AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವಕ್ಕೆ ಸರ್ಕಾರದಿಂದ ವಿಚಿತ್ರ ನಿಯಮ, ಯಾರೂ ಪಾಲಿಸಬೇಡಿ ಎಂದು ಶಾಸಕ ವೇದವ್ಯಾಸ ಕಾಮತ್ ಕಿಡಿ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅರ್ಥವಿಲ್ಲದ ಷರತ್ತು ಹಾಕಿದ್ದಾರೆಂದು ಎಂದು ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ. ಕಳೆದ ವರ್ಷ ಇಲ್ಲದ ಷರತ್ತು ಈಗ ಏಕೆ? ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ಏಕೆ ಬೇಕು? ನಾವು ಯಾರಿಗೂ ಯಾವ ಮಾಹಿತಿಯನ್ನೂ ನೀಡುವುದಿಲ್ಲ. ಈ ಸೂಚನೆಗಳನ್ನು ಪಾಲಿಸೋದು ಬೇಡ ಎಂದಿದ್ದಾರೆ.

ಗಣೇಶೋತ್ಸವಕ್ಕೆ ಸರ್ಕಾರದಿಂದ ವಿಚಿತ್ರ ನಿಯಮ, ಯಾರೂ ಪಾಲಿಸಬೇಡಿ ಎಂದು ಶಾಸಕ ವೇದವ್ಯಾಸ ಕಾಮತ್ ಕಿಡಿ
ಶಾಸಕ ವೇದವ್ಯಾಸ ಕಾಮತ್
ಅಶೋಕ್​ ಪೂಜಾರಿ, ಮಂಗಳೂರು
| Edited By: ಆಯೇಷಾ ಬಾನು|

Updated on: Sep 05, 2024 | 8:18 AM

Share

ಮಂಗಳೂರು, ಸೆ.05: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ (Ganesh Chaturthi) ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ ವಿಘ್ನ ವಿನಾಯಕನ ಹಬ್ಬ ಆಚರಣೆಗೆ ಈಗ ವಿಘ್ನವೊಂದು ಎದುರಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಚಿತ್ರ ವಿಚಿತ್ರ ನೀತಿ ನಿಯಮ ಹೇರುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ (Karnataka Government) ವಿರುದ್ಧ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ (Veda Vyasa Kamath) ಕಿಡಿಕಾರಿದ್ದಾರೆ.

ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಆಯೋಜಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು? ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ? ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥ ವಿಲ್ಲದ ಸೂಚನೆಗಳನ್ನು ಸರ್ಕಾರ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಕಾಂಗ್ರೆಸ್ಸಿಗರಿಗೆ ಗಣೇಶನ ಮೇಲೆ, ಹಿಂದೂ ಹಬ್ಬಗಳ ಮೇಲೆ ಯಾಕಿಷ್ಟು ಕೋಪ? ಕೂಡಲೇ ಇದನ್ನೆಲ್ಲ ಬಿಟ್ಟು ಹಿಂದೂ ಧಾರ್ಮಿಕ ಭಾವನೆಗಳಿಗೆ ಬೆಲೆ ನೀಡಬೇಕು ಎಂದು ಮಂಗಳೂರಿನಲ್ಲಿ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗಣೇಶ ಹಬ್ಬದ ಪ್ರಸಾದ: ವಿಘ್ನಾದೇಶ ಹೊರಡಿಸುವ ಹಕೀಕತ್ತು ಏನಿದೆ? ಸಿಎಂಗೆ ಬಿಜೆಪಿ ಪ್ರಶ್ನೆ

ಇನ್ನು ಈ ಸಂಬಂಧ ಮಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಹಲವು ವರ್ಷಗಳಿಂದ ಆಚರಿಸಲಾಗುತ್ತಿದೆ. ಈ ಹಿಂದೆ ಇಲ್ಲದಂತಹ ಹೊಸ ನಿಯಮವನ್ನು ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿರುವ ಆಹ್ವಾನಿತರ ಹೆಸರು ಮತ್ತು ಫೋನ್ ನಂಬರ್ ಕೊಡಬೇಕಂತೆ. ಅತಿಥಿಗಳ ನಂಬರ್, ಹೆಸರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಅವಶ್ಯಕತೆ ಇಲ್ಲ. ಏನೇ ಹೆಚ್ಚು ಕಮ್ಮಿ‌ ಆದರೂ ಗಣೇಶೋತ್ಸವ ಸಮಿತಿ‌ ಇರುತ್ತೆ. ಸಮಿತಿಯವರನ್ನು ಪ್ರಶ್ನೆ ಮಾಡಬಹುದು. ಶೋಭಯಾತ್ರೆಯಲ್ಲಿ ಸಾಗುವ ಟ್ಯಾಬ್ಲೋ ಯಾವುದು? ವಾಹನದ ಮಾಲೀಕ ಯಾರು?ದಾಖಲೆ, ವಾಹನ ದಾಖಲೆ, ಚಾಲಕನ ದಾಖಲೆ ಬೇಕಂತೆ. ಈ ದಾಖಲೆ ಹಿಡಿದುಕೊಂಡು ಮುಂಚಿತವಾಗಿ ಪೊಲೀಸ್ ಇಲಾಖೆಗೆ ಕೊಡಬೇಕಂತೆ. ಯಾವ ಯಾವ ಟ್ಯಾಬ್ಲೋ ಬರುತ್ತೆ ಎಂದು ಮೊದಲೇ ಗೊತ್ತಾಗಲ್ಲ. ಇಲ್ಲಿವರೆಗೂ ಇದನ್ನೆಲ್ಲಾ ಕೇಳಿರಲಿಲ್ಲ. ಆದ್ರೆ ಈ ವರ್ಷ ಯಾಕೆ ಕೇಳ್ತಿದ್ದಾರೆ? ಎಂದು ಕಿಡಿಕಾರಿದ್ದಾರೆ.

ಸಮಿತಿಯವರು ಹತ್ತಾರು ಬಾರಿ ಪೊಲೀಸ್ ಸ್ಟೇಷನ್ ಗೆ ಅಲೆಯುತ್ತಿದ್ದಾರೆ. ಈ ಹೊಸ ನಿಯಮಗಳ ಜಾರಿಗೆ ಬಿಜೆಪಿ ಖಂಡಿಸುತ್ತೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆಗೆ ತೊಂದ್ರೆ ಮಾಡೋದು ಕಾಂಗ್ರೆಸ್ ಸರ್ಕಾರದ ಡಿಎನ್​ಎನಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಈ ರೀತಿಯ ತೊಂದರೆ ಆಗಿರಲಿಲ್ಲ. ಸಾರ್ವಜನಿಕ ಗಣೇಶೋತ್ಸವ ಆಚರಣೆ ಕಡಿಮೆ ಆಗಬೇಕು. ಹಿಂದೂ ಆಚರಣೆಗಳಿಗೆ ತೊಂದ್ರೆ ಕೊಡಬೇಕೆಂದು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಕಮೀಷನರೇಟ್ ಹಾಗೂ ಜಿಲ್ಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಸಾರ್ವಜನಿಕ ಗಣೇಶೋತ್ಸವ ನಡೆಯುತ್ತೆ. ಈ ನಿಯಮಗಳನ್ನು ಯಾರು ಸಹ ಪಾಲಿಸಬೇಡಿ. ಸರ್ಕಾರ ಏನು ಬೇಕಾದರೂ ಹೇಳಲಿ. ನೂರು ಬಾರಿ ಓಡಾಡಿ ಕಷ್ಟ ಅನುಭವಿಸಬೇಕೆಂದು ದಾಖಲೆ ಸಂಗ್ರಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಈ ನಿಯಮ ಮಾಡಿದೆ. ಸಡಿಲಿಕೆ ಮಾಡದೇ ಇದ್ದರೆ ಕಳೆದ ವರ್ಷದಂತೆ ಮಾಡಿ. ಯಾವುದೇ ಇಲಾಖೆಯವರು ಬಂದರೂ ನಾವು ನಿಮ್ಮ ಜೊತೆ ಇದ್ದೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ