AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು

ಅನುದಾನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಶಾಸಕನ ವಿರುದ್ಧ ಹಾಕಿದ್ದ ಪೋಸ್ಟ್​ ಸಂಬಂಧ ಶಾಸಕನ ಬೆಂಬಲಿಗರು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಜೊತೆಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಘಟನೆ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ.

ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಶಾಸಕನ ಬೆಂಬಲಿಗರು, ಪುತ್ತೂರಲ್ಲಿ ಕೇಸ್ ದಾಖಲು
ಪುತ್ತೂರು ನಗರ ಠಾಣೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 18, 2024 | 7:05 AM

Share

ಮಂಗಳೂರು, ಮಾರ್ಚ್​.18: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ (Ashok Rai) ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ.

ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಅನ್ನೋ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಹಾಕಿದ್ದರು. ಇದೇ ವಿಚಾರಕ್ಕೆ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡವೊಂದು ಮನೆಗೆ ನುಗ್ಗಿ ದಾಂಧಲೆ ಮಾಡಿದೆ. ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾರ್ ಶುರುವಾಗಿದೆ. ಚೆಂಡೆ ವಾಳಗದ ಮೂಲಕ ಕಾಂಗ್ರೆಸ್ ನ ಅನುದಾನದ ಬ್ಯಾನರ್ ಹಿಡಿದು ಬಿಜೆಪಿಯ ಜಯಾನಂದ ಅವರ ಮನೆಗೆ ನುಗ್ಗಿ ಪುಂಡಾಟ ಮೆರೆಯಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ

ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಬಳಿ ನಡೆದಿದೆ. ದಿಬ್ಬೂರುಹಳ್ಳಿ ಮೂಲದ 12 ವರ್ಷದ ಬಾಲಕ ದೇವಪ್ಪ ಮೃತಪಟ್ಟಿದ್ದಾನೆ. ಮೇಕೆಗಳ ಮೇವಿಗಾಗಿ ಮರದಲ್ಲಿ ರೆಂಬೆ ಕಡಿಯುವಾಗ ದುರಂತ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಲ್ಮೆಟ್​ ಧರಿಸದೆ ASI ಸಾವು.. ಪಿಎಸ್​ಐ ಅಮಾನತು

ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ASI ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ದೊಡವಾಡ ಠಾಣೆ ASI ವಿಜಯಕಾಂತ ಮಿಕಲಿ ಸಾವಿಗೀಡಾಗಿದ್ದಾರೆ. ಎಸ್​ಪಿ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ ಮಾಡಿದ್ರು. ಆದ್ರೆ ASI ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದು, ಆದೇಶ ಸಮರ್ಪಕವಾಗಿ ಅನುಷ್ಠಾನಗೊಳಿಸ ದಿದ್ದಕ್ಕೆ, ದೊಡವಾಡ ‌ಪಿಎಸ್ಐ ನಂದೀಶ್ ಅಮಾನತು ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!