ಹಿಜಾಬ್ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪಿಯು ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು

ದಕ್ಷಿಣ ಕನ್ನಡದಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್​ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿವೆ. 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದು.

ಹಿಜಾಬ್ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಪಿಯು ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಂ ಶಿಕ್ಷಣ ಸಂಸ್ಥೆಗಳು
ಸಾಂಧರ್ಬಿಕ ಚಿತ್ರ
Updated By: sandhya thejappa

Updated on: Jul 20, 2022 | 9:17 AM

ಮಂಗಳೂರು: ಶಾಲಾ- ಕಾಲೇಜುಗಳಿಗೆ ಹಿಜಾಬ್ (Hijab) ಧರಿಸುವಂತಿಲ್ಲ ಎಂದು ಹೈಕೋರ್ಟ್ (High Court) ತೀರ್ಪು ನೀಡಿದ್ದರೂ, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ತೀರ್ಪನ್ನ ಸ್ವೀಕರಿಸುತ್ತಿಲ್ಲ. ಹೈಕೋರ್ಟ್ ತೀರ್ಪಿನ ಬಳಿಕವೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿರಲಿಲ್ಲ. ಹಿಜಾಬ್ ವಿವಾದದ ಬೆನ್ನಲ್ಲೇ ಜಿಲ್ಲೆಯಲ್ಲಿ ಮುಸ್ಲಿಮರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದಾರೆ. ದಕ್ಷಿಣ ಕನ್ನಡದಲ್ಲಿ 13 ಮುಸ್ಲಿಂ ಆಡಳಿತಗಳಿಂದ ಪಿಯು ಕಾಲೇಜು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ.

ಈ ಬಾರಿ ಜಿಲ್ಲೆಯಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್​ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿವೆ. 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳದ್ದು. 14 ಅರ್ಜಿಗಳಲ್ಲಿ ಎರಡು ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. ಇದರಲ್ಲಿ ಒಂದು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಮತ್ತು ಇನ್ನೊಂದು ಸುಬ್ರಹ್ಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ ಅನುಮತಿ ದೊರಕಿದೆ. ಉಳಿದ 12 ಮುಸ್ಲಿಂ ಆಡಳಿತದ ಕಾಲೇಜು ಸ್ಥಾಪನೆ ಅನುಮತಿ ಅರ್ಜಿಗಳು ಬಾಕಿ ಉಳಿದಿವೆ.

ಇದನ್ನೂ ಓದಿ: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು

ಇದನ್ನೂ ಓದಿ
Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 400 ರೂ. ಕುಸಿತ
High BP: ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಫೈಬರ್ ಭರಿತ ಆಹಾರಗಳು: ಇಲ್ಲಿದೆ ಆಹಾರಗಳ ಪಟ್ಟಿ
Siddhanth Kapoor: ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಪ್ರಕರಣ; ನಟಿ ಶ್ರದ್ಧಾ ಕಪೂರ್​ ಸೋದರ ಸಿದ್ಧಾಂತ್​ಗೆ ನೋಟಿಸ್ ಸಾಧ್ಯತೆ
ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ, ನನಗೂ ಅವಕಾಶ ಮಾಡಿಕೊಡಿ; ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಅಣಕು ಪ್ರದರ್ಶಿಸಿ ಪ್ರತಿಭಟನೆ:
ಜುಲೈ 16ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಸಿ.ಎಫ್‌.ಐ ಗರ್ಲ್ಸ್ ಕಾನ್ಫರೆನ್ಸ್​​ನ ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಹಿಜಾಬ್ ವಿಚಾರಕ್ಕೆ ವಿದ್ಯಾರ್ಥಿನಿಯರು, ಉಡುಪಿ ಶಾಸಕ ರಘುಪತಿ ಭಟ್, ಯಶ್ ಪಾಲ್ ಸುವರ್ಣರ ಅವರ ರೂಪಕ ಮಾಡಿದ್ದರು. ಸುಪಾರಿ ಕೊಟ್ಟ ಪತ್ನಿಯನ್ನು ಕೊಲೆ ಮಾಡಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಬಗ್ಗೆ ಮಾತನಾಡುತ್ತಾರೆ ಅಂತಾ ರೂಪಕ ಪ್ರದರ್ಶಿಸಿದ್ದರು.

ಇದನ್ನೂ ಓದಿ: Work From Home Rules: ವರ್ಕ್ ಫ್ರಂ ಹೋಂ ಕುರಿತು ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

Published On - 9:03 am, Wed, 20 July 22