ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ

ದಕ್ಷಿಣ ಕನ್ನಡದ ಪ್ರವೀಣ್ ನೆಟ್ಟಾರು ಹ್ಯತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್​ನನ್ನು ಎನ್​ಐಎ ಬಂಧಿಸಿದೆ. ಅಬ್ದುಲ್ ರಹಿಮಾನ್​ ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದನು. ಈ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ
ಆರೋಪಿ ಅಬ್ದುಲ್​ ರಹಿಮಾನ್, ಪ್ರವೀಣ್​ ನೆಟ್ಟಾರು
Updated By: ವಿವೇಕ ಬಿರಾದಾರ

Updated on: Jul 04, 2025 | 7:47 PM

ಮಂಗಳೂರು, ಜುಲೈ 04: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ (Mangaluru) ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ ಕತಾರ್​ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ (ಜು.04) ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!

ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಎನ್​ಐಎ ಟ್ವೀಟ್​

ಪ್ರವೀಣ್​ ನೆಟ್ಟಾರು ಕೊಲೆ

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 28 ಜನ ಆರೋಪಿಗಳ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Fri, 4 July 25