AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು

ಅತಿ ವೇಗದಿಂದ ಬಸ್ ನಿಲ್ದಾಣದ ಒಳಗೆ ಬಂದ ಕೆಎಸ್ಆರ್ಟಿಸಿ ಬಸ್ ಅಡಿ ತಾಯಿ ಮಗ ಸಿಕ್ಕಿ ಸಾವನ್ನಪ್ಪಿದ್ದಾರೆ. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು.

ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು
ಉಪ್ಪಿನಂಗಡಿ ಬಳಿ ಭೀಕರ ಅಪಘಾತ; ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವು
TV9 Web
| Updated By: ಆಯೇಷಾ ಬಾನು|

Updated on:Oct 12, 2021 | 1:49 PM

Share

ಮಂಗಳೂರು: ಸರ್ಕಾರಿ ಬಸ್ ಹರಿದು ತಾಯಿ, ಮಗು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ(25) ಮತ್ತು ಒಂದು ವರ್ಷದ ಪುತ್ರ ಶಾಹೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿ ವೇಗದಿಂದ ಬಸ್ ನಿಲ್ದಾಣದ ಒಳಗೆ ಬಂದ ಕೆಎಸ್ಆರ್ಟಿಸಿ ಬಸ್ ಅಡಿ ತಾಯಿ ಮಗ ಸಿಕ್ಕಿ ಸಾವನ್ನಪ್ಪಿದ್ದಾರೆ. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಬಸ್ಗೆ ಸಿಕ್ಕಿ ಕೆಳಗೆ ಬಿದ್ದಿದ್ದಾರೆ. ತಲೆಯ ಮೇಲೆ ಬಸ್ ಹರಿದ ಕಾರಣ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿಯ 41 ಘಟಕದ ಸಿಬ್ಬಂದಿ ಜಟ್ಟಪ್ಪ ಪಟೇಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿದ್ದು, ಬೇರೆ ಬೇರೆ ಡಿಪೋಗಳಿಗೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವಾಯ್ಸ್ ರೆಕಾರ್ಡ್ ಕಳುಹಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನಗೆ ತುಂಬಾ ಹಿಂಸೆ ಮಾಡಿದ್ದಾರೆ. ಇವತ್ತು ನಿಮಗೆ ಕೈ‌ಮುಗಿದು ಹೋಗುತ್ತಿದ್ದೇನೆ. ನಿಯಂತಣಾಧಿಕಾರಿಗಳು ಹಾಗೂ 41ನೇ ಡಿಪೋ ಅಧಿಕಾರಿಗಳು ಬಹಳ‌ ತೊಂದರೆ ಕೊಟ್ಟಿದ್ದಾರೆ. ಲಂಚ ಕೊಡದಿದ್ದಕ್ಕೆ ಬೇರೆ ಡಿಪೋಗೆ ವರ್ಗಾವಣೆ ಮಾಡುತ್ತೇನೆ ಎಂದು ಬೆದರಿಸಿದ್ದಾರೆ. ಡಿಪೋ 6 ರಿಂದ 15ಕ್ಕೆ ವರ್ಗಾವಣೆ, 21ರಿಂದ 41ಕ್ಕೆ ವರ್ಗಾವಣೆ ಮಾಡುತ್ತೇನೆ ಎಂದಿದ್ದಾರೆ ಎಂದು ವಾಯ್ಸ್ ರೆಕಾರ್ಡ್ ಮಾಡಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಸರಣಿ ಅಪಘಾತ; ಅದೃಷ್ಟವಶಾತ್ ಸ್ಥಳದಲ್ಲಿದ್ದ ಎಲ್ಲರೂ ಬಚಾವ್

Published On - 12:42 pm, Tue, 12 October 21

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ