AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಿ; ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕೌಂಟರ್

ಮುಸ್ಲಿಂ ಐಕ್ಯತಾ ವೇದಿಕೆ ಪಾಲಿಕೆ ಕಮಿಷನರ್ ‌ಮತ್ತು ಮೇಯರ್ ಗೆ ಮನವಿ ಸಲ್ಲಿಸಿದ್ದು ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ.

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಿ; ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕೌಂಟರ್
ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಲು ಮನವಿ
TV9 Web
| Edited By: |

Updated on:Oct 09, 2022 | 8:59 AM

Share

ಮಂಗಳೂರು: ಸುರತ್ಕಲ್ ವೃತ್ತಕ್ಕೆ( Surathkal Circle) ಸಾವರ್ಕರ್​ ಹೆಸರಿಡಲು ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದು ಸಾವರ್ಕರ್(Veer Savarka) ಬದಲಾಗಿ ಸುರತ್ಕಲ್​ ವೃತ್ತಕ್ಕೆ ಕೋಟಿ ಚೆನ್ನಯ್ಯ(Koti Chennaya) ಹೆಸರಿಡಲು ಮುಸ್ಲಿಮರು ಮನವಿ ಮಾಡಿದ್ದಾರೆ. ಈ ಮೂಲಕ ವೀರ ಸಾರ್ವಕರ್​ ಹೆಸರಿಗೆ ಆಕ್ಷೇಪಿಸಿ ಜಾಣ ನಡೆ ಪ್ರದರ್ಶಿಸಿದ್ದಾರೆ. ಜೊತೆಗೆ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೌಂಟರ್ ಕೊಟ್ಟಿದ್ದಾರೆ.

ಮುಸ್ಲಿಂ ಐಕ್ಯತಾ ವೇದಿಕೆಯು ಸುರತ್ಕಲ್ ವೃತ್ತಕ್ಕೆ ಕೋಟಿ ಚೆನ್ನಯ್ಯ ಹೆಸರಿಡಿ ವೀರ ಸಾವರ್ಕರ್​ರೇ ಏಕೆ? ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮುಸ್ಲಿಂ ಐಕ್ಯತಾ ವೇದಿಕೆ ಪಾಲಿಕೆ ಕಮಿಷನರ್ ‌ಮತ್ತು ಮೇಯರ್ ಗೆ ಮನವಿ ಸಲ್ಲಿಸಿದ್ದು ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಕೋಟಿ ಚೆನ್ನಯ್ಯರ ಹೆಸರಿನ ಜೊತೆ ನವ ಮಂಗಳೂರು ‌ನಿರ್ಮಾತೃ ಶ್ರೀನಿವಾಸ ಮಲ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಲೋಕಯ್ಯ ಶೆಟ್ಟಿ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಬೋಗಸ್ ದಾಖಲೆ ಸೃಷ್ಟಿಸಿ ಭೂಗಳ್ಳರಿಗೆ ನೆರವು: ಕೆಆರ್​ ಪುರದ ಸರ್ಕಾರಿ ಅಧಿಕಾರಿ ವಿರುದ್ಧ ಮತ್ತೊಂದು ಎಫ್​ಐಆರ್

ಸದ್ಯ ಮಂಗಳೂರು ‌ಮಹಾನಗರ ಪಾಲಿಕೆ ಸಭೆಯಲ್ಲಿ ಸುರತ್ಕಲ್ ಗೆ ಸಾವರ್ಕರ್ ಹೆಸರಿಡಲು ಪ್ರಸ್ತಾವನೆ ಸಲ್ಲಿಸಿದ್ದ ಶಾಸಕ ಭರತ್ ಶೆಟ್ಟಿ ಅವರ ಪ್ರಸ್ತಾಪ ಪಾಸ್ ಆಗಿದೆ. ಇದರ ನಡುವೆ ಮುಸ್ಲಿಂ ಐಕ್ಯತಾ ವೇದಿಕೆಯ ಮನವಿ ಪತ್ರ ಬಂದ ಹಿನ್ನೆಲೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ಪಡೆಯಲು ಪಾಲಿಕೆ ಮುಂದಾಗಿದೆ. ಸುರತ್ಕಲ್ ‌ಸರ್ಕಲ್ ನಾಮಕರಣ ವಿವಾದ ಮಂಗಳೂರು ಪಾಲಿಕೆಗೆ ಮತ್ತೆ ತಲೆ ನೋವು ತಂದಿದೆ. ಇನ್ನು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸೋ ಮುನ್ನವೇ ಮುಸ್ಲಿಮರು ಆಕ್ಷೇಪ ಹೊರ ಹಾಕಿದ್ದು ಯಾವುದೇ ಮುಸ್ಲಿಂ ಹೆಸರು ಸೂಚಿಸದೇ ಮೂವರ ಹೆಸರುಗಳನ್ನು ಸೂಚಿಸುವ ಮೂಲಕ ಅಚ್ಚರಿ‌ ನಡೆ ಪ್ರದರ್ಶಿಸಿದ್ದಾರೆ. ವಿವಾದಿತ ವ್ಯಕ್ತಿಗಳ ಹೆಸರಿಟ್ಟರೆ ಕೋಮು ಸೌಹಾರ್ದ ಹಾಳಾಗುವ ಸಾಧ್ಯತೆ ಅಂತ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:59 am, Sun, 9 October 22

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?