AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಲ್ಲಿ ನೇಮ ಅನುಕರಣೆ: ದೈವಾರಾಧಕರ ಹೋರಾಟಕ್ಕೆ ವಿಹೆಚ್​ಪಿ ಬಜರಂಗದಳ ಬೆಂಬಲ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದ ನಂತರ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಿರುವುದು ಕರಾವಳಿ ಭಾಗದ ದೈವಾರಾಧಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಧಾರವಾಹಿ, ಸಿನಿಮಾಗಳಲ್ಲಿ ದೈವರಾಧನೆಗೆ ಅಪಮಾನವಾಗುತ್ತಿರುವ ವಿಚಾರವಾಗಿ ಹೋರಾಟಕ್ಕೆ ಇಳಿದಿದ್ದು, ಈ ಹೋರಾಟಕ್ಕೆ ವಿಹೆಚ್​ಪಿ ಬಜರಂಗದಳ ಬೆಂಬಲ ಸೂಚಿಸಿದೆ.

ಸಿನಿಮಾಗಳಲ್ಲಿ ನೇಮ ಅನುಕರಣೆ: ದೈವಾರಾಧಕರ ಹೋರಾಟಕ್ಕೆ ವಿಹೆಚ್​ಪಿ ಬಜರಂಗದಳ ಬೆಂಬಲ
ಸಿನಿಮಾಗಳಲ್ಲಿ ನೇಮ ಅನುಕರಣೆ: ದೈವಾರಾಧಕರ ಹೋರಾಟಕ್ಕೆ ವಿಹೆಚ್​ಪಿ ಬಜರಂಗದಳ ಬೆಂಬಲ
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi|

Updated on: Feb 17, 2024 | 12:05 PM

Share

ಮಂಗಳೂರು, ಫೆ.17: ಧಾರವಾಹಿ, ಸಿನಿಮಾಗಳಲ್ಲಿ ದೈವರಾಧನೆಗೆ ಅಪಮಾನವಾಗುತ್ತಿರುವ ವಿಚಾರವಾಗಿ ದೈವಾರಾಧಕರು ನಡೆಸುತ್ತಿರುವ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ (VHP Bajrang Dal) ಬೆಂಬಲ ವ್ಯಕ್ತಪಡಿಸಿದೆ. ದೈವರಾಧನೆಗೆ ಅಪಮಾನವಾಗುತ್ತಿರುವ ಸಂಬಂಧ ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ (Dakshina Kannada) ಜಿಲ್ಲಾಧಿಕಾರಿಗೆ ತುಳುನಾಡ ದೈವರಾಧನ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.

ಮುಂದೆ ಸಿನಿಮಾ, ಧಾರಾವಾಹಿ, ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನವಾಗಬಾರದು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪುವೆಲ್ ಎಚ್ಚರಿಕೆ ನೀಡಿದ್ದಾರೆ. ಕರಾವಳಿಯಲ್ಲಿ ದೈವರಾಧನೆಗೆ ಆದರದ್ದೆ ಆದ ಮಹತ್ವವಿದೆ. ಆದರೆ ಚಲನಚಿತ್ರ, ಧಾರವಾಹಿ, ನಾಟಕಗಳಲ್ಲಿ ನಮ್ಮ ನಂಬಿಕೆಗೆ ಧಕ್ಕೆ ತರುವಂತಹ ಕೆಲಸ ಆಗುತ್ತಿದೆ. ಇದನ್ನು ವಿಎಚ್​ಪಿ ಬಜರಂಗದಳ ವಿರೋಧಿಸುತ್ತದೆ. ದೈವರಾಧಕರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದರು.

ಇದನ್ನೂ ಓದಿ: ಇನ್ಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ: ನಿರ್ದೇಶಕ ಪ್ರೀತಮ್ ಶೆಟ್ಟಿ

ಚಲನಚಿತ್ರ ಮಾಡುವ ಬಗ್ಗೆ ನಮ್ಮದೇನು ವಿರೋಧವಿಲ್ಲ. ಸಿನಿಮಾ, ಧಾರವಾಹಿಗಳಲ್ಲಿ ದೈವದ ಕಥೆ, ಇತಿಹಾಸ, ಚರಿತ್ರೆ, ನಂಬಿಕೆ ಹೇಳಲಿ. ಆದರೆ ಕೋಲ, ನೇಮೋತ್ಸವದ ಅನುಕರಣೆ ಮಾಡಬಾರದು. ಕಾಲಿಗೆ ಗಗ್ಗರ ಹಾಕೋದಕ್ಕೆ ಒಂದು ಕ್ರಮ ಹಾಗೂ ಅದರದ್ದೇ ಆದ ರೀತಿ ನೀತಿಗಳು ಇವೆ. ವೇಷಭೂಷಣ ಹಾಕುವುದಾದರೂ ಅದರದ್ದೇ ಆದ ಮಹತ್ವವಿದೆ. ಆದರೆ ಅದೆಲ್ಲಾವನ್ನು ಗಾಳಿಗೆ ತೂರಿ ದಾರಿಗೆ ತರಲಾಗುತ್ತಿದೆ ಎಂದರು.

ಬೇರೆ ಧರ್ಮದ ದೇವರ ಫಿಲ್ಮ್ ತೆಗೆಯುವ ಧೈರ್ಯ ಇದೆಯಾ?

ದುಡ್ಡಿಗೆ, ಪ್ರಚಾರಕ್ಕಾಗಿ ದೈವಾರಾಧನೆಯನ್ನು ಚಲನಚಿತ್ರದಲ್ಲಿ ತೋರಿಸುವುದು ಸರಿಯಲ್ಲ. ಚಲನಚಿತ್ರ ನಿರ್ಮಾಪಕರಿಗೆ ತಾಕತ್ತು ಇದ್ದರೆ ಹಿಂದುಗಳು ಅಲ್ಲದ ಬೇರೆ ಸಮುದಾಯದ ಧಾರ್ಮಿಕ ಆಚರಣೆ ಚಿತ್ರೀಕರಣ ಮಾಡಲಿ. ನಾಟಕ, ಫಿಲ್ಮ್ ತೆಗೆದು ತೋರಿಸಲಿ. ಆ ದೈರ್ಯ ಇದೆಯಾ? ನಾವು ಸುಮ್ಮನೆ ಕುಳಿತುಕೊಳ್ಳುತ್ತೇವೆ ಎಂದು ಈ ರೀತಿ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ಧಾರವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ

ದೈವರಾಧಕರ ಹೋರಾಟಕ್ಕೆ ಪೂರ್ತಿ ಬೆಂಬಲವನ್ನು ವಿಹೆಚ್​ಪಿ, ಬಜರಂಗದಳ ನೀಡುತ್ತದೆ. ಜಿಲ್ಲಾಧಿಕಾರಿಗಳು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡುತ್ತೇವೆ. ಮುಂದಿನ ದಿನದಲ್ಲಿ ಮತ್ತೆ ಕೂತು ಯಾವ ರೀತಿಯ ಹೋರಾಟ ಮಾಡಬಹುದು ಎಂದು ಯೋಚಿಸುತ್ತೇವೆ ಎಂದರು.

ಏನಿದು ಪ್ರಕರಣ?

ನಟ ರಿಷಬ್ ಶೆಟ್ಟಿ ಅಭಿನಯದ ಸೂಪರ್ ಹಿಟ್ ಕಾಂತರ ಸಿನಿಮಾವು ಬಣ್ಣದ ಲೋಕದಲ್ಲಿ ಧೂಳೆಬ್ಬಿಸಿತ್ತು. ದೈವದ ಕುರಿತ ಈ ಸಿನಿಮಾ ಪ್ರಸಾರದ ನಂತರ ಕೋಲ, ನೇಮೋತ್ಸವದ ರೀತಿ ಬಣ್ಣ ಹಚ್ಚಿ ಅನುಕರಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುವ ಗೀಳು ಆರಂಭವಾಯಿತು. ಚಪ್ಪಲಿ ಹಾಕಿಕೊಂಡು ಅಣುಕಿಸಲಾಗಿತ್ತು. ಇದು ದೈವ ಭಕ್ತರ ನಂಬಿಕೆಗೆ ಘಾಸಿ ಉಂಟು ಮಾಡಿದ್ದಲ್ಲದೆ ದೈವಾರಾಧಕರ ಹೋರಾಟಕ್ಕೆ ಕಾರಣವಾಯಿತು.

ಕಾಂತಾರ ಭಾಗ 2 ರ ಕೆಲಸ ಕಾರ್ಯಗಳು ನಡೆಯುತ್ತಿರುವ ನಡುವೆ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯ ಪ್ರೋಮೋದಲ್ಲಿ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿತ್ತು. ಹೀಗಾಗಿ ದೈವಾರಾಧಕರು ಗರಂ ಆಗಿದ್ದು ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ದೈವಾರಾಧಕರು ಕೊರಗಜ್ಜನ ಮೊರೆ ಹೋಗಿದ್ದ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ