AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
Rakesh Nayak Manchi
|

Updated on:Oct 13, 2023 | 8:36 AM

Share

ಮಂಗಳೂರು, ಅ.13: ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ (Mangaluru-Hyderabad) ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ತಮಿಳುನಾಡಿನ ಸೇಲಂ ಮತ್ತು ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಮೂರು ಹೊಸ ನೇರ ಮಾರ್ಗಗಳನ್ನು ಪರಿಚಯಿಸಿದ ನಂತರ ಇದೀಗ ಮಂಗಳೂರಿನಿಂದ ಹೈದರಾಬಾದ್​ಗೆ ಮೂರನೇ ಹೊಸ ವಿಮಾನ ಸೇವೆ ನೀಡಲು ಮುಂದಾಗಿದೆ.

ಅಕ್ಟೋಬರ್ 19 ರಿಂದ ಇಂಡಿಗೋ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ತನ್ನ ವಿಮಾನ ವೇಳಾಪಟ್ಟಿಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. “ಹೈದರಾಬಾದ್​ಗೆ 6 ಇ 7536 ಮೂರನೇ ದೈನಂದಿನ ವಿಮಾನ ಕಾರ್ಯಾಚರಣೆ ನಡೆಸಲಿದೆ” ಎಂದು ಅದು ಹೇಳಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: Indigo Fuel Charge: ಅಗ್ಗದ ವಿಮಾನ ಪ್ರಯಾಣ ಸೇವೆ ನೀಡುವ ಇಂಡಿಗೋದಲ್ಲಿ ಟಿಕೆಟ್ ಬೆಲೆ ಇನ್ನು ದುಬಾರಿ; ಇಲ್ಲಿದೆ ನೂತನ ದರಗಳು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.40ಕ್ಕೆ ಬಂದು 20 ನಿಮಿಷ ತಡವಾಗಿ ಹೈದರಾಬಾದ್​ಗೆ ಹೊರಟ ಎಟಿಆರ್ ವಿಮಾನ 6ಇ 7549 ಹಾಗೂ ರಾತ್ರಿ 10.15ಕ್ಕೆ ಬಂದು ರಾತ್ರಿ 10.35ಕ್ಕೆ ಹೊರಟ 6ಇ 7103 ವಿಮಾನಗಳು ಹೆಚ್ಚುವರಿಯಾಗಿವೆ. ಈ ಹೆಚ್ಚಳವು ಅಕ್ಟೋಬರ್ 28 ರವರೆಗೆ ಇರುತ್ತದೆ.

ಇದು ಪ್ರಸ್ತುತ ಬೇಸಿಗೆ ವೇಳಾಪಟ್ಟಿಯ ಅಂತ್ಯವನ್ನು ಸೂಚಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಂಡಿಗೋ ಪ್ರಸ್ತುತ ಮಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್​ಗೆ ತನ್ನ 78 ಆಸನಗಳ ಎಟಿಆರ್ ವಿಮಾನಗಳ ಸೇವೆಯನ್ನು ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Fri, 13 October 23

Follow Us
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?