Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ತಾಯಿ ಬಳಿ ಹೋಂಗಾರ್ಡ್ ಹಣ ವಸೂಲಿ ಮಾಡಿದ ಪ್ರಕರಣ, ಹೊರಬಿತ್ತು ತಾಯಿಯ ಮಸಾಜ್ ಪಾರ್ಲರ್​​ನ ಚಿನ್ನದ ಕಥೆ!

ನಟಿಯ ತಾಯಿಯೊಬ್ಬರು ಮೂರ್ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸ್ವತಃ ಎರಡು ಕಡೆ ಮಸಾಜ್ ಪಾರ್ಲರ್ ನಡೆಸುತ್ತಿದ್ರು. ಮಾಜಿ ಹೋಮ್ ಗಾರ್ಡ್ ಅವರ ಮನೆಗೆ ನುಗ್ಗಿ ಎರಡು ಬಾರಿ ಬ್ಲಾಕ್ ಮೇಲ್ ಮಾಡಿ, ಒಟ್ಟು 38 ಸಾವಿರ ಹಣ ವಸೂಲಿ ಮಾಡಿದ್ದ. ಆದರ ಮುಂದಿನದ್ದೇ ಕುತೂಹಲಕಾರಿ ಸ್ಟೋರಿ!

ನಟಿಯ ತಾಯಿ ಬಳಿ ಹೋಂಗಾರ್ಡ್ ಹಣ ವಸೂಲಿ ಮಾಡಿದ ಪ್ರಕರಣ, ಹೊರಬಿತ್ತು ತಾಯಿಯ ಮಸಾಜ್ ಪಾರ್ಲರ್​​ನ ಚಿನ್ನದ ಕಥೆ!
ಹೊರಬಿತ್ತು ನಟಿ ತಾಯಿಯ ಮಸಾಜ್ ಪಾರ್ಲರ್​​ ಚಿನ್ನದ ಕಥೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Mar 14, 2023 | 6:51 AM

ಮಂಗಳೂರಿನ (Mangaluru) ನಟಿ ಓರ್ವಳ ತಾಯಿ ಬಳಿ ನಕಲಿ ಪೊಲೀಸ್ ವೇಷಧಾರಿಯೊಬ್ಬ ಹಣ ವಸೂಲಿ ಮಾಡಿದ ಪ್ರಕರಣಕ್ಕೆ (Blackmail) ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಅಂದರ್ ಆಗಿದ್ದು ಆತ ಪೊಲೀಸ್ ಅಲ್ಲ ಅನ್ನೊದು ಗೊತ್ತಾಗಿದೆ. ಆದ್ರೆ ಆತ ಮಾಜಿ ಹೋಮ್ ಗಾರ್ಡ್ (Home Guard) ಆಗಿದ್ದಾನೆ. ಪೊಲೀಸ್ ತನಿಖೆ ವೇಳೆ ಆತ ಮಸಾಜ್ ಪಾರ್ಲರ್ ನ ಚಿನ್ನದ ಕಥೆ ಹೇಳುತ್ತಿದ್ದಾನೆ. ಈ ಪಾರ್ಲರ್ ನ ಚಿನ್ನದ ಕಥೆ ಏನು. ಈ ಸ್ಟೋರಿ ನೋಡಿ. ವೇಶ್ಯಾವಾಟಿಕೆ ಹೆಸರಿನಲ್ಲಿ ಪೊಲೀಸರು ಹಣ ಪೀಕಿದ್ದಾರೆ ಅನ್ನೊ ಆರೋಪ ಕೇಳಿಬಂದಿತ್ತು. ಪ್ರಕರಣದ ಆರೋಪಿ ಬಂಧನವಾಗಿದ್ದಾನೆ. ಹಣ ವಸೂಲಿ ಮಾಡಿದ್ದು ಪೊಲೀಸ್ ಅಲ್ಲ ಅನ್ನೊದು ಈಗ ಬೆಳಕಿಗೆ ಬಂದಿದೆ. ಆದ್ರೆ ಆತ ಮಾಜಿ ಹೋಮ್ ಗಾರ್ಡ್ ಆಗಿದ್ದವನು. ಈ ಮಾಜಿ ಹೋಮ್ ಗಾರ್ಡ್ ಈಗ ಬಂಧಿತ ಆರೋಪಿಯಾಗಿದ್ದಾನೆ (Arrest).

ಆ ಮಹಿಳೆ ಮಂಗಳೂರು ನಿವಾಸಿ. ಮೂರ್ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸ್ವತಃ ಎರಡು ಕಡೆ ಮಸಾಜ್ ಪಾರ್ಲರ್ ನಡೆಸುತ್ತಿದ್ರು. ಈಗ ಮಕ್ಕಳೊಂದಿಗೆ ಮನೆಯಲ್ಲೇ ಇದ್ದಾರೆ. ಈಕೆಯ ಮಗಳು ಸಿನಿಮಾ ನಟಿ. ಈಕೆ ತನ್ನ ಮನೆಯಲ್ಲಿದ್ದಾಗ ಪೊಲೀಸ್ ವೇಷ ಹಾಕಿ ಬಂದ ಈ ಮಾಜಿ ಹೋಮ್ ಗಾರ್ಡ್ ಶಿವರಾಜ್ ದೇವಾಡಿಗೆ ತಾನು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅಂತಾ ಪರಿಚಯಿಸಿಕೊಂಡಿದ್ದಾನೆ.

ನಿಮ್ಮ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅಂತಾ ದೂರು ಬಂದಿದೆ. ಸಾಹೇಬ್ರು ರೈಡ್ ಮಾಡುತ್ತಾರೆ. ಅವರು ರೈಡ್ ಮಾಡಬಾರದು ಅಂದ್ರೆ 20 ಸಾವಿರ ಹಣ ನೀಡಿ ಅಂತಾ ಎರಡು ಬಾರಿ ಬ್ಲಾಕ್ ಮೇಲ್ ಮಾಡಿ ಒಟ್ಟು 38 ಸಾವಿರ ಹಣ ವಸೂಲಿ ಮಾಡಿದ್ದ. ಈ ಬಗ್ಗೆ ಟಿವಿ9 ನಲ್ಲಿ ವರದಿ ಪ್ರಸಾರವಾಗಿತ್ತಿದ್ದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಆರೋಪಿ ಶಿವರಾಜ್ ದೇವಾಡಿಗನನ್ನು ಬಂಧಿಸಿದ್ದಾರೆ. ಬಂಧಿತ ಶಿವರಾಜ್ ದೇವಾಡಿಗೆ ಬೇರೆಯೆ ಕತೆಯನ್ನು ಹೇಳುತ್ತಿದ್ದಾನೆ. ಈ ಮಹಿಳೆ ನಡೆಸುತ್ತಿದ್ದ ಪಾರ್ಲರ್ ಗೆ ಗಿರಾಕಿಯಾಗಿ ಹೋಗಿದ್ದಾಗ ಆಕೆ ನನ್ನನ್ನು ಬ್ಲಾಕ್ ಮೇಲ್ ಮಾಡಿದ್ರು. ಕಿರುಚಿಕೊಂಡು ಹೊರಗಡೆ ಹೋಗಿ ನನಗೆ ಕಿರುಕುಳ ನೀಡಿದ ಅಂತಾ ಹೇಳುತ್ತೇನೆ ಅಂತಾ ಹೇಳಿ, ನನ್ನ ಬಳಿಯಿದ್ದ ಚಿನ್ನದ ಚೈನ್ ಕಿತ್ತುಕೊಂಡಿದ್ರು. ಆದ್ರಿಂದ ನಾನು ಈಕೆಗೆ ಹೀಗೆ ಬ್ಲಾಕ್ ಮೇಲ್ ಮಾಡಿ ಹಣವನ್ನು ವಸೂಲಿ ಮಾಡಿದೆ ಅಂತಾ ಹೇಳಿದ್ದಾನೆ ಬಂಧಿತ ಆರೋಪಿ ಶಿವರಾಜ್ ದೇವಾಡಿಗ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಮಹಿಳೆ, ಈತ ನನ್ನ ಕಸ್ಟಮರ್ ಆಗರಲಿಲ್ಲ. ಆ ವ್ಯಕ್ತಿಯನ್ನು ನಾನು ಅವತ್ತು ಮೊದಲನೇ ಸಲ ನೋಡಿದ್ದು. ನಾನು ಆತನ ಬಳಿ ಯಾವುದೇ ಚಿನ್ನದ ಚೈನ್ ಕಿತ್ತುಕೊಂಡಿಲ್ಲ. ಆತನೇ ಸುಳ್ಳು ಹೇಳುತ್ತಿದ್ದಾನೆ ಅಂತಾ ಮಹಿಳೆ ಹೇಳಿದ್ದಾರೆ.

ಸದ್ಯ ಕಾವೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಹೋಮ್ ಗಾರ್ಡ್ ಆಗಿದ್ದ ಶಿವರಾಜ್ ಗೆ ಪೊಲೀಸರ ಹಾವಭಾವ ಗೊತ್ತಾಗಿದ್ದಿದ್ದರಿಂದ ಅವರ ರೀತಿ ಆಕ್ಟಿಂಗ್ ಮಾಡಿ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾನೆ. ಇನ್ನು ಆರೋಪಿ ಪ್ರಕಾರ ಚಿನ್ನದ ಚೈನ್ ವಸೂಲಿ ರಿವೇಂಜ್ ಆಗಿದೆ. ಆದ್ರೆ ಪೊಲೀಸ್ ತನಿಖೆಯಲ್ಲಿ ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕಿದೆ.

ವರದಿ: ಪೃಥ್ವಿರಾಜ್ ಬೊಮ್ಮನಕೆರೆ, ಟಿವಿ9, ಮಂಗಳೂರು 

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್