AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಫೇಸ್ಬುಕ್​ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಾಜರಾಗಿದ್ದಾರೆ.

ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ
ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 10, 2025 | 8:38 PM

Share

ಮಂಗಳೂರು, ಜನವರಿ 10: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ (girl) ಹಿಂದು ಯುವಕನ ಜತೆ ಮದುವೆಯಾಗಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದ ಯುವಕ ಹರೀಶ್ ಗೌಡನನ್ನು ಪ್ರೀತಿಸಿ ಸುಹಾನಾ ಮದುಮೆ ಮಾಡಿಕೊಂಡಿದ್ದಾರೆ. ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಫೇಸ್​ಬುಕ್​ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್​ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್​ ದಾಖಲಿಸಿದ್ದರು.

ಪ್ರೀತಿ ನಿರಾಕರಿಸಿದ ಯುವತಿ: ಭಗ್ನ ಪ್ರೇಮಿಯಿಂದ ಸೂಸೈಡ್

ಅಪ್ರಾಪ್ತೆಯೊಬ್ಬಳಿಂದ ಪ್ರೀತಿ ನಿರಾಕರಣೆ ‌ಹಿನ್ನೆಲೆ ಭಗ್ನ ಪ್ರೇಮಿಯೊಬ್ಬ ಅಪ್ರಾಪ್ತೆಯ ಮನೆಯ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿತ್ತು. ನಾಗಮಂಗಲ ‌ತಾಲೂಕಿನ ಬಸವೇಶ್ವರ ನಗರದ ನಿವಾಸಿ ರಾಮಚಂದ್ರ(21) ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ.

ಅಂದಹಾಗೆ ಲಾರಿ ಚಾಲಕನಾಗಿದ್ದ ಈತ, ಕಾಲೇಜು ಯುವತಿಯನ್ನ ಪ್ರೀತಿಸುತ್ತಿದ್ದ. ವರ್ಷದ ಹಿಂದೆ ಆಕೆಯನ್ನ ಮನೆಯಿಂದ ಕೂಡ ಕರೆದುಕೊಂಡು ಹೋಗಿದ್ದ. ಇದೇ ವಿಚಾರ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಕಿಡ್ನಾಪ್, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿ, ರಾಮಚಂದ್ರ ಜೈಲು ಪಾಲಾಗಿದ್ದ.

ಇದನ್ನೂ ಓದಿ: ಮಂಗಳೂರು: ಬೀಚ್​ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

ಆನಂತರ ರಾಜೀ ಸಂಧಾನ ಮಾಡಿಕೊಂಡು ಜೈಲ್​ನಿಂದ ಹೊರಬಂದಿದ್ದ. ಜೈಲ್​ನಿಂದ ಬಂದರೂ ಬುದ್ದಿ ಕಲಿತಿರಲಿಲ್ಲ. ಪದೇ ಪದೇ ಅಪ್ರಾಪ್ತೆಗೆ ಪೀಡಿಸುತ್ತಿದ್ದ. ನನ್ನ ವಾಟ್ಸಪ್ ಸ್ಟೇಟಸ್​ನಲ್ಲಿ ಲವ್ ಫೇಲ್ಯೂರ್ ಬಗ್ಗೆ ಹಾಕಿಕೊಂಡಿದ್ದ. ಈ ನಡುವೆ ಆಕೆ ಮತ್ತೊಬ್ಬನನ್ನ ಲವ್ ಮಾಡುತ್ತಿದ್ದಾಳೆ ಎಂಬ ಅನುಮಾನ ಕೂಡ. ಹೀಗಾಗಿ ಅದೊಂದು ದಿನ ಸ್ನೇಹಿತರ ಜೊತೆ ಎಣ್ಣೆ ಹೊಡೆದು ಮಧ್ಯರಾತ್ರಿ ಅಪ್ರಾಪ್ತಯ ಮನೆಯ ಮುಂದೆ ಹೋಗಿ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 pm, Fri, 10 January 25

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?