AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಹೊಸ ರೂಪ, 2024ರಲ್ಲಿ ಕಾಮಗಾರಿ ಆರಂಭ; ನಳಿನ್ ಕುಮಾರ್ ಕಟೀಲ್

Shiradi Ghat tunnel construction project; ಶಿರಾಡಿ ಘಾಟಿಯ ಎರಡು ಕಡೆಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಹೊಸ ರೂಪ, 2024ರಲ್ಲಿ ಕಾಮಗಾರಿ ಆರಂಭ; ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Follow us
Ganapathi Sharma
|

Updated on: Sep 15, 2023 | 10:18 PM

ಮಂಗಳೂರು, ಸೆಪ್ಟೆಂಬರ್ 15: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ (Shiradi Ghat tunnel construction project) ಹೊಸ ರೂಪ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿಳಿಸಿದರು. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಎರಡನೇ ಸಮೀಕ್ಷೆಯಂತೆ 12500 ಕೋಟಿ ರೂ. ಡಿಪಿಆರ್ ಸಿದ್ಧಪಡಿಸಲಾಗಿದೆ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ ಎಂದು ತಿಳಿಸಿದರು.

ಶಿರಾಡಿ ಘಾಟಿಯ ಎರಡು ಕಡೆಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಎಸ್‌ಸಿ ಮತ್ತು ಎಸ್‌ಟಿಗಳ ಜಮೀನು ಒತ್ತುವರಿ ಪ್ರಕರಣದಲ್ಲಿ ಸಚಿವ ಸುಧಾಕರ್‌ ಮೇಲೆ ಮಾಡಿರುವ ಆರೋಪದ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಈ ಸರ್ಕಾರ ಸರ್ವಾಧಿಕಾರಿಗಳು ಮತ್ತು ಹಗರಣಗಾರರಿಂದ ತುಂಬಿದೆ. ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ಕೇಸು ಹಾಕಲಾಗುತ್ತಿದೆ’ ಎಂದು ಆರೋಪಿಸಿದರು.

ರೈತರ ಶೈಕ್ಷಣಿಕ ನಿಧಿಯನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಸೇರಿಸಿದ್ದ ಅನುದಾನವನ್ನು ಸರ್ಕಾರ ಹಿಂಪಡೆದಿದೆ. ಕಳೆದ ಮೂರು ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರಕಾರ ಮೌನವಾಗಿದೆ. ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಂಡಿ ಅಲ್ಲ ‘ಘಮಂಡಿ’ ಮೈತ್ರಿಕೂಟ; ರಾಜಸ್ಥಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಸರ್ಕಾರವು 161 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದೆ. ಇದು ಸರಿಯಲ್ಲ. ಇಡೀ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು. ಪ್ರತಿ ವರ್ಷ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿತ್ತು. ಈ ವರ್ಷ ಮಳೆ ಕೊರತೆಯಿಂದ ನದಿಗಳು ಬತ್ತಿ ಹೋಗಿವೆ. ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ ಎಂದು ನಳಿನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ