AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ.

ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ
Follow us
Rakesh Nayak Manchi
|

Updated on:Oct 13, 2023 | 8:36 AM

ಮಂಗಳೂರು, ಅ.13: ಖಾಸಗಿ ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ಅಕ್ಟೋಬರ್ 19 ರಿಂದ ಮಂಗಳೂರಿನಿಂದ ಹೈದರಾಬಾದ್‌ಗೆ (Mangaluru-Hyderabad) ಮೂರನೇ ನೇರ ವಿಮಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ. ತಮಿಳುನಾಡಿನ ಸೇಲಂ ಮತ್ತು ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಮೂರು ಹೊಸ ನೇರ ಮಾರ್ಗಗಳನ್ನು ಪರಿಚಯಿಸಿದ ನಂತರ ಇದೀಗ ಮಂಗಳೂರಿನಿಂದ ಹೈದರಾಬಾದ್​ಗೆ ಮೂರನೇ ಹೊಸ ವಿಮಾನ ಸೇವೆ ನೀಡಲು ಮುಂದಾಗಿದೆ.

ಅಕ್ಟೋಬರ್ 19 ರಿಂದ ಇಂಡಿಗೋ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್​ಗೆ ತನ್ನ ವಿಮಾನ ವೇಳಾಪಟ್ಟಿಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. “ಹೈದರಾಬಾದ್​ಗೆ 6 ಇ 7536 ಮೂರನೇ ದೈನಂದಿನ ವಿಮಾನ ಕಾರ್ಯಾಚರಣೆ ನಡೆಸಲಿದೆ” ಎಂದು ಅದು ಹೇಳಿದೆ. ಈ ಮೂರನೇ ನೇರ ವಿಮಾನವು ಮಧ್ಯಾಹ್ನ 2:15 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 2:35 ಕ್ಕೆ ಹೈದರಾಬಾದ್​ಗೆ ತೆರಳಲಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: Indigo Fuel Charge: ಅಗ್ಗದ ವಿಮಾನ ಪ್ರಯಾಣ ಸೇವೆ ನೀಡುವ ಇಂಡಿಗೋದಲ್ಲಿ ಟಿಕೆಟ್ ಬೆಲೆ ಇನ್ನು ದುಬಾರಿ; ಇಲ್ಲಿದೆ ನೂತನ ದರಗಳು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.40ಕ್ಕೆ ಬಂದು 20 ನಿಮಿಷ ತಡವಾಗಿ ಹೈದರಾಬಾದ್​ಗೆ ಹೊರಟ ಎಟಿಆರ್ ವಿಮಾನ 6ಇ 7549 ಹಾಗೂ ರಾತ್ರಿ 10.15ಕ್ಕೆ ಬಂದು ರಾತ್ರಿ 10.35ಕ್ಕೆ ಹೊರಟ 6ಇ 7103 ವಿಮಾನಗಳು ಹೆಚ್ಚುವರಿಯಾಗಿವೆ. ಈ ಹೆಚ್ಚಳವು ಅಕ್ಟೋಬರ್ 28 ರವರೆಗೆ ಇರುತ್ತದೆ.

ಇದು ಪ್ರಸ್ತುತ ಬೇಸಿಗೆ ವೇಳಾಪಟ್ಟಿಯ ಅಂತ್ಯವನ್ನು ಸೂಚಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇಂಡಿಗೋ ಪ್ರಸ್ತುತ ಮಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್​ಗೆ ತನ್ನ 78 ಆಸನಗಳ ಎಟಿಆರ್ ವಿಮಾನಗಳ ಸೇವೆಯನ್ನು ನೀಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Fri, 13 October 23

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್