ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್​​ಗಿರಿ: ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನ

ದಕ್ಷಿಣ ಕನ್ನಡ ಜಿಲ್ಲೆ ಹೇಳಿ ಕೇಳಿ ಕೋಮ ಸೂಕ್ಷ್ಮ ಪ್ರದೇಶ. ಯಾವುದೇ ಘಟನೆ ನಡೆದರೂ ಅದಕ್ಕೆ ಕೋಮು ಅನ್ನೋದು ತಳುಕು ಹಾಕಿಕೊಂಡಿರುತ್ತದೆ. ಇದೀಗ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಮತ್ತೆ ನೈತಿಕ ಪೊಲೀಸ್​​ಗಿರಿ ಜರುಗಿದೆ. ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನಿಸಲಾಗಿದೆ. ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್​​ಗಿರಿ: ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನ
ಪ್ರಾತಿನಿಧಿಕ ಚಿತ್ರ
Edited By:

Updated on: Dec 10, 2023 | 2:52 PM

ಮಂಗಳೂರು, ಡಿಸೆಂಬರ್​​​ 10: ಕರಾವಳಿ ಹೇಳಿಕೇಳಿ ಕೋಮು ಸೂಕ್ಷ್ಮ ಪ್ರದೇಶ. ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಸಾಮಾನ್ಯವಾಗಿದೆ. ಇದೀಗ ಮತ್ತೆ ನೈತಿಕ ಪೊಲೀಸ್​​ಗಿರಿ (Moral Policing) ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಘಟನೆ ನಡೆದಿದ್ದು, ಯುವಕ-ಯುವತಿಯನ್ನ ತಡೆದು ಹಲ್ಲೆಗೆ ಯತ್ನಿಸಲಾಗಿದೆ. ವಾರದ ಹಿಂದೆ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೈಕ್​ನಲ್ಲಿ ಹೋಗುತ್ತಿದ್ದ ಜೋಡಿಯನ್ನು ಹಿಂಬಾಲಿಸಿ, ದಾಳಿ ಮಾಡಿದ ಬಜರಂಗದಳ!

ಇತ್ತೀಚೆಗೆ ಜಿಲ್ಲೆಯ ಮಂಗಳೂರಿನ ಮೊರ್ಗನ್ಸ್ ಗೇಟ್ ಬಳಿ ಅನ್ಯಕೋಮಿನ ಯುವಕನೊಂದಿಗೆ ಚಿಕ್ಕಮಗಳೂರಿನ ಯುವತಿ ಸುತ್ತಾಡುತ್ತಿದ್ದಾಗ ತಡೆದು ಬಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಇಬ್ಬರು ಬಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರಿನ ಮುಳುಹಿತ್ಲು ಬಳಿಯ ಸ್ಟೋರ್ ಒಂದರಲ್ಲಿ ಚಿಕ್ಕಮಗಳೂರು ಮೂಲದ ಸೌಜನ್ಯ ಮತ್ತು ಮಂಗಳೂರಿನ ಮಂಕಿ ಸ್ಟ್ಯಾಂಡ್ ನಿವಾಸಿ ನೂರುಲ್ಲಾ ಅಮೀನ್ ಕೆಲಸ ಮಾಡುತ್ತಿದ್ದರು. ಮಾರ್ಗನ್ಸ್ ಗೇಟ್ ಬಳಿ ಇಬ್ಬರು ಬೈಕ್​ನಲ್ಲಿ ಹೋಗುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಅವರನ್ನು ಹಿಂಬಾಲಿಸಿದ್ದರು.

ಅರ್ಧ ದಾರಿಯಲ್ಲಿ ಅವರನ್ನು ತಡೆದು, ಅವರ ಮೇಲೆ ದಾಳಿ ನಡೆಸಿದ್ದರು. ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಯುವಕ ಮತ್ತು ಯುವತಿಯ ಐಡಿ ಕಾರ್ಡ್ ಪಡೆದುಕೊಂಡಿದ್ದರು. ಬಳಿಕ ಅವರಿಗೆ ಚೆನ್ನಾಗಿ ತರಾಟೆಗೆ ತೆಗೆದುಕೊಂಡು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಉಡುಪಿ: ಅನ್ಯಮತೀಯ ಯುವಕ-ಯುವತಿ ವಿಡಿಯೋ ವೈರಲ್​, 10 ಹಿಂದೂ ಕಾರ್ಯಕರ್ತರ ವಿರುದ್ಧ ದೂರು ದಾಖಲು

ವಿಚಾರ ತಿಳಿಸಿದಂತೆ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ಎರಡು ಕೋಮುವಿನ ಜನರು ಸ್ಥಳಕ್ಕೆ ಜಮಯಿಸುವ ಹಂತಕ್ಕೆ ಘಟನೆ ತಲುಪಿತ್ತು. ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಹೋಗಿ ಪರಿಸ್ಥಿತಿ ಹತೋಟಿಗೆ ತಂದಿದ್ದರು.

ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ವಿಶ್ವ ಹಿಂದೂ ಪರಿಷತ್ ಇತ್ತೀಚಿನ ಯಾತ್ರೆ ಬಳಿಕ ನಡೆದ ಮೊದಲ ನೈತಿಕ ಪೊಲೀಸ್ ಗಿರಿ ಇದಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Sun, 10 December 23

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us