AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕ ದಿ.ಇದಿನಬ್ಬ ಕುಟುಂಬಕ್ಕೆ ಐಸಿಸ್ ನಂಟು ಪ್ರಕರಣ; ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಬಂಧನ

ದೀಪ್ತಿ ಮಾರ್ಲ ಮಾಜಿ ಶಾಸಕ ದಿ.ಇದಿನಬ್ಬ ಮಗ ಬಿ‌.ಎಂ.ಭಾಷನ ಅವರ ಸೊಸೆ. ಇದಿನಬ್ಬ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿ ದೀಪ್ತಿ ಮಾರ್ಲ ಇಸ್ಲಾಂಗೆ ಮತಾತಂತರಗೊಂಡಿದ್ದರು. ನಂತರ ಕ್ರೋನಿಕಲ್ ಪೌಂಡೇಶನ್ ಎಂಬ ಇನ್ಸ್​ಸ್ಟಾಗ್ರಾಮ್​ ಪೇಜ್ ಮೂಲಕ ದೀಪ್ತಿ ಐಸಿಸ್​ ಕೆಲಸ ಮಾಡಲು ಶುರು ಮಾಡಿದ್ದಳು.

ಮಾಜಿ ಶಾಸಕ ದಿ.ಇದಿನಬ್ಬ ಕುಟುಂಬಕ್ಕೆ ಐಸಿಸ್ ನಂಟು ಪ್ರಕರಣ; ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on:Jan 05, 2022 | 2:36 PM

Share

ಮಂಗಳೂರು: ಮಾಜಿ ಶಾಸಕ ದಿ.ಇದಿನಬ್ಬ ಕುಟುಂಬಕ್ಕೆ ಐಸಿಸ್ (ISIS) ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂರನ್ನು ಬಂಧಿಸಲಾಗಿದೆ. ಎರಡು ದಿನಗಳ ಹಿಂದೆ ಉಳ್ಳಾಲದಲ್ಲಿ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಎಂಬಾಕೆಯನ್ನು ಎನ್​ಐಎ (NIA) ಬಂಧಿಸಿ, ವಿಚಾರಣೆ ನಡೆಸಿದೆ. ಈ ವೇಳೆ ಹನಿಟ್ರ್ಯಾಪ್ ಮೂಲಕ ಯುವಕರನ್ನು ಮತಾಂತರಗೊಳಿಸಿ ಐಸಿಸ್‌ಗೆ ಸೇರಿಸುತ್ತಿದ್ದರು ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

ದೀಪ್ತಿ ಮಾರ್ಲ ಮಾಜಿ ಶಾಸಕ ದಿ.ಇದಿನಬ್ಬ ಮಗ ಬಿ‌.ಎಂ.ಭಾಷನ ಅವರ ಸೊಸೆ. ಇದಿನಬ್ಬ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿ ದೀಪ್ತಿ ಮಾರ್ಲ ಇಸ್ಲಾಂಗೆ ಮತಾತಂತರಗೊಂಡಿದ್ದರು. ನಂತರ ಕ್ರೋನಿಕಲ್ ಪೌಂಡೇಶನ್ ಎಂಬ ಇನ್ಸ್​ಸ್ಟಾಗ್ರಾಮ್​ ಪೇಜ್ ಮೂಲಕ ದೀಪ್ತಿ ಐಸಿಸ್​ ಕೆಲಸ ಮಾಡಲು ಶುರು ಮಾಡಿದ್ದಳು.

ನಂತರ ಪತಿ ಅನಾಸ್ ಅಬ್ದುಲ್ ರೆಹಮಾನ್, ಸಂಬಂಧಿ ಅಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದಳು. ಸುಮಾರು 15 ನಕಲಿ‌ ಸೋಷಿಯಲ್ ಮೀಡಿಯಾ ಖಾತೆಗಳನ್ನು ದೀಪ್ತಿ ಹೊಂಡಿದ್ದಾಳೆ.

ಈ ಹಿಂದೆ ಎನ್ಐಎನಿಂದ ಬಂಧಿತನಾಗಿದ್ದ ಮಾದೇಶ ಪೆರುಮಾಳ್​ನ್ನು ಮತಾಂತರ ಮಾಡಿ ಐಸಿಸ್​ಗೆ ಕೆಲಸ ಮಾಡುವಂತೆ ದೀಪ್ತಿ ತಿಳಿಸಿದ್ದರು. ಮಾದೇಶ್ ಪೆರುಮಾಳ್ ಹನಿಟ್ರಾಪ್ ಮಾಡಲು ದೀಪ್ತಿ‌ ಮಾರ್ಲ ‌10 ಲಕ್ಷ ಖರ್ಚು ಮಾಡಿದ್ದರು. ಇದುವರೆಗೂ ಸುಮಾರು 10 ಯುವಕರನ್ನು ಮತಾಂತರಗೊಳಿಸಿರುವ ದೀಪ್ತಿ ಐಸಿಸ್​ಗೆ ಸೇರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಎನ್ಐಎ ಉನ್ನತ ಮೂಲಗಳ ಮಾಹಿತಿ ಪ್ರಕಾರ ಸದ್ಯ ದೀಪ್ತಿ ಮಾರ್ಲಳನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹಿಂದುತ್ವವನ್ನು ಐಸಿಸ್​ ಉಗ್ರಸಂಘಟನೆಗೆ ಹೋಲಿಸಿದ್ದ ಸಲ್ಮಾನ್​ ಖುರ್ಷಿದ್​ ವಿರುದ್ಧ ಎಫ್​ಐಆರ್​ ದಾಖಲಿಸುವ ಕೋರ್ಟ್​ ಆದೇಶ

ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟು? ಬಿಎಂ ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ

Published On - 2:23 pm, Wed, 5 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ