AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ತರಗತಿ ಪಠ್ಯಪುಸ್ತಕದಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ವಿಷಯವನ್ನು ಕೈಬಿಡಲಾಗಿದೆ, ಅಸಮಾಧಾನ ಹೊರಹಾಕಿದ ನಾರಾಯಣ ಗುರುಗಳ ಅನುಯಾಯಿಗಳು

ಪಠ್ಯಪುಸ್ತಕ ಪರಿಶೀಲನಾ ಸಮಿತಿ SSLC ಪಠ್ಯದಿಂದ ನಾರಾಯಣ ಗುರುಗಳ ವಿಷಯವನ್ನು ಕೈಬಿಟ್ಟಿದೆ. 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಸಾಮಾಜಿಕ ಕ್ರಾಂತಿ ಮಾಡಿದ್ದ ನಾರಾಯಣ ಗುರುಗಳ ಶ್ರೀನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಹೆಸರಿನ ನಾರಾಯಣ ಗುರುಗಳ ಜೀವನ ಚರಿತ್ರೆಗೆ ಕತ್ತರಿ ಹಾಕಿದೆ.

10ನೇ ತರಗತಿ ಪಠ್ಯಪುಸ್ತಕದಿಂದ ಸಮಾಜ ಸುಧಾರಕ ನಾರಾಯಣ ಗುರುಗಳ ವಿಷಯವನ್ನು ಕೈಬಿಡಲಾಗಿದೆ, ಅಸಮಾಧಾನ ಹೊರಹಾಕಿದ ನಾರಾಯಣ ಗುರುಗಳ ಅನುಯಾಯಿಗಳು
ನಾರಾಯಣ ಗುರುImage Credit source: DNA India
TV9 Web
| Edited By: |

Updated on:May 18, 2022 | 11:29 AM

Share

ಮಂಗಳೂರು: ಪಠ್ಯಪುಸ್ತಕ ಪರಿಶೀಲನಾ ಸಮಿತಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ (Hedgewar) ಅವರ ಭಾಷಣ ಸೇರಿಸಿದ್ದಕ್ಕೆ ವಿವಾದ ಸೃಷ್ಟಿಯಾಗಿತ್ತು. ಈಗ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಅದು SSLC ಪಠ್ಯದಿಂದ ನಾರಾಯಣ ಗುರುಗಳ (Narayana Guru) ವಿಷಯವನ್ನು ಕೈಬಿಟ್ಟಿದೆ. 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಿಂದ ಸಾಮಾಜಿಕ ಕ್ರಾಂತಿ ಮಾಡಿದ್ದ ನಾರಾಯಣ ಗುರುಗಳ ಶ್ರೀನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಹೆಸರಿನ ನಾರಾಯಣ ಗುರುಗಳ ಜೀವನ ಚರಿತ್ರೆಗೆ ಕತ್ತರಿ ಹಾಕಿದೆ.

ಇವರ ಜೀವನ ಚರಿತ್ರೆಯು ಬ್ರಹ್ಮ ಸಮಾಜ, ವಿವೇಕಾನಂದರ ಪಠ್ಯದ ಜೊತೆಗಿತ್ತು. ಆದರೆ ಇದಕ್ಕೆ ಕತ್ತರಿ ಹಾಕಲಾಗಿದೆ. ಅಲ್ಲದೇ ನಾರಾಯಣ ಗುರುಗಳ ಜತೆ ಪೆರಿಯಾರ್ ಪಠ್ಯಕ್ಕೂ ಕತ್ತರಿ ಪ್ರಯೋಗ ಮಾಡಲಾಗಿದೆ. ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಪಠ್ಯದಿಂದ ತೆಗೆದಿದ್ದಕ್ಕೆ ನಾರಾಯಣ ಗುರುಗಳ ಅನುಯಾಯಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಕೆಸರಿನಲ್ಲಿ ಸಿಲುಕಿದ ಮರ್ಸಿಡಿಸ್, ನೀರು ತುಂಬಿದ ರಸ್ತೆ, ಬೆಂಗಳೂರಿನ ಯಾವ ಎರಿಯಾದಲ್ಲಿ ಎಷ್ಟು ಮಳೆ?

10ನೇ ತರಗತಿ ಪಠ್ಯಪುಸ್ತಕದ ಅಧ್ಯಾಯ 5ರ ಸಾಮಾಜಿಕ ಮತ್ತು ಧಾರ್ಮಿಕ ಚಳುವಳಿ ವಿಭಾಗದಿಂದ ನಾರಾಯಣ ಗುರುಗಳು ಪಠ್ಯವನ್ನು ತೆಗೆಯಲಾಗಿದೆ. ಇನ್ನೂ ನಾರಾಯಣಗುರುಗಳು ದಕ್ಷಿಣ ಭಾರತದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ್ದರು. ನಾರಾಯಣ ಗುರುಗಳು ಕೇರಳದ ತೀಯಾ ಸಮಾಜದಲ್ಲಿ ಜನಿಸಿದವರು. ಇವರ ತಂದೆ ಮದನ್ ಆಸನ್ ಹಾಗೂ ತಾಯಿ ಕುಟ್ಟಿ ಅಮ್ಮಾಳ್. ಅವರ ಕಾಲಾವಧಿಯಲ್ಲಿ ಕೇರಳದಲ್ಲಿ ಜಾತಿಯತೆ, ಅಸ್ಪೃಷ್ಯತೆ ಹೆಚ್ಚಿತ್ತು. ಆಗ ಅದರ ವಿರುದ್ಧವಾಗಿ ದ್ವನಿ ಎತ್ತಿದವರು. ಇವರು ” ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು,” ಎಂಬ ಸತ್ಯವಾಕ್ಯವನ್ನು ನೀಡಿದವರು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ ಉಪಾಯಗಳನ್ನು ಕಂಡುಕೊಂಡರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 am, Wed, 18 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?