AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಹಿಂದೆ ನೋಡದೇ ದಿಢೀರನೆ ಟರ್ನ್ ತೆಗೆದುಕೊಂಡ ಬಸ್ನಿಂದ ತಪ್ಪಿಸಿಕೊಂಡು ಬೈಕ್ ಸವಾರನೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
TV9 Web
| Edited By: |

Updated on: Jan 13, 2022 | 4:03 PM

Share

ಮಂಗಳೂರು: ವಾಹನ ಸವಾರರು ತಮ್ಮ ಇಡೀ ಜೀವವನ್ನೇ ಕೈಯಲ್ಲಿ ಹಿಡಿದು ವಾಹನ ಚಲಾಯಿಸುತ್ತಿರುತ್ತಾರೆ. ಯಾವ ಕ್ಷಣದಲ್ಲಿ ಯಾವ ರೀತಿ ಯಮ ಧರ್ಮರಾಯ ಕಣ್ಣು ಮುಂದೆ ಪ್ರತ್ಯಕ್ಷನಾಗುತ್ತಾನೋ ಗೊತ್ತೇ ಆಗಲ್ಲ. ಒಂದು ಚಿಕ್ಕ ತಪ್ಪು, ಒಂದು ಚಿಕ್ಕ ನಿರ್ಲಕ್ಷ್ಯ ಭಾರಿ ದಂಡವನ್ನು ವಿಧಿಸುತ್ತೆ. ಸದ್ಯ ಇಲ್ಲೊನ್ಬ ಯುವಕ ಕ್ಷಣ ಮಾತ್ರದಲ್ಲಿ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಹಿಂದೆ ನೋಡದೇ ದಿಢೀರನೆ ಟರ್ನ್ ತೆಗೆದುಕೊಂಡ ಬಸ್ನಿಂದ ತಪ್ಪಿಸಿಕೊಂಡು ಬೈಕ್ ಸವಾರನೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರಿನ ಎಲಿಯರ್ ಪಡವು ರಸ್ತೆಯಲ್ಲಿ(Eliyar Padavu Road) ನಡೆದಿದೆ. ಮಂಗಳವಾರ ಸಂಜೆ ಮಂಗಳೂರಿನಿಂದ ಎಲಿಯಾರ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪ್ರಯಾಣಿಕರನ್ನ ಇಳಿಸಿ ರಸ್ತೆ ಖಾಲಿ ಇದ್ದ ಕಾರಣ ಹಿಂದೆ ವಾಹನ ಬರುತ್ತಿದೆಯಾ ಎಂದು ಗಮನಿಸದೆ ಚಾಲಕ ದಿಢೀರನೆ ಯೂ ಟರ್ನ್ ತೆಗೆದುಕೊಂಡಿದ್ದಾನೆ. ಆದ್ರೆ ಇದೇ ವೇಳೆ ಮತ್ತೊಂದು ತುದಿಯಿಂದ ಅತಿವೇಗದಲ್ಲಿ ಬರುತ್ತಿದ್ದ ಸ್ಕೂಟರ್ ಬಸ್ ತಿರುವು ತೆಗೆದುಕೊಳ್ಳುತ್ತಿರುವುದನ್ನು ಗಮನಿಸಿ ಕ್ಷಣ ಮಾತ್ರದಲ್ಲಿ ಅಪಘಾತದಿಂದ ಪಾರಾಗಲು ಎಡಕ್ಕೆ ತಿರುಗಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಸ್ಕೂಟರ್ ಸವಾರ ಬಸ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿರುವಾಗ ನಿಯಂತ್ರಣ ಕಳೆದುಕೊಂಡು ಎಡಕ್ಕೆ ತಿರುಗಿ ಬರಾಕಾ ಮೀನು ಸಂಸ್ಕರಣಾ ಘಟಕದ ಗೇಟ್ ಅನ್ನು ಹೊಡೆದು ನಂತರ ಮರ ಮತ್ತು ಅಂಗಡಿಯ ನಡುವಿನ ಸಣ್ಣ ಜಾಗದಿಂದಲೇ ನುಗ್ಗಿ ರಸ್ತೆ ದಾಡಿ ಮುಂದು ಹೋಗಿದ್ದಾನೆ. ಇದೆಲ್ಲವೂ ಕೇವಲ 15 ಸೆಕೆಂಡುಗಳಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಕಳವಾಗಿದ್ದ 8 ಕೋಟಿ ರೂ.ಮೌಲ್ಯದ ಸಂಪತ್ತನ್ನು 22 ವರ್ಷಗಳ ಬಳಿಕ ಪಡೆದ ಕುಟುಂಬ; ಕೋರ್ಟ್​ ಆದೇಶದ ಬೆನ್ನಲ್ಲೇ ಹಿಂದಿರುಗಿಸಿದ ಪೊಲೀಸರು

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್