AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದಲ್ಲಿ ತಡರಾತ್ರಿ 1.12ರ ಸುಮಾರಿಗೆ ಲಘು ಭೂಕಂಪನ

ಸುಳ್ಯ ಪೇಟೆಯಲ್ಲಿ ಭೂಕಂಪನ ಅನುಭವ ಆಗಿದ್ದು, ಜನರು ಭಯದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸುಮಾರು 4-5 ಸೆಕೆಂಡ್​ಗಳ ಕಾಲ ಕಂಪನ ಆಗಿದೆ. ಕಳೆದ ಬಾರಿಗಿಂತ ಹೆಚ್ಚಿನ ತೀವ್ರತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದಲ್ಲಿ ತಡರಾತ್ರಿ 1.12ರ ಸುಮಾರಿಗೆ ಲಘು ಭೂಕಂಪನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 01, 2022 | 7:41 AM

Share

ಮಡಿಕೇರಿ: ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದಲ್ಲಿ ತಡರಾತ್ರಿ 1.12ರ ಸುಮಾರಿಗೆ ಲಘು ಭೂಕಂಪನ (Earthquake) ವಾಗಿದೆ. ಕೊಡಗು ಜಿಲ್ಲೆ ಚೆಂಬು, ಪೆರಾಜೆ, ಕರಿಕೆ, ಸಂಪಾಜೆ. ಅದೇ ರೀತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸಂಪಾಜೆ‌ ಗ್ರಾಮ, ಕಲ್ಲುಗುಂಡಿ ವ್ಯಾಪ್ತಿಯಲ್ಲೂ ಭೂಮಿ ಕಂಪಿಸಿರುವ ಅನುಭವ ಉಂಟಾಗಿದೆ. ಕಳೆದ ಒಂದು ವಾರದಲ್ಲಿ ಐದು ಭಾರಿ ಭೂಮಿ ಕಂಪಿಸಿದೆ. ಕಳೆದ ಮೂರು ದಿನಗಳ ಹಿಂದೆಯೂ ಜಿಲ್ಲೆಯಲ್ಲಿ ಭೂಮಿ ಕಂಪಿಸಿತ್ತು. ಇದಕ್ಕೂ ಮೊದಲು 2018ರಲ್ಲಿ ಇದೇ ರೀತಿ ಕಂಪಿಸಿತ್ತು. ಅದೇ ವರ್ಷ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಚಾರಣೆ, ಜಾಮೀನು ಪರಿಶೀಲನೆ

ಸುಳ್ಯ ಪೇಟೆಯಲ್ಲಿ ಭೂಕಂಪನ ಅನುಭವ ಆಗಿದ್ದು, ಜನರು ಭಯದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸುಮಾರು 4-5 ಸೆಕೆಂಡ್​ಗಳ ಕಾಲ ಕಂಪನ ಆಗಿದೆ. ಕಳೆದ ಬಾರಿಗಿಂತ ಹೆಚ್ಚಿನ ತೀವ್ರತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮೂರು ದಿನಗಳ ಹಿಂದೆ ಜಿಲ್ಲೆಯಲ್ಲಿ ಭೂಕಂಪನ ದೃಢವಾಗಿದ್ದು, ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದೆ. ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು.

ಮಂಡ್ಯದಲ್ಲೂ ಭೂಕಂಪನ

ಜೂನ್ 23ಕ್ಕೆ ಮಂಡ್ಯ ಜಿಲ್ಲೆಯ ಕೆಲವೆಡೆಯೂ ಜನರಿಗೆ ಮುಂಜಾನೆ 4.40ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿ, ಚಿನ್ನೇನಹಳ್ಳಿ, ಮಾದಾಪುರ, ಗೊಂದಿಹಳ್ಳಿ, ಬಿದರಹಳ್ಳಿ, ಗೊಡೇಹೊಸಹಳ್ಳಿಯ ಗ್ರಾಮಗಳ ಜನರು ಭೂಕಂಪದಿಂದ ಆತಂಕಗೊಂಡಿದ್ದರು. ಹಾಸನ ಜಿಲ್ಲೆಯ, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ನಸುಕಿನ 4.30ರಿಂದ 5 ಗಂಟೆಯ ಅವಧಿಯಲ್ಲಿ ಭೂಮಿಯು ಕಂಪಿಸಿತ್ತು.

ಇದನ್ನೂ ಓದಿ: IIP Index: ಮೇ ತಿಂಗಳಲ್ಲಿ ಪ್ರಮುಖ ವಲಯಗಳ ಉತ್ಪಾದನೆ ಶೇ 18.1ರಷ್ಟು ವಿಸ್ತರಣೆ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು