AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ

ಅಭಿಜಿತ್ ಅವರನ್ನು ಮುಸ್ಲಿಂ ಯುವಕ ಎಂದು ಭಾವಿಸಿದ ಗುಂಪು, ಹಿಂದೂ ಹುಡುಗಿ ಜೊತೆ ಏನು ಕೆಲಸ ಎಂದು ಪ್ರಶ್ನಿಸಿದ್ದು, ಹಲ್ಲೆಗೆ ಮುಂದಾಗಿದೆ. ಘಟನೆ ಸಂಬಂಧ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ
ಬಂಧಿತ ಆರೋಪಿಗಳು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Ganapathi Sharma

Updated on: Jul 31, 2023 | 6:04 PM

ಮಂಗಳೂರು, ಜುಲೈ 31: ಬಿಸಿ ರೋಡ್​​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ (Moral Policing) ನಡೆಸಿ ಹಲ್ಲೆಗೆ ಯತ್ನಿಸಿರುವ ಘಟನೆಯ ಬೆನ್ನಲ್ಲೇ ಮಂಗಳೂರಿನಲ್ಲಿಯೂ (Mangaluru) ಅಂಥದ್ದೇ ಕೃತ್ಯ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಸ್ಥಳೀಯ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿತ್ತು. ಘಟನೆ ಸಂಬಂಧ ಇದೀಗ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಸ್ಥಳೀಯ ಖಾಸಗಿ ವೆಬ್​ಸೈಟೊಂದರ ವರದಿಗಾರ ಅಭಿಜಿತ್ ಎಂಬವರು ಸ್ನೇಹಿತೆ ಜೊತೆ ಕಾವೂರು ಬಳಿಯ ರೆಸ್ಟೋರೆಂಟ್​ಗೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಕೆಲ ಯುವಕರು ಅವರನ್ನು ಪ್ರಶ್ನಿಸಿದ್ದಾರೆ. ‘ನೀನು ಮುಸ್ಲಿಂ ಅಲ್ಲವೇ’ ಎಂದು ಪ್ರಶ್ನಿಸಿದ್ದ ಯುವಕರ ಗುಂಪು ಶಬ್ದಗಳಿಂದ ನಿಂದನೆ ಮಾಡಿದೆ.

ಅಭಿಜಿತ್ ಅವರನ್ನು ಮುಸ್ಲಿಂ ಯುವಕ ಎಂದು ಭಾವಿಸಿದ ಗುಂಪು, ಹಿಂದೂ ಹುಡುಗಿ ಜೊತೆ ಏನು ಕೆಲಸ ಎಂದು ಪ್ರಶ್ನಿಸಿದ್ದು, ಹಲ್ಲೆಗೆ ಮುಂದಾಗಿದೆ. ಘಟನೆ ಸಂಬಂಧ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಘಟನೆ ಸಂಬಂಧ ಕೋಟೇಕಾರು ನಿವಾಸಿ ಚೇತನ್ (37) ಹಾಗೂ ಯೆಯ್ಯಾಡಿ ನಿವಾಸಿ ನವೀನ್(43) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕುಟುಂಬದೊಂದಿಗೆ ಹೊಟೇಲ್​ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಿಸಿ ರೋಡ್​​ನಲ್ಲಿ ಅದೇ ದಿನ (ಜುಲೈ 28) ನಡೆದಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Mangaluru News: ಬಿಸಿ ರೋಡ್​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ, ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿವೆ. ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಉಳ್ಳಾಲದಲ್ಲಿ ನೈತಿಕ ಪೊಲೀಸ್ ಗಿರಿ ನಡೆದ ಬಗ್ಗೆ ವರದಿಯಾಗಿತ್ತು. ನಂತರ, ಅಂಥ ಘಟನೆಗಳ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​​ ಗಿರಿ ಮುಂದುವರಿದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ