AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ಗೆ ಅವಕಾಶ ಕೊಡಲಿಲ್ಲವೆಂದು ಟಿ.ಸಿ. ಪಡೆದ ವಿದ್ಯಾರ್ಥಿನಿ, ಹಿಜಾಬ್ಗಾಗಿ ಪಟ್ಟು ಹಿಡಿದು ಕಾಲೇಜತ್ತ ಮುಖ ಮಾಡದ 15 ವಿದ್ಯಾರ್ಥಿನಿಯರು

ಮುಸ್ಲಿಂ ವಿದ್ಯಾರ್ಥಿನಿ ತಾನು ಬೇರೆ ಕಾಲೇಜಿಗೆ ಸೇರಬೇಕು. ಹೀಗಾಗಿ ಟಿ.ಸಿ. ನೀಡಿ ಎಂದು ನಿನ್ನೆ ಕಾಲೇಜಿಗೆ ಅರ್ಜಿ ಸಲ್ಲಿಸಿದ್ದಳು. ಸದ್ಯ ಕಾಲೇಜು ಆಡಳಿತ ಮಂಡಳಿ ಇದಕ್ಕೆ ಒಪ್ಪಿ ಟಿ.ಸಿ. ನೀಡಲು ವ್ಯವಸ್ಥೆ ಮಾಡುವುದಾಗಿ ಹೇಳಿದೆ. ಹೀಗಾಗಿ ಓರ್ವ ವಿದ್ಯಾರ್ಥಿನಿ ಇಂದು ಟಿ.ಸಿ. ಪಡೆದಿದ್ದಾಳೆ.

ಹಿಜಾಬ್ಗೆ ಅವಕಾಶ ಕೊಡಲಿಲ್ಲವೆಂದು ಟಿ.ಸಿ. ಪಡೆದ ವಿದ್ಯಾರ್ಥಿನಿ, ಹಿಜಾಬ್ಗಾಗಿ ಪಟ್ಟು ಹಿಡಿದು ಕಾಲೇಜತ್ತ ಮುಖ ಮಾಡದ 15 ವಿದ್ಯಾರ್ಥಿನಿಯರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jun 22, 2022 | 5:09 PM

Share

ಮಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿದ್ದ ಹಿಜಾಬ್(Hijab) ವಿವಾದ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಮಂಗಳೂರಿನ ಯೂನಿವರ್ಸಿಟಿ(Mangalore University) ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ಕಾಲೇಜಿನಿಂದ ಓರ್ವ ವಿದ್ಯಾರ್ಥಿನಿ ಟಿ.ಸಿ.(Transfer Certificate) ಪಡೆದು ಕಾಲೇಜು ಬಿಟ್ಟ ಘಟನೆ ನಡೆದಿದೆ.

ಮುಸ್ಲಿಂ ವಿದ್ಯಾರ್ಥಿನಿ ತಾನು ಬೇರೆ ಕಾಲೇಜಿಗೆ ಸೇರಬೇಕು. ಹೀಗಾಗಿ ಟಿ.ಸಿ. ನೀಡಿ ಎಂದು ನಿನ್ನೆ ಕಾಲೇಜಿಗೆ ಅರ್ಜಿ ಸಲ್ಲಿಸಿದ್ದಳು. ಸದ್ಯ ಕಾಲೇಜು ಆಡಳಿತ ಮಂಡಳಿ ಇದಕ್ಕೆ ಒಪ್ಪಿ ಟಿ.ಸಿ. ನೀಡಲು ವ್ಯವಸ್ಥೆ ಮಾಡುವುದಾಗಿ ಹೇಳಿದೆ. ಹೀಗಾಗಿ ಓರ್ವ ವಿದ್ಯಾರ್ಥಿನಿ ಇಂದು ಟಿ.ಸಿ. ಪಡೆದಿದ್ದಾಳೆ. ಹಿಜಾಬ್​ ಸಮವಸ್ತ್ರದ ಭಾಗವಾಗಿರುವ ಕಾಲೇಜಿಗೆ ತೆರಳಲು ವಿದ್ಯಾರ್ಥಿನಿ ಟಿ.ಸಿ. ಪಡೆದಿದ್ದಾಳೆ. ಇನ್ನು ಹಿಜಾಬ್ಗಾಗಿ ಪಟ್ಟು ಹಿಡಿದು ಕಾಲೇಜ್ಗೆ 15 ವಿದ್ಯಾರ್ಥಿನಿಯರು ಗೈರಾಗಿದ್ದಾರೆ. ಇದನ್ನೂ ಓದಿ: ಆಗಸ್ಟ್ 22ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ: ಸಿಎಂಗೆ ಗಡುವು ನೀಡಿದ ಶಾಸಕ ಬಸವನಗೌಡ ಪಾಟೀಲ್​​ ಯತ್ನಾಳ್

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋಟಿಸ್​ ನೀಡಿದ ಮಂಗಳೂರು ವಿವಿ ಮಂಗಳೂರು: ಮಂಗಳೂರು ವಿವಿ ಕಾಲೇಜಿಗೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ವಿದ್ಯಾರ್ಥಿನಿಯರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ. ಗೌಸಿಯಾ ಸೇರಿದಂತೆ ಕೆಲ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಬಳಿಕವೂ ನಿಯಮ ಮೀರಿದರೆ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಗಡುವು ನೀಡಿದ ಹಿನ್ನೆಲೆ ಎಚ್ಚರಿಕೆ ನೋಟೀಸ್ ನೀಡಲಾಗಿದೆ. ಸುದ್ದಿಗೋಷ್ಟಿಯಲ್ಲಿ ಕಾಲೇಜು ಆಡಳಿತಕ್ಕೆ ವಿದ್ಯಾರ್ಥಿನಿಯರು ಎರಡು ದಿನ ಗಡುವು ನೀಡಿದ್ದರು.

ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆಯು ಜೂನ್​ 4 ರಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಹಿಜಾಬ್​ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತಡೆದಿದ್ದಾರೆ. ಸೋಮವಾರ (ಮೇ 30) ರಂದು ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಕಾಲೇಜಿಗೆ ಬಂದಿರಲಿಲ್ಲ. ಮತ್ತೆ ಜೂನ್​​ 4 ರಂದು 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:04 pm, Wed, 22 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ