AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ; ಭಕ್ತರಲ್ಲಿ ಅಚ್ಚರಿ

ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ.

ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ; ಭಕ್ತರಲ್ಲಿ ಅಚ್ಚರಿ
ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on:Nov 11, 2023 | 4:45 PM

Share

ಮಂಗಳೂರು, ನ.11: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ (Anantha Padmanabhaswamy Temple) ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ (Crocodile) ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ.

ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಬಲಿಯಾಗಿದ್ದ ಮೊಸಳೆ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಈ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿತ್ತು. ಆದರೆ, 2022 ರ ಅಕ್ಟೋಬರ್ 9 ರಂದು ಇದು ಮೃತಪಟ್ಟಿತ್ತು.

ಬಬಿಯಾ ಮೃತಪಟ್ಟು ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಂಗಳೂರು: ಪಟಾಕಿ ಮಳಿಗೆ ತೆರೆಯಲು ಹೊಸ ನಿಯಮ, ಕಾಂಗ್ರೆಸ್ ಸರ್ಕಾರದ ಹುನ್ನಾರ ಎಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್

ಬಬಿಯಾ ಮೊಸಳೆ

ಹಲವಾರು ದೇವಸ್ಥಾನಗಳಲ್ಲಿ ಆನೆ, ಬಸವ, ಇತ್ಯಾದಿ ಪ್ರಾಣಿಗಳು ದೇವರ ಪ್ರಾಣಿಗಳಾಗಿರುತ್ತವೆ. ಆದರೆ ಅನಂತಪದ್ಮನಾಭ ದೇವಸ್ಥಾನದಲ್ಲಿ ಮೊಸಳೆ ದೇವರ ಮೊಸಳೆಯಾಗಿದೆ. ಕ್ಷೇತ್ರದ ಕೆರೆಯಲ್ಲಿ ನೀರಿನ ಮಧ್ಯೆಯೇ ಇದ್ದುಕೊಂಡಿದ್ದ ಬಬಿಯಾ ಮೊಸಳೆಗೆ ಪ್ರತಿನಿತ್ಯ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತಿತ್ತು. ಈ ನೈವೇದ್ಯವೇ ಮೊಸಳೆಯ ಆಹಾರವಾಗಿತ್ತು. ಈ ಮೊಸಳೆಯು ಯಾರಿಗೂ ತೊಂದರೆ, ನೋವು ಉಂಟು ಮಾಡಿಲ್ಲ.

ಈ ಮೊಸಳೆಯು ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Sat, 11 November 23

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​