AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪಿಯು ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು

ದಕ್ಷಿಣ ಕನ್ನಡದಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್​ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿವೆ. 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದು.

ಹಿಜಾಬ್ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪಿಯು ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು
ಸಾಂಧರ್ಬಿಕ ಚಿತ್ರ
TV9 Web
| Updated By: sandhya thejappa|

Updated on:Jul 20, 2022 | 9:17 AM

Share

ಮಂಗಳೂರು: ಶಾಲಾ- ಕಾಲೇಜುಗಳಿಗೆ ಹಿಜಾಬ್ (Hijab) ಧರಿಸುವಂತಿಲ್ಲ ಎಂದು ಹೈಕೋರ್ಟ್ (High Court) ತೀರ್ಪು ನೀಡಿದ್ದರೂ, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ತೀರ್ಪನ್ನ ಸ್ವೀಕರಿಸುತ್ತಿಲ್ಲ. ಹೈಕೋರ್ಟ್ ತೀರ್ಪಿನ ಬಳಿಕವೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿರಲಿಲ್ಲ. ಹಿಜಾಬ್ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಮುಸ್ಲಿಮರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದಾರೆ. ದಕ್ಷಿಣ ಕನ್ನಡದಲ್ಲಿ 13 ಮುಸ್ಲಿಂ ಆಡಳಿತಗಳಿಂದ ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ.

ಈ ಬಾರಿ ಜಿಲ್ಲೆಯಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್​ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿವೆ. 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದು. 14 ಅರ್ಜಿಗಳಲ್ಲಿ ಎರಡು ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಇದರಲ್ಲಿ ಒಂದು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಮತ್ತು ಇನ್ನೊಂದು ಸುಬ್ರಹ್ಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ ಅನುಮತಿ ದೊರಕಿದೆ. ಉಳಿದ 12 ಮುಸ್ಲಿಂ ಆಡಳಿತದ ಕಾಲೇಜು ಸ್ಥಾಪನೆ ಅನುಮತಿ ಅರ್ಜಿಗಳು ಬಾಕಿ ಉಳಿದಿವೆ.

ಇದನ್ನೂ ಓದಿ: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು

ಇದನ್ನೂ ಓದಿ
Image
Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 400 ರೂ. ಕುಸಿತ
Image
High BP: ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಫೈಬರ್ ಭರಿತ ಆಹಾರಗಳು: ಇಲ್ಲಿದೆ ಆಹಾರಗಳ ಪಟ್ಟಿ
Image
Siddhanth Kapoor: ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಪ್ರಕರಣ; ನಟಿ ಶ್ರದ್ಧಾ ಕಪೂರ್​ ಸೋದರ ಸಿದ್ಧಾಂತ್​ಗೆ ನೋಟಿಸ್ ಸಾಧ್ಯತೆ
Image
ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ, ನನಗೂ ಅವಕಾಶ ಮಾಡಿಕೊಡಿ; ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಅಣಕು ಪ್ರದರ್ಶಿಸಿ ಪ್ರತಿಭಟನೆ: ಜುಲೈ 16ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಸಿ.ಎಫ್‌.ಐ ಗರ್ಲ್ಸ್ ಕಾನ್ಫರೆನ್ಸ್​​ನ ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿನಿಯರು, ಉಡುಪಿ ಶಾಸಕ ರಘುಪತಿ ಭಟ್, ಯಶ್ ಪಾಲ್ ಸುವರ್ಣರ ಅವರ ರೂಪಕ ಮಾಡಿದ್ದರು. ಸುಪಾರಿ ಕೊಟ್ಟ ಪತ್ನಿಯನ್ನು ಕೊಲೆ ಮಾಡಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಬಗ್ಗೆ ಮಾತನಾಡುತ್ತಾರೆ ಅಂತಾ ರೂಪಕ ಪ್ರದರ್ಶಿಸಿದ್ದರು.

ಇದನ್ನೂ ಓದಿ: Work From Home Rules: ವರ್ಕ್ ಫ್ರಂ ಹೋಂ ಕುರಿತು ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

Published On - 9:03 am, Wed, 20 July 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!