AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ

ಅಭಿಜಿತ್ ಅವರನ್ನು ಮುಸ್ಲಿಂ ಯುವಕ ಎಂದು ಭಾವಿಸಿದ ಗುಂಪು, ಹಿಂದೂ ಹುಡುಗಿ ಜೊತೆ ಏನು ಕೆಲಸ ಎಂದು ಪ್ರಶ್ನಿಸಿದ್ದು, ಹಲ್ಲೆಗೆ ಮುಂದಾಗಿದೆ. ಘಟನೆ ಸಂಬಂಧ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ
ಬಂಧಿತ ಆರೋಪಿಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 31, 2023 | 6:04 PM

Share

ಮಂಗಳೂರು, ಜುಲೈ 31: ಬಿಸಿ ರೋಡ್​​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ (Moral Policing) ನಡೆಸಿ ಹಲ್ಲೆಗೆ ಯತ್ನಿಸಿರುವ ಘಟನೆಯ ಬೆನ್ನಲ್ಲೇ ಮಂಗಳೂರಿನಲ್ಲಿಯೂ (Mangaluru) ಅಂಥದ್ದೇ ಕೃತ್ಯ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಸ್ಥಳೀಯ ಖಾಸಗಿ ವೆಬ್​ಸೈಟೊಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿತ್ತು. ಘಟನೆ ಸಂಬಂಧ ಇದೀಗ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಸ್ಥಳೀಯ ಖಾಸಗಿ ವೆಬ್​ಸೈಟೊಂದರ ವರದಿಗಾರ ಅಭಿಜಿತ್ ಎಂಬವರು ಸ್ನೇಹಿತೆ ಜೊತೆ ಕಾವೂರು ಬಳಿಯ ರೆಸ್ಟೋರೆಂಟ್​ಗೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಕೆಲ ಯುವಕರು ಅವರನ್ನು ಪ್ರಶ್ನಿಸಿದ್ದಾರೆ. ‘ನೀನು ಮುಸ್ಲಿಂ ಅಲ್ಲವೇ’ ಎಂದು ಪ್ರಶ್ನಿಸಿದ್ದ ಯುವಕರ ಗುಂಪು ಶಬ್ದಗಳಿಂದ ನಿಂದನೆ ಮಾಡಿದೆ.

ಅಭಿಜಿತ್ ಅವರನ್ನು ಮುಸ್ಲಿಂ ಯುವಕ ಎಂದು ಭಾವಿಸಿದ ಗುಂಪು, ಹಿಂದೂ ಹುಡುಗಿ ಜೊತೆ ಏನು ಕೆಲಸ ಎಂದು ಪ್ರಶ್ನಿಸಿದ್ದು, ಹಲ್ಲೆಗೆ ಮುಂದಾಗಿದೆ. ಘಟನೆ ಸಂಬಂಧ ಕಾವೂರು ಪೊಲೀಸ್ ಠಾಣೆಗೆ ಅಭಿಜಿತ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಘಟನೆ ಸಂಬಂಧ ಕೋಟೇಕಾರು ನಿವಾಸಿ ಚೇತನ್ (37) ಹಾಗೂ ಯೆಯ್ಯಾಡಿ ನಿವಾಸಿ ನವೀನ್(43) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕುಟುಂಬದೊಂದಿಗೆ ಹೊಟೇಲ್​ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯ ಬಿಸಿ ರೋಡ್​​ನಲ್ಲಿ ಅದೇ ದಿನ (ಜುಲೈ 28) ನಡೆದಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Mangaluru News: ಬಿಸಿ ರೋಡ್​ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ, ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿವೆ. ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಉಳ್ಳಾಲದಲ್ಲಿ ನೈತಿಕ ಪೊಲೀಸ್ ಗಿರಿ ನಡೆದ ಬಗ್ಗೆ ವರದಿಯಾಗಿತ್ತು. ನಂತರ, ಅಂಥ ಘಟನೆಗಳ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​​ ಗಿರಿ ಮುಂದುವರಿದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!