿ, ಮೆಣಸಿನ ಗಿಡಗಳನ್ನು ಕಡಿದು ಸಂಪೂರ್ಣವಾಗಿ ನಾಶ ಮಾಡಲಾಗಿದೆ. ಕುಟುಂಬ ನಿರ್ವಹಣೆ ಹಾಗೂ ಜೀವನಾಧಾರವಾಗಿದ್ದ ಕಾಫಿ, ಮೆಣಸಿನ ಗಿಡಗಳನ್ನು ಕಳೆದುಕೊಂಡು  ಚಂದ್ರು ಹಾಗೂ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ