AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
Rakesh Nayak Manchi
|

Updated on:Oct 13, 2023 | 8:36 AM

Share

ಮಂಗಳೂರು, ಅ.13: ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ (Mangaluru-Hyderabad) ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ತಮಿಳುನಾಡಿನ ಸೇಲಂ ಮತ್ತು ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಮೂರು ಹೊಸ ನೇರ ಮಾರ್ಗಗಳನ್ನು ಪರಿಚಯಿಸಿದ ನಂತರ ಇದೀಗ ಮಂಗಳೂರಿನಿಂದ ಹೈದರಾಬಾದ್​ಗೆ ಮೂರನೇ ಹೊಸ ವಿಮಾನ ಸೇವೆ ನೀಡಲು ಮುಂದಾಗಿದೆ.

ಅಕ್ಟೋಬರ್ 19 ರಿಂದ ಇಂಡಿಗೋ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ತನ್ನ ವಿಮಾನ ವೇಳಾಪಟ್ಟಿಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. “ಹೈದರಾಬಾದ್​ಗೆ 6 ಇ 7536 ಮೂರನೇ ದೈನಂದಿನ ವಿಮಾನ ಕಾರ್ಯಾಚರಣೆ ನಡೆಸಲಿದೆ” ಎಂದು ಅದು ಹೇಳಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: Indigo Fuel Charge: ಅಗ್ಗದ ವಿಮಾನ ಪ್ರಯಾಣ ಸೇವೆ ನೀಡುವ ಇಂಡಿಗೋದಲ್ಲಿ ಟಿಕೆಟ್ ಬೆಲೆ ಇನ್ನು ದುಬಾರಿ; ಇಲ್ಲಿದೆ ನೂತನ ದರಗಳು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.40ಕ್ಕೆ ಬಂದು 20 ನಿಮಿಷ ತಡವಾಗಿ ಹೈದರಾಬಾದ್​ಗೆ ಹೊರಟ ಎಟಿಆರ್ ವಿಮಾನ 6ಇ 7549 ಹಾಗೂ ರಾತ್ರಿ 10.15ಕ್ಕೆ ಬಂದು ರಾತ್ರಿ 10.35ಕ್ಕೆ ಹೊರಟ 6ಇ 7103 ವಿಮಾನಗಳು ಹೆಚ್ಚುವರಿಯಾಗಿವೆ. ಈ ಹೆಚ್ಚಳವು ಅಕ್ಟೋಬರ್ 28 ರವರೆಗೆ ಇರುತ್ತದೆ.

ಇದು ಪ್ರಸ್ತುತ ಬೇಸಿಗೆ ವೇಳಾಪಟ್ಟಿಯ ಅಂತ್ಯವನ್ನು ಸೂಚಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಂಡಿಗೋ ಪ್ರಸ್ತುತ ಮಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್​ಗೆ ತನ್ನ 78 ಆಸನಗಳ ಎಟಿಆರ್ ವಿಮಾನಗಳ ಸೇವೆಯನ್ನು ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Fri, 13 October 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?