AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramadan 2024: ಕರಾವಳಿ ಪ್ರದೇಶದಲ್ಲಿ ನಾಳೆಯೇ ರಂಜಾನ್ ಹಬ್ಬ ಆಚರಣೆ

ramadan Festival 2024: ಕರ್ನಾಟಕದಲ್ಲಿ ನಾಡಿದ್ದು ಅಂದರೆ ಏಪ್ರಿಲ್ 11ರಂದು ರಂಜಾನ್​ ಹಬ್ಬ ಇದೆ. ಆದ್ರೆ, ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್‌ 10) ರಂಜಾನ್ ಆಚರಿಸಲಾಗುತ್ತದೆ. ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆಯೇ ರಂಜಾನ್ ಆಚರಿಸಲು ತೀರ್ಮಾನಿಸಲಾಗಿದೆ.

Ramadan 2024: ಕರಾವಳಿ ಪ್ರದೇಶದಲ್ಲಿ ನಾಳೆಯೇ ರಂಜಾನ್ ಹಬ್ಬ ಆಚರಣೆ
TV9 Web
| Edited By: |

Updated on:Apr 09, 2024 | 9:01 PM

Share

ಬೆಂಗಳೂರು, (ಏಪ್ರಿಲ್ 10): ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್‌ 10) ರಂಜಾನ್ (ramadan Festival 2024) ಆಚರಿಸಲಾಗುತ್ತದೆ. ಈ ಬಗ್ಗೆ ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಇಂದು (ಏಪ್ರಿಲ್ 09) ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಭಾಗದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿಯಲ್ಲಿ ನಾಳೆ(ಏಪ್ರಿಲ್ 09) ರಂಜಾನ್ ಆಚರಿಸಲಾಗುತ್ತದೆ. ಇನ್ನು ಕರಾವಳಿ ಬಿಟ್ಟು ಕರ್ನಾಟಕದ ಎಲ್ಲೆಡೆ ನಾಡಿದ್ದು ಅಂದರೆ ಏಪ್ರಿಲ್ 11ರಂದು ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತದೆ.

ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯೇ ರಂಜಾನ್ ಹಬ್ಬ ಎಂದು ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಪ್ಪತ್ತೊಂಬತ್ತು ದಿನಗಳ ಉಪವಾಸ ವೃತ ಆಚರಿಸಿದ್ದ ಮುಸ್ಲಿಮರು, ನಾಳೆ ಈದುಲ್ ಫಿತರ್ ಹಬ್ಬದೊಂದಿಗೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಉಪವಾಸ ಅಂತ್ಯಗೊಳಿಸಲಿದ್ದಾರೆ.

ಇದನ್ನೂ ಓದಿ: Viral Video: ರಂಜಾನ್ ಸ್ಪೆಷಲ್; ಮಾರುಕಟ್ಟೆಗೆ ಎಂಟ್ರಿಕೊಟ್ಟ ಗೋಣಿಚೀಲದ ಕುರ್ತಾ-ಪೈಜಾಮ 

ಮುಸ್ಲಿಂ ಸಮುದಾಯದವರಿಗೆ ಇದು ಪವಿತ್ರ ಹಬ್ಬವಾಗಿದೆ. ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಈ ಹಬ್ಬವನ್ನು ಮುಸ್ಲಿಮರು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ರಂಜಾನ್‌ ತಿಂಗಳ ಕೊನೆಯ ದಿನವನ್ನು ಈದ್-ಉಲ್-ಫಿತರ್ ಆಗಿ ಆಚರಿಸಲಾಗುತ್ತದೆ. ರಂಜಾನ್ ತಿಂಗಳ ಉದ್ದಕ್ಕೂ ಮುಸ್ಲಿಂ ಸಮುದಾಯದ ಜನರು ಬೆಳಗ್ಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸವನ್ನು ಆಚರಿಸುತ್ತಾರೆ. ಈ ಅವಧಿಯಲ್ಲಿ ಆಹಾರ ಮಾತ್ರವಲ್ಲ ನೀರು ಸಹ ಕುಡಿಯುವುದಿಲ್ಲ. ಈದ್‌ ಚಂದ್ರ ಗೋಚರಿಸಿದ ಬಳಿಕ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ರೋಜಾ ಆಚರಣೆಯನ್ನು ಮುಕ್ತಾಯಗೊಳಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Tue, 9 April 24

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್