AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಸ್ವಲ್ಪ ವಿಷ ಕೊಡಿ: ದಿನೇಶ್ ಗುಂಡೂರಾವ್ ಬಳಿ ಮಂಗಳೂರಿನ ಅದ್ಯಪಾಡಿ ಗ್ರಾಮಸ್ಥರ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿದರು. ಇದೇ ವೇಳೆ ಮಂಗಳೂರಿನ ಅದ್ಯಪಾಡಿ ಗ್ರಾಮಸ್ಥರು ಸಚಿವರ ಬಳಿ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬಗ್ಗೆ ಜನರಿಂದ, ಸಚಿವರಿಂದ ಮೆಚ್ಚುಗೆಯ ಮಾತುಗಳು ವ್ಯಕ್ತವಾದವು.

ನಮಗೆ ಸ್ವಲ್ಪ ವಿಷ ಕೊಡಿ: ದಿನೇಶ್ ಗುಂಡೂರಾವ್ ಬಳಿ ಮಂಗಳೂರಿನ ಅದ್ಯಪಾಡಿ ಗ್ರಾಮಸ್ಥರ ಆಕ್ರೋಶ
ಮಂಗಳೂರಿನ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಅಶೋಕ್​ ಪೂಜಾರಿ
| Edited By: |

Updated on: Aug 02, 2024 | 10:10 AM

Share

ಮಂಗಳೂರು, ಆಗಸ್ಟ್ 2: ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಮಳೆಗಾಲ ಬಂದಾಗ ಸಂಪೂರ್ಣ ಮುಳುಗಡೆಯಾಗುವ ಅದ್ಯಪಾಡಿಯ ಮೋಗೆರ್ ಕುದ್ರುವಿಗೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಇದೇ ವೇಳೆ, ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಮಳೆಗಾಲದ ಸಂದರ್ಭ ಇದೇ ರೀತಿ ಸಮಸ್ಯೆ ಆಗುತ್ತದೆ. ನಮಗೆ ಇದಕ್ಕಿಂತ ಸ್ವಲ್ಪ ವಿಷ ಆದರೂ ಕೊಡಿ ಎಂದು ಸಚಿವರ ಬಳಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಮರವೂರು ಕಿಂಡಿ‌ ಅಣೆಕಟ್ಟಿಗೆ ಎಮರ್ಜೆನ್ಸಿ ಗೇಟ್ ಮಾಡಿದರೆ ಸಮಸ್ಯೆ ಪರಿಹಾರವಾಗುತ್ತದೆ. 11 ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿದರೂ ಯಾವುದೇ ‌ಕ್ರಮ ಆಗಿಲ್ಲ. ಈ ಮಳೆಗಾಲದಲ್ಲಿ ಮೂರು ಬಾರಿ ನಮ್ಮ ಮನೆಗಳು ಮುಳುಗಡೆ ಆದವು. ಪ್ರತಿ‌ ಸಾರಿ ನೀವು ಬಂದು ಹೋಗುವುದು ಮಾತ್ರ ನಡೆಯುತ್ತಿದೆ. ನಮಗೆ ನೀವು ನೀಡುವ ಪರಿಹಾರದ ಹಣ ಬೇಡ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

Misniter Dinesh Gundu Rao visited Mangaluru flood hit areas, praised DC Mullai Mugilan

ನಮ್ಮ ಕೃಷಿ ಭೂಮಿಗೆ‌ ಹಾನಿ ಆಗಿದೆ. ಮನೆಯೆಲ್ಲಾ ಮುಳುಗಡೆ ಆಗಿದೆ. ನೀವೆಲ್ಲಾ ಒಂದೆರಡು ದಿನ ಇಲ್ಲಿ ಬಂದು ನಿಲ್ಲಿ. ಆಗ ನಿಮಗೆ ಸಮಸ್ಯೆ ಅರ್ಥ ಆಗುತ್ತದೆ ಎಂದು ಜನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಲ್ಲೈ ಮುಗಿಲನ್​ಗೆ ಶಹಬ್ಬಾಸ್ ಎಂದ ಜನ

ಉಸ್ತುವಾರಿ ಸಚಿವರ ಮುಂದೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ಗೆ ಮೊಗೇರ್ ಕುದ್ರು ಜನರು ಶಹಬ್ಬಾಸ್​​​ಗಿರಿ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಯವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಡಿ. ಅವರು ಬಹಳ ಒಳ್ಳೆಯ ಅಧಿಕಾರಿ. ಜಿಲ್ಲಾಧಿಕಾರಿಗೆ ನಮ್ಮ ನೋವು ಕೇಳಿಸಿಕೊಳ್ಳುವ ತಾಳ್ಮೆ ಇದೆ ಎಂದು ಜನ ಮೆಚ್ಚುಗೆಯ ಮಾತುಗಳನ್ನಾಡಿದರು.

ಇದನ್ನೂ ಓದಿ: ಕಡಲ್ಕೊರೆತದಿಂದ ಮಂಗಳೂರು, ಉಡುಪಿಗೆ ಕಾದಿದೆ ಗಂಡಾಂತರ: 2040ಕ್ಕೆ ಶೇ 5ರಷ್ಟು ಭೂಮಿ ಸಮುದ್ರಪಾಲು

ಇದಕ್ಕೆ ಪ್ರತಿಕ್ರಿಯಿಸಿದ ಗುಂಡೂರಾವ್, ಜಿಲ್ಲಾಧಿಕಾರಿಯವರು ಮುಂದೆ ಬಡ್ತಿ ಪಡೆಯುತ್ತಾರೆ. ಅವರು ಬಹಳ ಒಳ್ಳೆಯ ಅಧಿಕಾರಿ, ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ