AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಮಕ್ಕಳಿಗೆ ಧಮ್ಕಿ

ಶ್ರೀರಾಮನಿಗೆ ಅವಹೇಳನ ಮಾಡಿದ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು. ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದರು. ಈ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಲಾಗಿದೆ ಎನ್ನುವ ಆಡಿಯೋವನ್ನು ತೋರಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಮಂಗಳೂರು: ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಮಕ್ಕಳಿಗೆ ಧಮ್ಕಿ
ಮಂಗಳೂರು: ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಮಕ್ಕಳಿಗೆ ಧಮ್ಕಿ ಹಾಕಲಾಗಿದೆ ಎಂದು ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Feb 12, 2024 | 6:49 PM

Share

ಮಂಗಳೂರು, ಫೆ.12: ಶ್ರೀರಾಮನಿಗೆ ಅವಹೇಳನ ಮಾಡಿದ ಮಂಗಳೂರಿನ (Mangaluru) ಸಂತ ಜೆರೋಸಾ ಶಾಲೆಯ (St Gerosa school) ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು. ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದ್ದರು. ಈ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಲಾಗಿದೆ ಎನ್ನುವ ಆಡಿಯೋವನ್ನು ತೋರಿಸಿ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ಆರೋಪಿಸಿದ್ದಾರೆ.

ಜೆರೋಸಾ ಶಾಲೆಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಮಕ್ಕಳಿಗೆ ಧಮ್ಕಿ ಹಾಕಲಾಗಿದೆ ಎಂದು ವಾಯ್ಸ್ ಮೆಸೇಜ್ ತೋರಿಸಿ ಆರೋಪಿಸಿದ್ದಾರೆ.

ಶಿಕ್ಷಕಿ ಅಮಾನತು; ಶಾಲಾ ಆವರಣದಲ್ಲಿ ಸಂಭ್ರಮಾಚರಣೆ

ಪ್ರಕರಣ ಸಂಬಂಧ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿ ಆದೇಶಿಸಿದೆ. ಪ್ರಭಾ ಅಮಾನತು ಮಾಡುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಸಂತ ಜೆರೋಸಾ ಶಾಲೆಯ ಮುಂಭಾಗ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮಾಚರಣೆ ಮಾಡಿದ್ದರು. ಶಾಲೆಯ ಮುಂದೆ ಕುಣಿದು ಕುಪ್ಪಳಿಸಿದ ಜೆರೋಸಾ ಶಾಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು.

ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ: ವೇದವ್ಯಾಸ್ ಕಾಮತ್

ಶ್ರೀರಾಮನಿಗೆ ಅವಹೇಳ ಮಾಡಿದ ಶಿಕ್ಷಕಿ ವಿರುದ್ಧ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದರು. ಶಾಲೆ ವಿರುದ್ಧ ಆಕ್ರೋಶ ಭುಗಿಲೇಲುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮುಖ್ಯ ಶಿಕ್ಷಕಿ, ಪ್ರಕರಣ ಸಂಬಂಧ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಲಿಖಿತ ರೂಪದಲ್ಲಿರುವ ಆದೇಶ ಪ್ರತಿಯನ್ನು ಓದಿದಾಗ ಆಡಳಿತ ಮಂಡಳಿಯು ಪ್ರಕರಣ ಸಂಬಂಧ ತಪ್ಪು ಒಪ್ಪಿಕೊಳ್ಳದಿವುದನ್ನು ಗಮನಿಸಿ ಪ್ರತಿಭಟನಾನಿರತರ ಆಕ್ರೋಶದ ಕಿಚ್ಚು ಹೆಚ್ಚಾಯಿತು.

ಇದನ್ನೂ ಓದಿ: ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮುಖ್ಯ ಶಿಕ್ಷಕಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ವೇದವ್ಯಾಸ್ ಕಾಮತ್, ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡುವುದಿಲ್ಲ. ನಿಮ್ಮ ದಾರಿಗೆ ನಿಮಗೆ, ನಮ್ಮ ದಾರಿ ನಮಗೆ ಅಂತ ಎಚ್ಚರಿಕೆ ನೀಡಿದರು. ಅಮಾನತು ಮಾಡಿದರೂ ತಪ್ಪು ಒಪ್ಪಿಕೊಳ್ಳದ ಆಡಳಿತ ಮಂಡಳಿಯ ನಡೆ ಮತ್ತೆ ಗೊಂದಲ ಮತ್ತು ಉದ್ವಿಗ್ನತೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ