AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ರಸ್ತೆಯಲ್ಲೇ ನಿಂತು ನಮಾಜ್‌ ಮಾಡಿದ ಪ್ರಕರಣ; ಸುಮೋಟೋ ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ?-ಕಟೀಲ್​

ಕಡಲತಡಿ ಮಂಗಳೂರು ಹೇಳಿ ಕೇಳಿ ಕೋಮುಸೂಕ್ಷ್ಮ ಪ್ರದೇಶ. ಇಲ್ಲಿ ಯಾವುದೇ ಕೋಮು ಘಟನೆ ನಡೆದರೂ ಅದು ರಾಜ್ಯಾದ್ಯಂತ ಚರ್ಚೆ ಆಗುತ್ತದೆ. ಅದರಂತೆ ರಸ್ತೆ ಮದ್ಯದಲ್ಲಿ ನಮಾಜ್ ಮಾಡಿದ ವಿವಾದ ಮುನ್ನಲೆಗೆ ಬಂದಿತ್ತು. ಈ ಕುರಿತು ಸಾಕಷ್ಟು ವಿರೋಧದ ಬಳಿಕ ಪೊಲೀಸರು ಸುಮೋಟೋ ಕೇಸ್ ಹಾಕಿ, ಬಳಿಕ ಹಿಂಪಡೆದಿದ್ದರು. ಈ ಕುರಿತು ಇದೀಗ ಸಂಸದ ನಳಿನ್ ಕುಮಾರ್ ಕಟೀಲು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಮಂಗಳೂರಿನಲ್ಲಿ ರಸ್ತೆಯಲ್ಲೇ ನಿಂತು ನಮಾಜ್‌ ಮಾಡಿದ ಪ್ರಕರಣ; ಸುಮೋಟೋ ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ?-ಕಟೀಲ್​
ನಳಿನ್​ ಕುಮಾರ್​ ಕಟೀಲ್​
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 01, 2024 | 6:37 PM

Share

ದಕ್ಷಿಣ ಕನ್ನಡ, ಜೂ.01: ಮಂಗಳೂರಿನಲ್ಲಿ ರಸ್ತೆಯಲ್ಲೇ ನಿಂತು ನಮಾಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವ್ಯಾಪಕ ವಿರೋಧವಾಗಿತ್ತು. ಬಳಿಕ ಪೊಲೀಸರು ಸುಮೋಟೋ ಕೇಸ್(sumoto case)​ ದಾಖಲಿಸಿ ಹಿಂಪಡೆದಿದ್ದರು. ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಸಂಸದ  ನಳಿನ್ ಕುಮಾರ್ ಕಟೀಲ್(Nalin Kumar Kateel)​, ‘ತುಷ್ಟೀಕರಣದ ನೀತಿಯಿಂದ ಸುಮೋಟೊ ಕೇಸ್ ಹಿಂಪಡೆದಿದ್ದು, ಇದರ ವಿರುದ್ಧ ಹೇಳಿಕೆ ನೀಡಿದವರ ಮೇಲೆ ಕೇಸ್ ದಾಖಲಾಗಿದೆ ಎಂದು ಕಿಡಿಕಾರಿದ್ದಾರೆ.

ಸುಮೋಟೊ ಕೇಸ್ ಹಾಕಿ, ಹಿಂಪಡೆದಿದ್ದು ಯಾಕೆ?

‘ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಾ ಇದೆ. ಸುಮೋಟೋ ಕೇಸ್ ಹಾಕಿದ್ದು ಯಾಕೆ?, ಬಳಿಕ ಹಿಂಪಡೆದಿದ್ದು ಯಾಕೆ?. ಇದನ್ನು ಬಿಜೆಪಿ ಖಂಡಿಸುತ್ತದೆ. ಸಿದ್ದರಾಮಣ್ಣನ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಅಶಾಂತಿಯ ವಾತವರಣ ಸೃಷ್ಟಿಯಾಗಿದೆ. ಕೂಡಲೇ ಶರಣ್ ಪಂಪ್​ವೆಲ್ ವಿರುದ್ಧ ದಾಖಲಿಸಿದ ಕೇಸ್ ಹಿಂಪಡೆಯಬೇಕು ಎಂದು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್

ಏನಿದು ಪ್ರಕರಣ?

ಕಳೆದ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿನ ಮಸೀದಿಯೊಂದರ ಮುಂಭಾಗ ರಸ್ತೆಯಲ್ಲೇ ನಾಮಾಜ್ ಮಾಡಲಾಗಿತ್ತು. ಯುವಕರ ತಂಡವೊಂದು ರಸ್ತೆಯಲ್ಲಿ ನಮಾಜ್ ಮಾಡಿದ್ದರು. ಮುಕ್ಕಾಲು ಭಾಗ ರಸ್ತೆಯನ್ನು ಬ್ಲಾಕ್ ಮಾಡಿಕೊಂಡು ಈ ನಮಾಜ್​ನ್ನು ಮಾಡಲಾಗಿತ್ತು. ಇದ್ರಿಂದ ವಾಹನ ಸವಾರರು ಯೂಟರ್ನ್ ಮಾಡಿಕೊಂಡು ವಾಪಾಸಾಗಿದ್ದರು. ಇನ್ನು ಈ ಎಲ್ಲಾ ಘಟನಾವಳಿಗಳನ್ನು ಸ್ಥಳೀಯರೊಬ್ಬರು ವಿಡೀಯೋ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ವಿಶ್ವ ಹಿಂದು ಪರಿಷದ್ , ಕದ್ರಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದರು.

ಈ ರೀತಿ ರಸ್ತೆಯಲ್ಲಿ ನಮಾಜ್ ಮಾಡುವುದರ ಮೂಲಕ ನಾಡಿನಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಅಂತಾ ಆರೋಪ ಮಾಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮುಡುಪು ಎಂಬಲ್ಲಿ ರಸ್ತೆಗೆ ಚೇರ್ ಗಳನ್ನು ಜೋಡಿಸಿ ಇಫ್ತಾರ್ ಕೂಡ ಮಾಡಿದ್ರು. ಇದರ ವಿರುದ್ಧ ದೂರು ನೀಡಿದ್ರು ಕ್ರಮ ಆಗಿರಲಿಲ್ಲ. ಅದರ ಮುಂದುವರೆದ ಭಾಗ ಇದಾಗಿದ್ದು, ಶಾಂತಿಯನ್ನು ಹಾಳುಗೆಡವಲು ಈ ರೀತಿ ಮಾಡಲಾಗುತ್ತದೆ ಎಂದು ಆರೋಪಿಸಿದ್ದು, ಇನ್ನು ಮುಂದೆ ಇದು ಪುನಾವರ್ತನೆ ಆಗಬಾರದು. ಹಾಗೇನಾದ್ರು ಆದ್ರೆ ವಿ.ಎಚ್.ಪಿ ಕಾರ್ಯಕರ್ತರು ಸಮೂಹಿಕವಾಗಿ ಗಂಟೆ ಜಾಗಟೆಗಳನ್ನು ಹಿಡಿದು ಅದೇ ಸ್ಥಳಗಳಲ್ಲಿ ಹನುಮಾನ್ ಚಾಲೀಸಾ ಪಠಿಸೋದಾಗಿ ಎಚ್ಚರಿಗೆ ನೀಡಿದ್ದರು. ಈ ಹಿನ್ನಲೆ ವಿಹೆಚ್​ಪಿ ಮುಖಂಡ ಶರಣ್ ಪಂಪ್​ವೆಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್