AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಮಾರಸ್ವಾಮಿ ಕುರುಡು ಕಣ್ಣಿನಿಂದ RSS ನೋಡಿದ್ದಾರೆ’- ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ವಾಗ್ದಾಳಿ

ಆರ್​ಎಸ್​ಎಸ್​ ಏನು ಅನ್ನೊದನ್ನು ಹೊರಗಿನಿಂದ ಅಳತೆ ಮಾಡಿದರೆ ಮೂರ್ಖರಾಗುತ್ತಾರೆ. ಕುರುಡರು ಆನೆ ಚಿತ್ರಣ ಕೊಟ್ಟಂತೆ. ಪ್ರಣಬ್ ಮುಖರ್ಜಿಯವರೆ ಸಂಘದ ಶಾಖೆಗೆ ಬಂದು ಮೆಚ್ಚಿದ್ದಾರೆ. ದೇಶದ ಎಲ್ಲಾ ವ್ಯವಸ್ಥೆಯಲ್ಲಿ ಅವರು ರಾಜಕೀಯವನ್ನೇ ಮಾಡುತ್ತಾರೆ.

‘ಕುಮಾರಸ್ವಾಮಿ ಕುರುಡು ಕಣ್ಣಿನಿಂದ RSS ನೋಡಿದ್ದಾರೆ’- ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ವಾಗ್ದಾಳಿ
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on: Oct 07, 2021 | 5:28 PM

Share

ಮಂಗಳೂರು: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕುರುಡು ಕಣ್ಣಿನಿಂದ ಆರ್​ಎಸ್​ಎಸ್​ ನೋಡಿದ್ದಾರೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು (Nalin Kumar Kateel) ಹೇಳಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸಂಘದ ಕಚೇರಿಗೆ ಬಂದು ನೋಡಲಿ. ಆ ನಂತರ ಆರ್​ಎಸ್​ಎಸ್​ ಸಂಘಟನೆಯ ಬಗ್ಗೆ ಮಾತನಾಡಿ. ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ. ಅಧಿಕಾರ ಇಲ್ಲದಾಗ ಆ ವ್ಯಕ್ತಿಗಳು ಸ್ಥಿಮಿತ ಕಳೆದುಕೊಳ್ಳುತ್ತಾರೆ. ಅಧಿಕಾರ ಕಳೆದುಕೊಂಡು ಅವರಿಗೆ ಹುಚ್ಚು ಹಿಡಿದಿದೆ ಅಂತ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ಕಟೀಲು ವಾಗ್ದಾಳಿ ನಡೆಸಿದ್ದಾರೆ.

ಸಂಘ ಏನು ಅನ್ನೊದನ್ನು ಹೊರಗಿನಿಂದ ಅಳತೆ ಮಾಡಿದರೆ ಮೂರ್ಖರಾಗುತ್ತಾರೆ. ಕುರುಡರು ಆನೆ ಚಿತ್ರಣ ಕೊಟ್ಟಂತೆ. ಪ್ರಣಬ್ ಮುಖರ್ಜಿಯವರೆ ಸಂಘದ ಶಾಖೆಗೆ ಬಂದು ಮೆಚ್ಚಿದ್ದಾರೆ. ದೇಶದ ಎಲ್ಲಾ ವ್ಯವಸ್ಥೆಯಲ್ಲಿ ಅವರು ರಾಜಕೀಯವನ್ನೇ ಮಾಡುತ್ತಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ, ಅಲ್ಪಸಂಖ್ಯಾತರ ಮತಗಳ ಆಸೆಯಿಂದ ಹೀಗೆ ಮಾಡಿದ್ದಾರೆ. ಸಂಘದಲ್ಲಿ ಮುಸಲ್ಮಾನ ಮತ್ತು ಕ್ರೈಸ್ತ ಯುವಕರು ಇದ್ದಾರೆ. ಇಲ್ಲಿನ ಸಂಸ್ಕಾರವನ್ನು ಪಡೆದು ಸಮಾಜದಲ್ಲಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂಬ ಶ್ರೇಷ್ಠ ಸ್ಥಾನದಲ್ಲಿರುವ ನೀವು ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳಬೇಡಿ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಆರ್ಎಸ್ಎಸ್ ವ್ಯಕ್ತಿ ನಿರ್ಮಾಣದ ಕೆಲಸ ಮಾಡುತ್ತದೆ. ವ್ಯಕ್ತಿ ನಿರ್ಮಾಣ ಮಾಡಿ ದೇಶದ ಪರ ಕೆಲಸ ಮಾಡಲು ಉತ್ತೇಜಿಸುತ್ತದೆ. ಮಹಾತ್ಮಾ ಗಾಂಧಿ ಆರ್ಎಸ್ಎಸ್ ಶಿಬಿರಕ್ಕೆ ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಬಿ ಆರ್ ಅಂಬೇಡ್ಕರ್ ಕೂಡಾ ಆರ್​ಎಸ್ಎಸ್​ ಶಿಬಿರಕ್ಕೆ ಬಂದಿದ್ದರು. ನೆಹರೂ ಸಂಘದ ಸ್ವಯಂಸೇವಕರಿಗೆ ಗಣರಾಜ್ಯೋತ್ಸವದ ಪಥಸಂಚಲನಲ್ಲಿ ಭಾಗವಹಿಸಲು ಅವಕಾಶ ನೀಡಿದ್ದರು. ಕಾಂಗ್ರೆಸ್​ನ ಉಗ್ರಪ್ಪ ಸಂಘ ಶಿಕ್ಷಣವನ್ನು ಪಡೆದಿದ್ದಾರೆ. ಜೆಡಿಎಸ್ನ ಸಿಂಧ್ಯಾರವರೂ ಸಂಘದ ಶಿಕ್ಷಣವನ್ನು ಪಡೆದಿದ್ದಾರೆ ಅಂತ ನಳೀನ್ ಕುಮಾರ್ ಹೇಳಿದರು.

ಇದನ್ನೂ ಓದಿ

ನೋಟು ರದ್ದತಿ, 370ನೇ ವಿಧಿ ತೆಗೆದುಹಾಕುವುದರಿಂದ ಕಾಶ್ಮೀರದಲ್ಲಿ ಉಗ್ರ ಕೃತ್ಯ ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ರಾಹುಲ್ ಗಾಂಧಿ

ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರ ದುರ್ಮರಣ; ಓರ್ವನನ್ನು ರಕ್ಷಿಸಲು ಹೋಗಿ ಮಗ, ಅಳಿಯ ಮತ್ತು ಬೋಟ್ ಆಪರೇಟರ್ ಸಾವು

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್