AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

Praveen Nettaru murder: ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ NIA ನ್ಯಾಯಾಲಯ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 28, 2023 | 4:14 PM

Share

ಮಂಗಳೂರು: ಕರ್ನಾಟಕದಲ್ಲಿ ಪ್ರಕರಣವೊಂದ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್​ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಸುಳ್ಯದಲ್ಲಿ (Sullia) ಮೈಕ್ ಅನೌನ್ಸ್ ಮೆಂಟ್​​ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ (Praveen Nettaru murder case).

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನು NIA ನ್ಯಾಯಾಲಯದ ಅಧಿಕಾರಿಗಳು ಅಂಟಿಸಿದ್ದಾರೆ. ಕೋರ್ಟ್​​ ಆದೇಶದ ಪ್ರತಿಯನ್ನು ಅಂಟಿಸಿರುವ ಅಧಿಕಾರಿಗಳು, ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

ಏನಿದು ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದಿತ್ತು. ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ 21 ಅರೋಪಿಗಳನ್ನು ಎನ್​ಐಎ ಅರೆಸ್ಟ್ ಮಾಡಿ, ಆರೋಪಿಗಳ ವಿರುದ್ದ ಚಾರ್ಜ್​ಶೀಟ್ ಸಲ್ಲಿಸಿತ್ತು. ಅದರ ಮುಂದಿನ ಭಾಗವಾಗಿ ಮತ್ತೆ, ಇಬ್ಬರು ಅರೋಪಿಗಳಾದ ತುಫೈಲ್ ಎಂ ಹೆಚ್ ಮತ್ತು ಮಹಮ್ಮದ್ ಜಬೀರ್ ವಿರುದ್ದ ಪೂರಕ ಚಾರ್ಜ್​ರ್ಶೀಟ್​ ಅನ್ನು ಎನ್ ಐ ಎ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ.

ಕೊಲೆ ಮಾಡಿದ್ದ ಅರೋಪಿಗಳ ಪೈಕಿ ಮಹಮ್ಮದ್ ಜಾಬಿರ್ ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಹೇಳಿ ಪ್ರಚೋದನಕಾರಿ ಭಾಷಣವನ್ನೂ ಮಾಡಿದ್ದ ಎಂಬುದು ಎನ್ ಐ ಎ ತನಿಖೆ ವೇಳೆ ಪತ್ತೆಯಾಗಿದೆ. ಒಟ್ಟಾರೆ ಪ್ರವೀಣ್ ನೆಟ್ಟಾರು ಕೊಲೆ ಕೇವಲ ಒಂದು ಕಾರಣಕ್ಕೆ ಆಗಿದ್ದಲ್ಲ, ಬದಲಾಗಿ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ತರುವ ಉದ್ದೇಶಕ್ಕೆ ಪೂರಕವಾಗಿ ಇಟ್ಟಿದ್ದ ಹೆಜ್ಜೆಗುರುತು ಎನ್ನುವುದು ಆತಂಕಕಾರಿ ವಿಷಯವಾಗಿದೆ. ಸದ್ಯ 21 ಅರೋಪಿಗಳ ವಿರುದ್ದ ಈ ಕೇಸ್​ನಲ್ಲಿ ಚಾರ್ಜ್​ರ್ಶಿಟ್ ಸಲ್ಲಿಕೆ ಮಾಡಿರುವ ಎನ್ ಐ ಎ ಹೆಚ್ಚಿನ ತನಿಖೆ ನಡೆಸುತ್ತಿದೆ.

ಮಂಗಳೂರು ಕುರಿತಾದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 28 June 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು