ಮಂಗಳೂರು: ಮುಸ್ಲಿಂ ವ್ಯಕ್ತಿಯಿಂದ ಸೀತಾ ದೇವಿ ಕುರಿತು ಅವಹೇಳನಕಾರಿ ಕಾಮೆಂಟ್; ಆರೋಪಿ ಅರೆಸ್ಟ್​​

ಸೀತಾ ದೇವಿ ಕುರಿತು ಅವಹೇಳನಕಾರಿ ಕಾಮೆಂಟ್​ ಹಾಕಿದ ಮುಸ್ಲಿಂ ವ್ಯಕ್ತಿಯನ್ನು ಮಂಗಳೂರು ಬಂಧಿಸಿದ್ದಾರೆ.

ಮಂಗಳೂರು: ಮುಸ್ಲಿಂ ವ್ಯಕ್ತಿಯಿಂದ ಸೀತಾ ದೇವಿ ಕುರಿತು ಅವಹೇಳನಕಾರಿ ಕಾಮೆಂಟ್; ಆರೋಪಿ ಅರೆಸ್ಟ್​​
ಆರೋಪಿ ಮೊಹ್ಮದ್​ ಸಲ್ಮಾನ್
Follow us
| Updated By: ವಿವೇಕ ಬಿರಾದಾರ

Updated on:Aug 04, 2023 | 1:43 PM

ಮಂಗಳೂರು: ಸೀತಾ (Sita) ದೇವಿ ಕುರಿತು ಅವಹೇಳನಕಾರಿ ಕಾಮೆಂಟ್​ ಹಾಕಿದ ಮುಸ್ಲಿಂ ವ್ಯಕ್ತಿಯನ್ನು ಮಂಗಳೂರು ಬಂಧಿಸಿದ್ದಾರೆ. ಮೊಹ್ಮದ್​ ಸಲ್ಮಾನ್​ (22) ಬಂಧಿತ ಆರೋಪಿ. ಆರೋಪಿ (Accused) ತನ್ನ ಇನ್​ಸ್ಟಾಗ್ರಮ್​​ (Instagram) ಖಾತೆ (D_salman_6) ಮೂಲಕ ಸೀತಾ ದೇವಿಯ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್​ ಮಾಡಿದ್ದಾನೆ. ಈ ಕಾಮೆಂಟ್​ ಸ್ಕ್ರೀನ್​ಶಾಟ್​​ ತೆಗೆದು ಬಲಪಂಥೀಯ ವ್ಯಕ್ತಿಯೊಬ್ಬ ಮಂಗಳೂರು ಪೊಲೀಸರಿಗೆ (Mangaluru Police) ಟ್ಯಾಗ್​ ಮಾಡಿ ಟ್ವಿಟರ್​​ನಲ್ಲಿ ಟ್ವೀಟ್​ ಮಾಡಿದ್ದಾರೆ. ಅಲ್ಲದೇ ಈ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಮಂಗಳೂರು ಪೊಲೀಸ್‌ನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ; ಪ್ರಾಯೋಗಿಕ ಸಂಚಾರ ಯಶಸ್ವಿ

ಈ ಬಗ್ಗೆ ಸ್ವಯಂ ಪ್ರೇರಿತ (Suo Motu) ಪಕ್ರರಣ ದಾಖಲಿಸಿಕೊಂಡ ಪೊಲೀಸರು ಗುರುವಾರ ಆರೋಪಿ ಮೊಹ್ಮದ್​ ಸಲ್ಮಾನನ್ನು ಬಂಧಿಸಿದ್ದಾರೆ. ನಂತರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್​ 67 (ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲವಾಗಿ ಪೋಸ್ಟ್​ ಮಾಡುವುದು ಅಥವಾ ಶೇರ್​​ ಮಾಡುವ ಶಿಕ್ಷೆ) ಮತ್ತು 153A (ಧರ್ಮ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವುದು) 505 (2) (ವರ್ಗಗಳ ನಡುವೆ ದ್ವೇಷ ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಉದ್ದೇಶ) ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯನ್ನು ಗುರುವಾರ ಮಂಗಳೂರಿನ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:15 pm, Fri, 4 August 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?