ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

|

Updated on: Jun 28, 2023 | 4:14 PM

Praveen Nettaru murder: ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ NIA ನ್ಯಾಯಾಲಯ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
Follow us on

ಮಂಗಳೂರು: ಕರ್ನಾಟಕದಲ್ಲಿ ಪ್ರಕರಣವೊಂದ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್​ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಸುಳ್ಯದಲ್ಲಿ (Sullia) ಮೈಕ್ ಅನೌನ್ಸ್ ಮೆಂಟ್​​ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ (Praveen Nettaru murder case).

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನು NIA ನ್ಯಾಯಾಲಯದ ಅಧಿಕಾರಿಗಳು ಅಂಟಿಸಿದ್ದಾರೆ. ಕೋರ್ಟ್​​ ಆದೇಶದ ಪ್ರತಿಯನ್ನು ಅಂಟಿಸಿರುವ ಅಧಿಕಾರಿಗಳು, ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

ಏನಿದು ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದಿತ್ತು. ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ 21 ಅರೋಪಿಗಳನ್ನು ಎನ್​ಐಎ ಅರೆಸ್ಟ್ ಮಾಡಿ, ಆರೋಪಿಗಳ ವಿರುದ್ದ ಚಾರ್ಜ್​ಶೀಟ್ ಸಲ್ಲಿಸಿತ್ತು. ಅದರ ಮುಂದಿನ ಭಾಗವಾಗಿ ಮತ್ತೆ, ಇಬ್ಬರು ಅರೋಪಿಗಳಾದ ತುಫೈಲ್ ಎಂ ಹೆಚ್ ಮತ್ತು ಮಹಮ್ಮದ್ ಜಬೀರ್ ವಿರುದ್ದ ಪೂರಕ ಚಾರ್ಜ್​ರ್ಶೀಟ್​ ಅನ್ನು ಎನ್ ಐ ಎ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ.

ಕೊಲೆ ಮಾಡಿದ್ದ ಅರೋಪಿಗಳ ಪೈಕಿ ಮಹಮ್ಮದ್ ಜಾಬಿರ್ ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಹೇಳಿ ಪ್ರಚೋದನಕಾರಿ ಭಾಷಣವನ್ನೂ ಮಾಡಿದ್ದ ಎಂಬುದು ಎನ್ ಐ ಎ ತನಿಖೆ ವೇಳೆ ಪತ್ತೆಯಾಗಿದೆ. ಒಟ್ಟಾರೆ ಪ್ರವೀಣ್ ನೆಟ್ಟಾರು ಕೊಲೆ ಕೇವಲ ಒಂದು ಕಾರಣಕ್ಕೆ ಆಗಿದ್ದಲ್ಲ, ಬದಲಾಗಿ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ತರುವ ಉದ್ದೇಶಕ್ಕೆ ಪೂರಕವಾಗಿ ಇಟ್ಟಿದ್ದ ಹೆಜ್ಜೆಗುರುತು ಎನ್ನುವುದು ಆತಂಕಕಾರಿ ವಿಷಯವಾಗಿದೆ. ಸದ್ಯ 21 ಅರೋಪಿಗಳ ವಿರುದ್ದ ಈ ಕೇಸ್​ನಲ್ಲಿ ಚಾರ್ಜ್​ರ್ಶಿಟ್ ಸಲ್ಲಿಕೆ ಮಾಡಿರುವ ಎನ್ ಐ ಎ ಹೆಚ್ಚಿನ ತನಿಖೆ ನಡೆಸುತ್ತಿದೆ.

ಮಂಗಳೂರು ಕುರಿತಾದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 28 June 23