AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ

ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಸುಹಾನಾ, ಹಿಂದೂ ಯುವಕ ಹರೀಶ್ ಗೌಡರನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಫೇಸ್ಬುಕ್​ನಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದ ಜೋಡಿ, ಕಂಪ್ಯೂಟರ್ ತರಗತಿಗೆಂದು ಹೋಗಿದ್ದ ಸುಹಾನಾ ನಾಪತ್ತೆಯಾದ ನಂತರ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಾಜರಾಗಿದ್ದಾರೆ.

ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ
ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ: ನಾಪತ್ತೆಯಾಗಿದ್ದ ಜೋಡಿ ಪೊಲೀಸ್​ ಠಾಣೆಯಲ್ಲಿ ಪ್ರತ್ಯಕ್ಷ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 10, 2025 | 8:38 PM

Share

ಮಂಗಳೂರು, ಜನವರಿ 10: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ (girl) ಹಿಂದು ಯುವಕನ ಜತೆ ಮದುವೆಯಾಗಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದ ಯುವಕ ಹರೀಶ್ ಗೌಡನನ್ನು ಪ್ರೀತಿಸಿ ಸುಹಾನಾ ಮದುಮೆ ಮಾಡಿಕೊಂಡಿದ್ದಾರೆ. ಸ್ವಇಚ್ಛೆಯಿಂದ ಮದುವೆ ಆಗಿರುವುದಾಗಿ ಯುವತಿ ಹೇಳಿದ್ದಾಳೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಫೇಸ್​ಬುಕ್​ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್​ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್​ ದಾಖಲಿಸಿದ್ದರು.

ಪ್ರೀತಿ ನಿರಾಕರಿಸಿದ ಯುವತಿ: ಭಗ್ನ ಪ್ರೇಮಿಯಿಂದ ಸೂಸೈಡ್

ಅಪ್ರಾಪ್ತೆಯೊಬ್ಬಳಿಂದ ಪ್ರೀತಿ ನಿರಾಕರಣೆ ‌ಹಿನ್ನೆಲೆ ಭಗ್ನ ಪ್ರೇಮಿಯೊಬ್ಬ ಅಪ್ರಾಪ್ತೆಯ ಮನೆಯ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿತ್ತು. ನಾಗಮಂಗಲ ‌ತಾಲೂಕಿನ ಬಸವೇಶ್ವರ ನಗರದ ನಿವಾಸಿ ರಾಮಚಂದ್ರ(21) ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿ.

ಅಂದಹಾಗೆ ಲಾರಿ ಚಾಲಕನಾಗಿದ್ದ ಈತ, ಕಾಲೇಜು ಯುವತಿಯನ್ನ ಪ್ರೀತಿಸುತ್ತಿದ್ದ. ವರ್ಷದ ಹಿಂದೆ ಆಕೆಯನ್ನ ಮನೆಯಿಂದ ಕೂಡ ಕರೆದುಕೊಂಡು ಹೋಗಿದ್ದ. ಇದೇ ವಿಚಾರ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಕಿಡ್ನಾಪ್, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿ, ರಾಮಚಂದ್ರ ಜೈಲು ಪಾಲಾಗಿದ್ದ.

ಇದನ್ನೂ ಓದಿ: ಮಂಗಳೂರು: ಬೀಚ್​ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

ಆನಂತರ ರಾಜೀ ಸಂಧಾನ ಮಾಡಿಕೊಂಡು ಜೈಲ್​ನಿಂದ ಹೊರಬಂದಿದ್ದ. ಜೈಲ್​ನಿಂದ ಬಂದರೂ ಬುದ್ದಿ ಕಲಿತಿರಲಿಲ್ಲ. ಪದೇ ಪದೇ ಅಪ್ರಾಪ್ತೆಗೆ ಪೀಡಿಸುತ್ತಿದ್ದ. ನನ್ನ ವಾಟ್ಸಪ್ ಸ್ಟೇಟಸ್​ನಲ್ಲಿ ಲವ್ ಫೇಲ್ಯೂರ್ ಬಗ್ಗೆ ಹಾಕಿಕೊಂಡಿದ್ದ. ಈ ನಡುವೆ ಆಕೆ ಮತ್ತೊಬ್ಬನನ್ನ ಲವ್ ಮಾಡುತ್ತಿದ್ದಾಳೆ ಎಂಬ ಅನುಮಾನ ಕೂಡ. ಹೀಗಾಗಿ ಅದೊಂದು ದಿನ ಸ್ನೇಹಿತರ ಜೊತೆ ಎಣ್ಣೆ ಹೊಡೆದು ಮಧ್ಯರಾತ್ರಿ ಅಪ್ರಾಪ್ತಯ ಮನೆಯ ಮುಂದೆ ಹೋಗಿ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 pm, Fri, 10 January 25

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ