AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ

ದಕ್ಷಿಣ ಕನ್ನಡದ ಪ್ರವೀಣ್ ನೆಟ್ಟಾರು ಹ್ಯತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್​ನನ್ನು ಎನ್​ಐಎ ಬಂಧಿಸಿದೆ. ಅಬ್ದುಲ್ ರಹಿಮಾನ್​ ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದನು. ಈ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ
ಆರೋಪಿ ಅಬ್ದುಲ್​ ರಹಿಮಾನ್, ಪ್ರವೀಣ್​ ನೆಟ್ಟಾರು
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jul 04, 2025 | 7:47 PM

Share

ಮಂಗಳೂರು, ಜುಲೈ 04: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ (Mangaluru) ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ ಕತಾರ್​ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ (ಜು.04) ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ
Image
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
Image
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
Image
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!

ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಎನ್​ಐಎ ಟ್ವೀಟ್​

ಪ್ರವೀಣ್​ ನೆಟ್ಟಾರು ಕೊಲೆ

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 28 ಜನ ಆರೋಪಿಗಳ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Fri, 4 July 25

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ