AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA Raids PFI SDPI: ಮಂಗಳೂರಿನಲ್ಲಿ NIA Go Back ಪ್ರತಿಭಟನೆ, 60 ಪಿಎಫ್​ಐ ಕಾರ್ಯಕರ್ತರ ಬಂಧನ; ಬೆಂಗಳೂರು, ಚೆನ್ನೈನಲ್ಲಿಯೂ ದಾಳಿ

NIA Raids in Mangaluru: ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಮಾಹಿತಿ ಹರಡುವವರ ಮೇಲೆ ನಾವು ಕಣ್ಣಿದ್ದೇವೆ’ ಎಂದು ಪೊಲೀಸರು ಎಚ್ಚರಿಸಿದ್ದಾರೆ.

NIA Raids PFI SDPI: ಮಂಗಳೂರಿನಲ್ಲಿ NIA Go Back ಪ್ರತಿಭಟನೆ, 60 ಪಿಎಫ್​ಐ ಕಾರ್ಯಕರ್ತರ ಬಂಧನ; ಬೆಂಗಳೂರು, ಚೆನ್ನೈನಲ್ಲಿಯೂ ದಾಳಿ
ಮಂಗಳೂರಿನಲ್ಲಿ ಎನ್​ಐಎ ದಾಳಿ ಖಂಡಿಸಿ ಪಿಎಫ್​ಐ ಕಾರ್ಯಕರ್ತರು ಪ್ರತಿಭಟಿಸಿದರು.
TV9 Web
| Updated By: Digi Tech Desk|

Updated on:Sep 22, 2022 | 9:07 AM

Share

ಮಂಗಳೂರು / ಬೆಂಗಳೂರು / ತಿರುವನಂತಪುರ / ಚೆನ್ನೈ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ನಸುಕಿನಲ್ಲಿ ನಗರ ಸೇರಿದಂತೆ ದೇಶಾದ್ಯಂತ ವಿವಿಧೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಎಸ್​ಡಿಪಿಐ ಕಚೇರಿಗಳು ಹಾಗೂ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯನ್ನು ವಿರೋಧಿಸಿ ಕೇರಳದ ವಿವಿಧೆಡೆ ಮತ್ತು ಮಂಗಳೂರು ನಗರದಲ್ಲಿ ಹಲವರು ‘ಎನ್​ಐಎ ಗೋಬ್ಯಾಕ್’ (NIA Go Back) ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ‘ಗಾಳಿಮಾತಿಗೆ ಕಿವಿಕೊಡಬೇಡಿ, ಶಾಂತಿ ಕಾಪಾಡಿ’ ಎಂದು ಮನವಿ ಮಾಡಿದ್ದಾರೆ.

ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಪ್ರತಿಭಟನಾ ನಿರತರನ್ನು ಚದುರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಮಾಹಿತಿ ಹರಡುವವರ ಮೇಲೆ ನಾವು ಕಣ್ಣಿದ್ದೇವೆ’ ಎಂದು ಎಚ್ಚರಿಸಿದರು. ‘ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ದಾಳಿ ವಿರೋಧಿಸಿ ಕೆಲವರು ಘೋಷಣೆಗಳನ್ನು ಕೂಗುತ್ತಿದ್ದರು. ಪೊಲೀಸರು ಅಥವಾ ಸರ್ಕಾರಿ ಸಂಸ್ಥೆಗಳ ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡಬಾರದು ಎಂದು ತಿಳಿಹೇಳಿದೆವು. ಬಂದರು ಏರಿಯಾ ತುಂಬಾ ಸೂಕ್ಷ್ಮ ಪ್ರದೇಶ. ನಮ್ಮ ಮಾತು ಕೇಳಲಿಲ್ಲ, ಹೀಗಾಗಿ ಅವರನ್ನು ಬಂಧಿಸಬೇಕಾಯಿತು’ ಎಂದು ಹೇಳಿದರು.

‘500 ಜನರು ಸೇರಿದ್ದಾರೆ, ಜೋರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ, ರಸ್ತೆತಡೆ ನಡೆಯುತ್ತಿದೆ ಎಂದೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡಲಾಗುತ್ತಿದೆ. ಜೋಕಟ್ಟೆ ಮತ್ತು ಕಾವೂರು ಬಳಿ ಒಂದಿಷ್ಟು ಜನರು ಸೇರಿದ್ದರು. ನಾವು ಪ್ರತಿಭಟನೆಗೆ ಅವಕಾಶ ಕೊಡೆದೆ ಚದುರಿಸಿದೆವು. ಈಗ ಬಂದರು ಪ್ರದೇಶಕ್ಕೆ ಬಂದಿದ್ದ 60 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದೇವೆ. ಬೆಳಿಗ್ಗೆ 8 ಗಂಟೆಯಿಂದ ಎಲ್ಲ ಮುಖ್ಯ ಅಂಗಡಿ ಮುಗ್ಗಟ್ಟುಗಳು ತೆರೆಯಲಿವೆ. ಇದು ಮುಖ್ಯ ವಾಣಿಜ್ಯ ಸ್ಥಳ. ಹೀಗಾಗಿ ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಚ್ಛಿಸಲ್ಲ. ಎನ್​ಐಎ ಸರ್ಚ್ ಆಪರೇಷನ್ ಎನ್ನುವುದು ಸಾಮಾನ್ಯ ಪ್ರಕ್ರಿಯೆ. ಇದರಲ್ಲಿ ಗೊಂದಲ, ಗಾಳಿಮಾತಿಗೆ ಅವಕಾಶ ಬೇಡ’ ಎಂದು ಅವರು ಮನವಿ ಮಾಡಿದರು.

ಬೆಂಗಳೂರಿನಲ್ಲಿಯೂ ದಾಳಿ

ಬೆಂಗಳೂರಿನ ರಿಚ್​ಮಂಡ್ ಟೌನ್​ನಲ್ಲಿರುವ ಅಪಾರ್ಟ್​ಮೆಂಟ್ ಒಂದರ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದ್ದು, ರಸ್ತೆಯಲ್ಲಿ ಸಂಚರಿಸುವವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಅಪಾರ್ಟ್​ಮೆಂಟ್​ನಲ್ಲಿ ಯಾರು ವಾಸವಿದ್ದರು? ಏಕೆ ದಾಳಿ ನಡೆದಿದೆ ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕೇರಳದಲ್ಲಿ ಎನ್​ಐಎ ದಾಳಿ

ಕೇರಳದ ಮಾಂಜೇರಿ, ಮಲಪ್ಪುರಂ ಜಿಲ್ಲಾ ಪಿಎಫ್​ಐ ಘಟಕಗಳ ಅಧ್ಯಕ್ಷ ಒ.ಎಂ.ಎ.ಸಲ್ಮಾನ್ ಮತ್ತು ಇತರರ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಎನ್​ಐಎ ದಾಳಿ ವಿರೋಧಿಸಿ ಪಿಎಫ್​ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭಯೋತ್ಪಾದಕರಿಗೆ ಹಣದ ನೆರವು ಒದಗಿಸುವುದು, ತರಬೇತಿ ಶಿಬಿರ ಆಯೋಜನೆ ಮತ್ತು ಸಾರ್ವಜನಿಕರನ್ನು ಉಗ್ರಗಾಮಿ ಸಂಘಟನೆಗಳಿಗೆ ಸೇರ್ಪಡೆಗೊಳ್ಳಲು ಮನವೊಲಿಸುವುದು ಸೇರಿದಂತೆ ಹಲವು ಆಯಾಮದಲ್ಲಿ ತನಿಖೆ ನಡೆಯುತ್ತಿದೆ.

ತಮಿಳುನಾಡಿನಲ್ಲಿಯೂ ಎನ್​ಐಎ ದಾಳಿ

ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮ್​ನದ್, ದಿಂಡಿಗಲ್, ತೇಣಿ ಮತ್ತು ತೆನ್​ಕಾಸಿ ನಗರಗಳಲ್ಲಿ ಎನ್​ಐಎ ದಾಳಿ ನಡೆದಿದೆ. ಚೆನ್ನೈನ ಪುರಸವಕ್ಕಮ್​ ಪ್ರದೇಶದಲ್ಲಿರುವ ಪಿಎಫ್​ಐ ರಾಜ್ಯ ಘಟಕದ ಮುಖ್ಯ ಕಚೇರಿಗೂ ಅಧಿಕಾರಿಗಳು ಪ್ರವೇಶಿಸಿ ತಪಾಸಣೆ ನಡೆಸುತ್ತಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ: ಎನ್​ಐಎ ತನಿಖೆ ಚುರುಕು

ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರ ರಾತ್ರಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಕಾರ್ಯಕರ್ತರ ತೀವ್ರ ಒತ್ತಾಯದ ನಂತರ ಪ್ರಕರಣದ ತನಿಖೆಯನ್ನು ಎನ್ಐಎ ಗೆ ವಹಿಸಲಾಯಿತು. ತನಿಖೆ ಆರಂಭಿಸಿರುವ ಅಧಿಕಾರಿಗಳು ಸೆ 6ರಂದು ಸುಳ್ಯ ಹಾಗೂ ಪುತ್ತೂರು ತಾಲ್ಲೂಕಿನ 32 ಕಡೆಗಳಲ್ಲಿ ಮನೆಗಳು ಹಾಗು ಇತರೆ ಕಟ್ಟಡಗಳ ಮೇಲೆ ದಾಳಿ ನಡೆಸಿದ್ದರು. ಇದೀಗ ಬಂಧಿತರಾಗಿರುವ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕಾರ ನೀಡಿದವರ ವಿಚಾರಣೆಯನ್ನೂ ಎನ್​ಐಎ ನಡೆಸುತ್ತಿದೆ.

Published On - 8:08 am, Thu, 22 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!