AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಮಂಗಳೂರು ಹೊರವಲಯದ ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ವಿಫಲ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ‌ ನಟೋರಿಯಸ್ ದರೋಡೆ‌ಕೋರರ ವಿಚಾರಣೆ ನಡೆದಿದ್ದು, ಮಂಗಳೂರು ಪೊಲೀಸರು ಮಹತ್ವದ ಮಾಹಿತಿ‌ ಕಲೆ ಹಾಕಿದ್ದಾರೆ. ಕೇರಳ ಮೂಲದ ದರೋಡೆಕೋರರ ತಂಡದಿಂದ ದರೋಡೆಗೆ ಯತ್ನಿಸಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Apr 06, 2025 | 2:11 PM

ಮಂಗಳೂರು, ಏಪ್ರಿಲ್​ 06: ಮಂಗಳೂರು ಹೊರವಲಯದ ಕೋಟೆಕಾರ್ ಸಹಕಾರಿ ಬ್ಯಾಂಕ್​​ನಲ್ಲಿನ ದರೋಡೆ (robbery) ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿತ್ತು. ಬ್ಯಾಂಕ್​​ಗೆ ನುಗ್ಗಿದ್ದ ಚೋರರು ಪಿಸ್ತೂಲ್ ತೋರಿಸಿ 12 ಕೋಟಿ ರೂ ಮೌಲ್ಯದ ಚಿನ್ನಾಭರಣ ದೋಚಿದ್ದರು. ಇದರ ಬೆನ್ನಲ್ಲೇ ಇತ್ತೀಚೆಗೆ ಅದೇ ಮಂಗಳೂರು ಹೊರವಲಯದ ದೇರಳಕಟ್ಟೆ ಜಂಕ್ಷನ್​​ನಲ್ಲಿರುವ ಮುತ್ತೂಟ್​ ಫೈನಾನ್ಸ್​​ಗೆ (Muthoot Finance) ಕನ್ನ ಹಾಕಲು ಮುಂದಾಗಿದ್ದ ಚೋರರು ಲಾಕ್ ಆಗಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ‌ ನಟೋರಿಯಸ್ ದರೋಡೆ‌ಕೋರರಿಬ್ಬರ ವಿಚಾರಣೆ ತೀವ್ರವಾಗಿದ್ದು, ಮಂಗಳೂರು ಪೊಲೀಸರು ಮಹತ್ವದ ಮಾಹಿತಿ‌ ಕಲೆ ಹಾಕಿದ್ದಾರೆ.

ಕೇರಳ ಮೂಲದ ಐವರು ದರೋಡೆಕೋರರಿಂದ ದರೋಡೆಗೆ ಯತ್ನ

ಕೇರಳ ಮೂಲದ ಐವರು ದರೋಡೆಕೋರರಿಂದ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ್ದರು. ದರೋಡೆಗೂ ಮೊದಲು ಮುರುಳಿ ತಂಡ ಫೈನಾನ್ಸ್​ನ ರೇಖಿ ನಡೆಸಿತ್ತು. ಫೈನಾನ್ಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನಾಭರಣವಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದರು ಎಂಬುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಮಾಸ್ಟರ್ ಮೈಂಡ್​​ಗಳಿಬ್ಬರ ಬಂಧನ

ಇದನ್ನೂ ಓದಿ
Image
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!
Image
ಸರ್ಕಾರಿ ಶಾಲಾ ಶಿಕ್ಷಕಿ ಎಡವಟ್ಟು: ಕಣ್ಣಿನ ದೃಷ್ಟಿ ಕಳೆದುಕೊಂಡ ಬಾಲಕ
Image
3.5 ಕೆಜಿ ಚಿನ್ನ ರಾಬರಿ: ಕೋಲಾರ ನಗರಸಭೆ ಕಾಂಗ್ರೆಸ್ ಸದಸ್ಯ ಅರೆಸ್ಟ್!
Image
ಪುಣ್ಯಕ್ಕೆ 6 ಕೋಟಿ ಚಿನ್ನ ಬಿಟ್ಟು ಹೋದ, ಖದೀಮರು, ಟೋಲ್​ನಲ್ಲಿ ಕಾರು ಪತ್ತೆ!

ತಡರಾತ್ರಿ ಕಟ್ಟಡದ ಹಿಂದಿರುವ ಮರವೇರಿ ಫೈನಾನ್ಸ್ ಕಟ್ಟಡ ಪ್ರವೇಶಿಸಿದ್ದ ಮುರುಳಿ, ಹರ್ಷದ್ ಮತ್ತು ಲತೀಫ್, ಅತ್ಯಾಧುನಿಕ ಸೈಲೆಂಟ್ ಡ್ರಿಲ್ ಮಿಷನ್ ತಂದಿದ್ದರು. ಫೈನಾನ್ಸ್​ನಲ್ಲಿದ್ದ ಅತ್ಯಾಧುನಿಕ ಸೆನ್ಸರ್ ಸೈರನ್ ಮೊಳಗಿದ ಹಿನ್ನೆಲೆ ಸ್ಥಳದಲ್ಲೇ‌ ಮುರುಳಿ ಮತ್ತು ಹರ್ಷದ್ ಸಿಕ್ಕಿಬಿದ್ದಿದ್ದು, ಲತೀಫ್ ಸ್ಥಳದಿಂದ ಪರಾರಿಯಾಗಿದ್ದ.

35 ಕೆಜಿಗೂ ಹೆಚ್ಚು ಚಿನ್ನಾಭರಣ ಮುತ್ತೂಟ್ ಫೈನಾನ್ಸ್​ನಲ್ಲಿತ್ತು. ಆದರೆ ಕಂಟ್ರೋಲ್ ರೂಮ್​ನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿತ್ತು. ಈ ಮೂವರು ಆರೋಪಿಗಳು ಈ ಹಿಂದೆ ಕೇರಳದಲ್ಲಿ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಅನ್ನೋ ಮಾಹಿತಿ ಕೂಡ ತನಿಖೆಯಲ್ಲಿ ಬಯಲಾಗಿದೆ. ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳಿಗೆ ಮಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್‌

ಹಣಕಾಸು ಸಂಸ್ಥೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗಳು ಇಲ್ಲದೇ ಇದ್ದರೆ ಏನಾಗುತ್ತೆ ಅನ್ನೋದಕ್ಕೆ‌ ಮಂಗಳೂರಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಸಾಕ್ಷಿಯಾಗಿತ್ತು. ಅದೇ ರೀತಿ ಭದ್ರತಾ ವ್ಯವಸ್ಥೆಗಳು ಸರಿಯಾಗಿ ಇದ್ದರೆ ಏನಾಗುತ್ತೆ ಅನ್ನೋದಕ್ಕೂ ಮಂಗಳೂರಿನಲ್ಲಿ ನಡೆದ ಕಳ್ಳತನಕ್ಕೆ ವಿಫಲ ಪ್ರಯತ್ನವೇ ಸಾಕ್ಷಿ ಆಗಿದೆ. ಆದರೆ ಈ ಫೈನಾನ್ಸ್ ಕಳ್ಳತನಕ್ಕೆ ಯತ್ನದಲ್ಲಿ ಭದ್ರತಾ ಸಲಕರಣೆಗಳೇ ಸಹಕಾರಿಯಾಗಿದೆ. ಜೊತೆಗೆ ಫೈನಾನ್ಸ್​ನ ಕಂಟ್ರೋಲ್ ರೂಂ ಅಧಿಕಾರಿಗಳು, ಸ್ಥಳೀಯರು ಹಾಗೂ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ಕಳ್ಳತನವೊಂದು ತಪ್ಪಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು