AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ – ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ

ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು.

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ - ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ
ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ, ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ
TV9 Web
| Edited By: ಸಾಧು ಶ್ರೀನಾಥ್​|

Updated on: Jul 06, 2022 | 9:30 PM

Share

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರಿಂದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ.

ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಕೊಠಡಿಯತ್ತ ಗುಡ್ಡ ಜರಿದು ಬಿದ್ದಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ಇವರು. ಈ ನಾಲ್ವರೂ ಅನೇಕ ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಪ್ರತ್ಯೇಕ ಕೊಠಡಿ ಅವರಿಗೆ ನೀಡಲಾಗಿತ್ತು. ಜೆಸಿಬಿ ಬಳಸಿ ಮಣ್ಣು ತೆರವು ಮಾಡಿ ಶೋಧ ಕಾರ್ಯ ನಡೆಸಲಾಗಿದೆ. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಳಿದಿಬ್ಬರ ಶೋಧ ಕಾರ್ಯ ನಡೆದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಮತ್ತು ಎಸ್. ಐ ಹರೀಶ್ ತಂಡ ಭೇಟಿ ನೀಡಿದೆ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ