AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ

ವಿವಿಗಳು ಕೂಡ ಈ ನಿಯಮಕ್ಕೆ ಬದ್ಧವಾಗಿದ್ದು, ನೆಗೆಟಿವ್ ರಿಪೋರ್ಟ್ ಇಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿದೆ. ಹೀಗಾಗಿ ವ್ಯಾಕ್ಸಿನ್ ಆಧಾರದ ಮೇಲೆ ಪರೀಕ್ಷೆಗೆ ಬರಲು ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗಲ್ಲ ಎಂದು ಕೇರಳ ಗಡಿ ಭಾಗದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 01, 2021 | 3:35 PM

Share

ದಕ್ಷಿಣ ಕನ್ನಡ: ನಾಳೆಯಿಂದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಆರಂಭವಾಗಲಿದೆ. ಆದರೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಕೇರಳ ಗಡಿಯಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳಲ್ಲಿ ಆತಂಕ ಎದುರಾಗಿದೆ. ರಾಜ್ಯಕ್ಕೆ ಬರಲು ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಒಂದು ದಿನದಲ್ಲಿ ಹೇಗೆ ಈ ರಿಪೋರ್ಟ್ ತರುವುದು ಎಂದು ವಿದ್ಯಾರ್ಥಿಗಳು ಆತಂಕಕ್ಕೆ ಗುರಿಯಾಗಿದ್ದಾರೆ.

ಮೊದಲ ಡೋಸ್ ಪಡೆದ ಆಧಾರ ಮೇಲೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ನಿರ್ಧರಿಸಿದ್ದರು. ಆದರೆ ನಿನ್ನೆ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಎರಡನೇ ಡೋಸ್ ಆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ತಿಳಿಸಲಾಗಿದೆ. ವಿವಿಗಳು ಕೂಡ ಈ ನಿಯಮಕ್ಕೆ ಬದ್ಧವಾಗಿದ್ದು, ನೆಗೆಟಿವ್ ರಿಪೋರ್ಟ್ ಇಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿದೆ. ಹೀಗಾಗಿ ವ್ಯಾಕ್ಸಿನ್ ಆಧಾರದ ಮೇಲೆ ಪರೀಕ್ಷೆಗೆ ಬರಲು ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗಲ್ಲ ಎಂದು ಕೇರಳ ಗಡಿ ಭಾಗದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ನೆಗೆಟಿವ್ ರಿಪೋರ್ಟ್ ಒಂದು ದಿನದಲ್ಲಿ ತರಲು ಸಾಧ್ಯವಾಗಲ್ಲ. ಆದ್ದರಿಂದ ವ್ಯಾಕ್ಸಿನೇಷನ್‌ ಆಧಾರದ ಮೇಲೆ ಪರೀಕ್ಷೆಗೆ ಕುರಿಸಿ. ಈಗಾಗಲೇ ನಾವು ಬಸ್ ಇಲ್ಲದೇ ಪರೀಕ್ಷೆ ಬರೆಯಲು ಪರದಾಡುತ್ತಿದ್ದೇವೆ. ಹೀಗಿರುವಾಗ ಮತ್ತೆ ಈ ಹೊಸ ನಿಯಮ ಮಾಡಿ ನಮ್ಮನ್ನು ಪರೀಕ್ಷೆಯಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಕೇರಳ ಗಡಿ ಭಾಗದ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

NEET PG 2021 Admit Card: ನೀಟ್​ ಸ್ನಾತಕೋತ್ತರ ಪದವಿ ಪರೀಕ್ಷೆ ಪ್ರವೇಶ ಪತ್ರ ಏಪ್ರಿಲ್​ 12ರಂದು ಬಿಡುಗಡೆ; ಡೌನ್​ಲೋಡ್ ಮಾಡಿಕೊಳ್ಳಲು ಹೀಗೆ ಮಾಡಿ

Published On - 3:32 pm, Sun, 1 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್