AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ.

ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ
ಗಂಗಾಧರ​ ಬ. ಸಾಬೋಜಿ
|

Updated on:May 11, 2023 | 8:28 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯಲ್ಲಿ ನಿನ್ನೆ ಸಂಜೆ ಕಾಂಗ್ರೆಸ್ (Congress)​ ಮತ್ತು ಬಿಜೆಪಿ (bjp) ಕಾರ್ಯಕರ್ತರ ನಡುವೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ಕಾರು ಮೇಲೆ ಕಲ್ಲುತೂರಾಟ ನಡೆದಿತ್ತು. ಘಟನೆ ಬಳಿಕ 20ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದರು. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ದೂರು ದಾಖಲಾಗಿತ್ತು. ಇಬ್ಬರು ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು.

ಸೆಕ್ಷನ್​ 144 ಜಾರಿ

ಚುನಾವಣಾ ಪಕ್ಷದ ಬೂತ್​ಗೆ ಅಭ್ಯರ್ಥಿ ಮಿಥುನ್ ರೈ ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಕಾಂಗ್ರೆಸ್​ ಅಭ್ಯರ್ಥಿ ಕಾರಿನ ಮೇಲೆ ಕಲ್ಲುತೂರಾಟ

ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಲದೀಪ್​ ಜೈನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ

ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ ಎಂದು ಪೊಲೀಸ್​ ಆಯುಕ್ತ ಕುಲದೀಪ್​ ಜೈನ್​ ಹೇಳಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದಿದ್ದರು.

ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗಿತ್ತೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Thu, 11 May 23