AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
Rakesh Nayak Manchi
Rakesh Nayak Manchi|

Updated on:Oct 13, 2023 | 8:36 AM

Share

ಮಂಗಳೂರು, ಅ.13: ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ (Mangaluru-Hyderabad) ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ತಮಿಳುನಾಡಿನ ಸೇಲಂ ಮತ್ತು ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಮೂರು ಹೊಸ ನೇರ ಮಾರ್ಗಗಳನ್ನು ಪರಿಚಯಿಸಿದ ನಂತರ ಇದೀಗ ಮಂಗಳೂರಿನಿಂದ ಹೈದರಾಬಾದ್​ಗೆ ಮೂರನೇ ಹೊಸ ವಿಮಾನ ಸೇವೆ ನೀಡಲು ಮುಂದಾಗಿದೆ.

ಅಕ್ಟೋಬರ್ 19 ರಿಂದ ಇಂಡಿಗೋ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ತನ್ನ ವಿಮಾನ ವೇಳಾಪಟ್ಟಿಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. “ಹೈದರಾಬಾದ್​ಗೆ 6 ಇ 7536 ಮೂರನೇ ದೈನಂದಿನ ವಿಮಾನ ಕಾರ್ಯಾಚರಣೆ ನಡೆಸಲಿದೆ” ಎಂದು ಅದು ಹೇಳಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: Indigo Fuel Charge: ಅಗ್ಗದ ವಿಮಾನ ಪ್ರಯಾಣ ಸೇವೆ ನೀಡುವ ಇಂಡಿಗೋದಲ್ಲಿ ಟಿಕೆಟ್ ಬೆಲೆ ಇನ್ನು ದುಬಾರಿ; ಇಲ್ಲಿದೆ ನೂತನ ದರಗಳು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.40ಕ್ಕೆ ಬಂದು 20 ನಿಮಿಷ ತಡವಾಗಿ ಹೈದರಾಬಾದ್​ಗೆ ಹೊರಟ ಎಟಿಆರ್ ವಿಮಾನ 6ಇ 7549 ಹಾಗೂ ರಾತ್ರಿ 10.15ಕ್ಕೆ ಬಂದು ರಾತ್ರಿ 10.35ಕ್ಕೆ ಹೊರಟ 6ಇ 7103 ವಿಮಾನಗಳು ಹೆಚ್ಚುವರಿಯಾಗಿವೆ. ಈ ಹೆಚ್ಚಳವು ಅಕ್ಟೋಬರ್ 28 ರವರೆಗೆ ಇರುತ್ತದೆ.

ಇದು ಪ್ರಸ್ತುತ ಬೇಸಿಗೆ ವೇಳಾಪಟ್ಟಿಯ ಅಂತ್ಯವನ್ನು ಸೂಚಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಂಡಿಗೋ ಪ್ರಸ್ತುತ ಮಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್​ಗೆ ತನ್ನ 78 ಆಸನಗಳ ಎಟಿಆರ್ ವಿಮಾನಗಳ ಸೇವೆಯನ್ನು ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Fri, 13 October 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.