AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ತಿಕಟ್ಟೆ: ಇದಿನಬ್ಬ ಪುತ್ರನ ಮನೆ ಮೇಲೆ ಎನ್​ಐಎ ದಾಳಿ

ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಮೇಲೆ ಎನ್​ಐಎ ಅಧಿಕಾರಿಗಳಿಗೆ ಅನುಮಾನವಿತ್ತು. ಇದೀಗ ಮತ್ತೆ ಅವರ ಮನೆ ಮೇಲೆ ದಾಳಿ‌ ನಡೆಸಿರುವ ಎನ್​ಐಎ ಸಿಬ್ಬಂದಿ ದೀಪ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮಾಸ್ತಿಕಟ್ಟೆ: ಇದಿನಬ್ಬ ಪುತ್ರನ ಮನೆ ಮೇಲೆ ಎನ್​ಐಎ ದಾಳಿ
ಮಂಗಳೂರು ಉಳ್ಳಾಲದಲ್ಲಿರುವ ದಿವಂಗತ ಶಾಸಕ ಬಿ.ಎಂ.ಇದಿನಬ್ಬ ಅವರ ಮನೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 03, 2022 | 11:00 PM

Share

ಮಂಗಳೂರು: ನಗರ ಹೊರವಲಯ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ದಿವಂಗತ ಬಿ.ಎಂ.ಇದಿನಬ್ಬ ಪುತ್ರನ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದರು. ಇದಿನಬ್ಬ ಪುತ್ರ ಬಿ.ಎಂ.ಭಾಷಾ ಮತ್ತು ಸೊಸೆ ದೀಪ್ತಿ ಲಿಯಾಸ್ ಮರಿಯಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕಳೆದ ಆಗಸ್ಟ್ 4ರಂದು ಎನ್​ಐಎ ಅಧಿಕಾರಿಗಳು ಇದೇ ಮನೆಯ ಮೇಲೆ ದಾಳಿ ನಡೆಸಿ, ಬಾಷಾ ಕಿರಿಯ ಪುತ್ರ ಅಬ್ದುಲ್ ರೆಹಮಾನ್​ನನ್ನು ಬಂಧಿಸಿದ್ದರು. ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಮೇಲೆ ಎನ್​ಐಎ ಅಧಿಕಾರಿಗಳಿಗೆ ಅನುಮಾನವಿತ್ತು. ಇದೀಗ ಮತ್ತೆ ಅವರ ಮನೆ ಮೇಲೆ ದಾಳಿ‌ ನಡೆಸಿರುವ ಎನ್​ಐಎ ಸಿಬ್ಬಂದಿ ದೀಪ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಉಳ್ಳಾಲದ ಮನೆಯಿಂದ ದೀಪ್ತಿ ಅವರನ್ನು ಟೆಂಪೊ ಟ್ರಾವೆಲರ್ ವಾಹನದಲ್ಲಿ ಕರೆದುಕೊಂಡು ಮಂಗಳೂರಿನ ವೆನ್​ಲಾಕ್ ಜಿಲ್ಲಾಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ, ನೇರವಾಗಿ ದೆಹಲಿಗೆ ಕರೆದೊಯ್ಯಲಿದೆ. ಈ ಹಿಂದೆ ಇದಿನಬ್ಬ ಮನೆಯ ಮೇಲೆ ಎನ್​ಐಎ ದಾಳಿ ಮಾಡಿದ್ದಾಗ ಅವರ ಮನೆಯಲ್ಲಿ ಮಗು ಸಣ್ಣದಿರುವ ಕಾರಣ ಬಂಧಿಸಿರಲಿಲ್ಲ.

ಏನಿದು ಪ್ರಕರಣ? ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಬಾಷಾನಿಗೆ ಐಸಿಸ್ ಉಗ್ರರ ಜೊತೆ ನಂಟಿದೆ ಎಂಬ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಎನ್ಐಎ ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದರು. ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳು ಅಜ್ಮಲ್ ಕುಟುಂಬ ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿತ್ತು. 2 ವರ್ಷಗಳ ಹಿಂದೆ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು. ಇವರ ಪೈಕಿ ಅಜ್ಮಲ್ ಕುಟುಂಬವೂ ಇರಬಹುದು ಎಂದು ಶಂಕಿಸಲಾಗಿತ್ತು. ಅಜ್ಮಲ್​ಳನ್ನು ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಅವರೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು.

ಈಕೆಯ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗುವುದಾಗಿ ಹೋದವರು ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಶ್ರೀಲಂಕಾದಿಂದ ಮಸ್ಕತ್ ಹಾಗೂ ಕತಾರ್​ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂಬ ಮಾಹಿತಿ‌ ಇತ್ತು. ವೈದ್ಯರಾಗಿರುವ ಸಿಯಾಝ್‍ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ ತೆರಳಿದ್ದ. ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ಆರಂಭಿಸಿತ್ತು. ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಬಾಷಾ ಮನೆಯ ಮೇಲೆ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ.

ದೀಪ್ತಿ ಯಾರು.. ಆಕೆ ಮರಿಯಂ ಆಗಿದ್ದು ಹೇಗೆ? ದೀಪ್ತಿ ಕೇರಳದ ಕಾಸರಗೋಡು ಜಿಲ್ಲೆಯವರು. ಮಂಗಳೂರಿಗೆ ಮೆಡಿಕಲ್ ಓದಲು ಬಂದಿದ್ದಾಗ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಪುತ್ರ ಬಿ.ಎಂ.ಬಾಷಾರ ಎರಡನೇ ಮಗ ಅನಾಸ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗುವುದಕ್ಕೂ ಮೊದಲು ಹಿಂದು ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತಗೊಂಡಿದ್ದರು.

ವರದಿ: ಪೃಥ್ವಿರಾಜ್ ಬೊಮ್ಮನಕೆರೆ

ಇದನ್ನೂ ಓದಿ: ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟು? ಬಿಎಂ ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ ಇದನ್ನೂ ಓದಿ: ಕರಾವಳಿಯಲ್ಲಿ ಶಾಶ್ವತ ಎನ್​ಐಎ ಕಚೇರಿ ಸ್ಥಾಪಿಸುವಂತೆ ಭಜರಂಗದಳ ಆಗ್ರಹ

Published On - 5:03 pm, Mon, 3 January 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ